34 C
Mumbai
March 6, 2026
Mumbai News Kannada
ಪ್ರಕಟಣೆ

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.





ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅಕ್ಟೋಬರ್ 28 ಮತ್ತು 29 ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದ್ದು, ಬಂಟ ಸಮುದಾಯದ ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ  ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಶುಭಕೋರಲಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು   ಪಲಿಮಾರ್ ಮಠದ  ವಿದ್ಯಾಧೀಶ ತೀರ್ಥ ಸ್ವಾಮೀಜಿ ಶ್ರೀಪಾದರು. ಪುತ್ತಿಗೆ ಸುಗುಣೇಂದ್ರ ತೀರ್ಥ  ಶ್ರೀಪಾದರು. ಮತ್ತು ಬಂಟ ಸಮುದಾಯದ ಸ್ವಾಮೀಜಿಗಳನ್ನು ಕಾರ್ಯಕ್ರಮಕ್ಕೆ ಬರುವಂತೆ ಆಮಂತ್ರಿಸಿದ್ದಾರೆ.  ಒಕ್ಕೂಟದಿಂದ ದಿನಾಂಕ 28.10.2023 ಮತ್ತು 29.10.2023 ರಂದು ಉಡುಪಿಯಲ್ಲಿ  ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ  ಕಾರ್ಯಕ್ರಮ ಜರಗಲಿದ್ದು, ಸಮಾರಂಭದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಬಂಟ ಸಮುದಾಯ ಒಂದೇ ಸೂರಿನಡಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜಕಾರಣಿಗಳು, ಸಿನಿಮಾ ತಾರೆಯರು ಹೀಗೆ ಎಲ್ಲಾ ವರ್ಗದ ಜನರು ಒಂದೆಡೆ ಸೇರುವ ಅಪರೂಪದ ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ದತ್ತ ಸಂಸ್ಥಾನ ಒಡಿಯೂರಿನ ಗುರು ದೇವಾನಂದ ಸ್ವಾಮೀಜಿ, ಬಾರ್ಕೂರು ಮಹಾ ಸಂಸ್ಥಾನ ಭಾರ್ಗವ ಬೀಡುವಿನ ವಿದ್ಯಾವಚಾಸ್ಪತಿ ಶ್ರೀ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ,  ಶ್ರೀ ಕ್ಷೇತ್ರ ಕೇಮಾರ್ ಸಂದೀಪನಿಯ ಶ್ರೀ ಈಶ ವಿಠಲದಾಸ  ಸ್ವಾಮೀಜಿ .

ಗುರುಪುರ ಶ್ರೀ ವಜ್ರದೇಹಿ ಮಠದ ಸ್ವಾಮೀಜಿ ಶ್ರೀ ರಾಜಶೇಖಾರನಂದ ಸ್ವಾಮೀಜಿ,  ಭಾಗವಹಿಸಲಿದ್ದಾರೆ. ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮಂಗಳೂರು.   ಅಧ್ಯಕ್ಷರು ಐಕಳ  ಹರೀಶ್ ಶೆಟ್ಟಿ. ಉಪಾಧ್ಯಕ್ಷರು ಕರ್ನಿರೆ ವಿಶ್ವನಾಥ್ ಶೆಟ್ಟಿ.  .ಗೌ. ಕಾರ್ಯದರ್ಶಿ ಜಯಕರಶೆಟ್ಟಿಇಂದ್ರಾಳಿ. ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ .ಜೊತೆ- ಕಾರ್ಯದರ್ಶಿ ಹಾಗೂ ಸಂಚಾಲಕರು ಸಾಂಸ್ಕೃತಿಕ ಸಮಿತಿಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ.  ಸಂಚಾಲಕರು ಕ್ರೀಡಾ ಸಮಿತಿಗಿರೀಶ್ ಶೆಟ್ಟಿ ತೆಳ್ಳರ್  ತಿಳಿಸಿದ್ದಾರೆ.



Related posts

ಶ್ರೀ ಬಾಲಾಜಿ ಸನ್ನಿಧಿ ಪಲಿಮಾರ್ ಮಠ ಜ. 26ರಂದು ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಹೆಜಮಾಡಿ : ಜ. 25ಕ್ಕೆ ವಾರ್ಷಿಕ ಬಂಡಿ ನೇಮೋತ್ಸವದ

Mumbai News Desk

ವಜ್ರ ಮಹೋತ್ಸವದ ಸಂಭ್ರಮದಲ್ಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ,

Mumbai News Desk

ಮಿಸ್ಟರ್/ಮಿಸ್/ಮಿಸೆಸ್ ಕರ್ನಾಟಕ ಸ್ಟೈಲ್ ಐಕಾನ್‌-2025: ಗ್ರ್ಯಾಂಡ್ ಫಿನಾಲೆ ಡಿ. 18 ರಂದು ನಿಶಿತಾ ಸೂರ್ಯಕಾಂತ್ ಸುವರ್ಣ ಆಯೋಜನೆಯಲ್ಲಿ ‘ಸೀಸನ್‌ 6’ ರ ಅಂತಿಮ ಹಂತ

Mumbai News Desk

ದಶಂಬರ 20ರಂದು ಒಡಿಯೂರು ಶ್ರೀ ಸಂಸ್ಥಾನದಲ್ಲಿಶ್ರೀ ದತ್ತ ಜಯಂತಿ ಮಹೋತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk