September 6, 2026
Mumbai News Kannada
ಪ್ರಕಟಣೆ

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.





ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅಕ್ಟೋಬರ್ 28 ಮತ್ತು 29 ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದ್ದು, ಬಂಟ ಸಮುದಾಯದ ಸ್ವಾಮೀಜಿಗಳು ಒಂದೇ ವೇದಿಕೆಯಲ್ಲಿ  ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಶುಭಕೋರಲಿದ್ದಾರೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು   ಪಲಿಮಾರ್ ಮಠದ  ವಿದ್ಯಾಧೀಶ ತೀರ್ಥ ಸ್ವಾಮೀಜಿ ಶ್ರೀಪಾದರು. ಪುತ್ತಿಗೆ ಸುಗುಣೇಂದ್ರ ತೀರ್ಥ  ಶ್ರೀಪಾದರು. ಮತ್ತು ಬಂಟ ಸಮುದಾಯದ ಸ್ವಾಮೀಜಿಗಳನ್ನು ಕಾರ್ಯಕ್ರಮಕ್ಕೆ ಬರುವಂತೆ ಆಮಂತ್ರಿಸಿದ್ದಾರೆ.  ಒಕ್ಕೂಟದಿಂದ ದಿನಾಂಕ 28.10.2023 ಮತ್ತು 29.10.2023 ರಂದು ಉಡುಪಿಯಲ್ಲಿ  ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ  ಕಾರ್ಯಕ್ರಮ ಜರಗಲಿದ್ದು, ಸಮಾರಂಭದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಬಂಟ ಸಮುದಾಯ ಒಂದೇ ಸೂರಿನಡಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜಕಾರಣಿಗಳು, ಸಿನಿಮಾ ತಾರೆಯರು ಹೀಗೆ ಎಲ್ಲಾ ವರ್ಗದ ಜನರು ಒಂದೆಡೆ ಸೇರುವ ಅಪರೂಪದ ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ದತ್ತ ಸಂಸ್ಥಾನ ಒಡಿಯೂರಿನ ಗುರು ದೇವಾನಂದ ಸ್ವಾಮೀಜಿ, ಬಾರ್ಕೂರು ಮಹಾ ಸಂಸ್ಥಾನ ಭಾರ್ಗವ ಬೀಡುವಿನ ವಿದ್ಯಾವಚಾಸ್ಪತಿ ಶ್ರೀ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ,  ಶ್ರೀ ಕ್ಷೇತ್ರ ಕೇಮಾರ್ ಸಂದೀಪನಿಯ ಶ್ರೀ ಈಶ ವಿಠಲದಾಸ  ಸ್ವಾಮೀಜಿ .

ಗುರುಪುರ ಶ್ರೀ ವಜ್ರದೇಹಿ ಮಠದ ಸ್ವಾಮೀಜಿ ಶ್ರೀ ರಾಜಶೇಖಾರನಂದ ಸ್ವಾಮೀಜಿ,  ಭಾಗವಹಿಸಲಿದ್ದಾರೆ. ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ಮಂಗಳೂರು.   ಅಧ್ಯಕ್ಷರು ಐಕಳ  ಹರೀಶ್ ಶೆಟ್ಟಿ. ಉಪಾಧ್ಯಕ್ಷರು ಕರ್ನಿರೆ ವಿಶ್ವನಾಥ್ ಶೆಟ್ಟಿ.  .ಗೌ. ಕಾರ್ಯದರ್ಶಿ ಜಯಕರಶೆಟ್ಟಿಇಂದ್ರಾಳಿ. ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ .ಜೊತೆ- ಕಾರ್ಯದರ್ಶಿ ಹಾಗೂ ಸಂಚಾಲಕರು ಸಾಂಸ್ಕೃತಿಕ ಸಮಿತಿಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ.  ಸಂಚಾಲಕರು ಕ್ರೀಡಾ ಸಮಿತಿಗಿರೀಶ್ ಶೆಟ್ಟಿ ತೆಳ್ಳರ್  ತಿಳಿಸಿದ್ದಾರೆ.



Related posts

ಬೊಯಿಸರ್ : ಜುಲೈ ತಾ.10 ರಂದು ಸ್ವಾಮಿ ನಿತ್ಯನಂದ ಮಂದಿರದಲ್ಲಿ ಗುರುಪೂರ್ಣಿಮೆ ಆಚರಣೆ

Mumbai News Desk

ದಹಿಸರ್‌ ಶ್ರೀ ದುರ್ಗಾಪರಮೇಶ್ವರಿ ಶನೈಶ್ವರ ದೇವಸ್ಥಾನ: ಆ.17ರಂದು ನಾಗಪಂಚಮಿ ಉತ್ಸವ

Mumbai News Desk

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ : ಸೆ. 22ರಿಂದ ಅ. 2ರ ತನಕ 61ನೇ ವರ್ಷದ ನವರಾತ್ರಿ ಉತ್ಸವ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ಫೆ. 26ಕ್ಕೆ ಮಹಾಶಿವರಾತ್ರಿ ಉತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಮೇ 18ರಂದು ಸಾಮೂಹಿಕ ಅಶ್ಲೇಷ ಬಲಿ ಪೂಜೆ

Mumbai News Desk