27.7 C
Mumbai
July 23, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.







ಚಿತ್ರ ವರದಿ : ಧನಂಜಯ ಪೂಜಾರಿ

ಬಿಲ್ಲವರ ಅಸೋಸಿಯೇಷನ್, ಮುಂಬೈ
ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.
ಬಿಲ್ಲವರ ಅಸೋಸಿಯೇಷನ್ , ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ರವಿವಾರ ದಿನಾಂಕ 17.10.2023 ರಂದು ಸಂಜೆ 3.00 ರಿಂದ ರಾತ್ರಿ 7.00 ರ ತನಕ ನವರಾತ್ರಿ ಹಬದ್ದ ನಿಮಿತ್ತ ಶಾರದಾ ಪೂಜೆಯು ಬಹಳ ವಿಜೃಂಭಣೆಯೊಂದಿಗೆ ನೆರವೇರಿತು. ಪ್ರಾರಂಭದಲ್ಲಿ ಪುರೋಹಿತ ಐತಪ್ಪ ಸುವರ್ಣರು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಮಂಟಪವನ್ನು ವಿವಿಧ ಹೂ ಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಗುರು ಭಕ್ತರಿಂದ ಸಂಜೇ 4 ರಿಂದ ರಾತ್ರಿ 7 ರ ತನಕ ವಿಶೇಷ ಭಜನಾ ಕಾರ್ಯಕ್ರಮ ಜರಗಿತು. ತದನಂತರ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಿಸಲಾಯಿತು. ತದನಂತರ ಮಹಿಳಾ ವಿಭಾಗ ಹಾಗು ಯುವ ವಿಭಾಗದ ವತಿಯಿಂದ ದಾಂಡಿಯಾ ರಾಸ್ ನ್ರಿತ್ಯ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀ ಚಂದ್ರಹಾಸ್ ಪಾಲನ್ , ಉಪ ಕಾರ್ಯಾಧ್ಯಕ್ಷರಾದ ಶ್ರೀ ಶ್ರೀಧರ್ ಅಮೀನ್ ಹಾಗು ಶ್ರೀ ಪುರಂಧರ್ ಪೂಜಾರಿ, ಸಹ ಕಾರ್ಯದರ್ಶಿ ಶ್ರೀ ಕೃಷ್ಣ ಪೂಜಾರಿ, ಗೌರವ ಕೋಶಾಧಿಕಾರಿ ಶ್ರೀ ಆನಂದ ಪೂಜಾರಿ, ಸಹ ಕೋಶಾಧಿಕಾರಿ ಶ್ರೀ ಜಗನಾಥ್ ಸನಿಲ್, ಶ್ರೀ ಮಂಜಪ್ಪ ಪೂಜಾರಿ, ಶ್ರೀ ಈಶ್ವರ್ ಕೋಟಿಯನ್, ಶ್ರೀ ತಿಲಕ್ ಸನಿಲ್, ಶ್ರೀ ಜಗದೀಶ್ ಕೋಟಿಯನ್, ಶ್ರೀ ಸೋಮನಾಥ್ ಪೂಜಾರಿ , ಶ್ರೀ ಅನ್ನು ಪೂಜಾರಿ ಇತರ ಸಮಿತಿ ಸದ್ಯಸರು,ಸ್ಥಳೀಯ ಸದ್ಯಸ್ಯರು,ಮಹಿಳಾ ವಿಭಾಗದ ಸದಸ್ಯರು,ಹಾಗು ಯುವಅಭುದಾಯ ಉಪ ಸಮಿತಿಯ ಸದ್ಯಸರುಗಳು ಕಾರ್ಯಕ್ರಮ ಯಶಶ್ವಿಯಾಗಲು ಸಹಕರಿಸಿದರು.



Related posts

ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಆರೋಪ ಪಟ್ಟಿ ಸಲ್ಲಿಕೆ

Mumbai News Desk

ಮುಂಬೈ : ನವೆಂಬರ್ 14–15 ರಂದು ಪ್ರಮುಖ ನೀರಿನ ಪೈಪ್‌ಲೈನ್ ನಿರ್ವಹಣೆ; ಹಲವು ಪ್ರದೇಶಗಳಲ್ಲಿ 22 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಡ್ಕೂರು : ನಾನಿಲ್ತಾರ್ನಲ್ಲಿ  ಸ್ನೇಹ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಡಿಸೆಂಬರ್ 7 ರಿಂದ ಥಾಣೆಯ ಘೋಡ್‌ಬಂದರ್ ರಸ್ತೆ 24 ಗಂಟೆಗಳ ಕಾಲ ಮುಚ್ಚಲಾಗುವುದು; ಪರ್ಯಾಯ ಮಾರ್ಗಗಳು ಮತ್ತು ತಿರುವುಗಳನ್ನು ಪರಿಶೀಲಿಸಿ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: ಸತತ ನಾಲ್ಕನೇ ವರ್ಷದ ರಕ್ತದಾನ ಶಿಬಿರದಲ್ಲಿ 182 ಯುನಿಟ್ ರಕ್ತ ಸಂಗ್ರಹದ ದಾಖಲೆ

Mumbai News Desk

ಮುಂಬೈ ನಗರದಲ್ಲಿ ಭಾರೀ ಮಳೆ: ಕರಾವಳಿ ಪ್ರದೇಶಗಳಿಗೆ ತೆರಳದಂತೆ, ಒಳಾಂಗಣದಲ್ಲಿಯೇ ಇರುವಂತೆ ಪೊಲೀಸರು ನಾಗರಿಕರಿಗೆ ಮನವಿ

Mumbai News Desk