27.7 C
Mumbai
July 23, 2026
Mumbai News Kannada
ಕ್ರೀಡೆ

ಎನ್ ಕೆ ಇ ಎಸ್ ಪ್ರೊ ಕಬಡ್ಡಿ ಸೀಸನ್ 1 – ಬಹುಮಾನ ವಿತರಣೆ







ಎನ್.ಕೆ.ಇ.ಎಸ್ ಜೂನಿಯರ್ ಕಾಲೇಜ್ ಆಶ್ರಯದಲ್ಲಿ ಅ.16 ರಿಂದ ಚೆಂಬೂರು ಕುರ್ಲಾ ಸಾಯನ್, ಮಾಟುಂಗಾ, ದಾದರ್, ಹಾಗೂ ಪೆರೇಲ್ ಪರಿಸರದ 17 ವರ್ಷದ ಕೆಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಎನ್.ಕೆ ಇ.ಎಸ್ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ. ಎನ್ ಕೆ ಇ ಎಸ್ ಪ್ರೊ ಕಬಡ್ಡಿ ಸೀಸನ್ ಒಂದರ ಫೈನಲ್ ಪಂದ್ಯವು ಹಾಗು ಬಹುಮಾನ ವಿತರಣಾ ಕಾರ್ಯಕ್ರಮವು ಅಕ್ಟೋಬರ್ 18ರಂದು ಜರಗಿತು. ಫೈನಲ್ ಪಂದ್ಯಾಟದಲ್ಲಿ ಪ್ರಥಮ ಬಹುಮಾನವನ್ನು ಸನೆ ಗುರೂಜಿ ವಿದ್ಯಾಲಯ ದಾದರ್, ಇಲ್ಲಿಯ ವಿದ್ಯಾರ್ಥಿಗಳು ಪಡೆದುಕೊಂಡರೆ, ದ್ವಿತೀಯ ಬಹುಮಾನವನ್ನು ನ್ಯೂ ಸಯನ್ ಮುನ್ಸಿಪಾಲಿಟಿ ಶಾಲೆ.ಸಯನ್ ನ ವಿದ್ಯಾರ್ಥಿ ವಿದ್ಯಾರ್ಥಿಗಳು ಪಡೆದುಕೊಂಡರು. ಹಾಗೂ ತೃತೀಯ ಬಹುಮಾನವನ್ನು ಚಂಬೂರ್ ಕರ್ನಾಟಕ ಹೈಸ್ಕೂಲ್ ವಿದ್ಯಾರ್ಥಿಗಳು ಪಡೆದುಕೊಂಡರು. ಬೆಸ್ಟ್ ರೈಡರ್ ಸಮರ್ಥ್ ಕಸೂರ್ಡೆ ಸಾನೇ ಗುರೂಜಿ ವಿದ್ಯಾಲಯ ದಾದರ್. ಬೆಸ್ಟ್ ಡಿಫೆನ್ಸ್ ತನಿಷ್ ಪೂಜಾರಿ ಚಂಬೂರ್ ಕರ್ನಾಟಕ ಹೈ ಸ್ಕೂಲ್ ಚೆಂಬೂರು ಅವರು ಪಡೆದುಕೊಂಡರು.


ಸುಮಾರು 45ಕ್ಕಿಂತಲೂ ಹೆಚ್ಚಿನ ಶಾಲಾ ತಂಡವು ಸ್ಪರ್ಧೆಯಲ್ಲಿ ಭಾಗವಹಿಸಿದರು. ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉದ್ಯಮಿ ಸಮಾಜಸೇವಕ ಸಚಿಂದ್ರ ಅಯಿರೆ ವಿಜಯ್ ತಂಡಗಳಿಗೆ ಬಾರಿತೋಷಕವನ್ನು ಹಾಗೂ ನಗದು ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು.


. ಮುಖ್ಯ ಉಪಾಧ್ಯಾಯನಿ ಉಮಾಮಹೇಶ್ವರಿ ಅವರು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಶಾಲೆ ಅಧ್ಯಕ್ಷ ಪಾರ್ಥಸಾರಥಿ ನಾಯಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶಾಲಾ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ಪಠ್ಯೇತರ ಕಾರ್ಯ ಚಟುವಟಿಕೆಗಳ ಹಾಗೂ ಕ್ರೀಡೆಗಳಿಗೆ ನೀಡುತ್ತಿರುವ ಪ್ರೋತ್ಸಾಹ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ವಿಶ್ವಸ್ಥರಾದ ಅನಂತ್ ಬನವಾಸಿ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಪದ್ಮಜಾ ಬನವಾಸಿ, ಮತ್ತು ಶಶಿಕಾಂತ್ ಜೋಶಿ, ಜೂನಿಯರ್ ಕಾಲೇಜಿನ ಕೋಆರ್ಡಿನೇಟರ್ ರತೀಶ್ ಕುಕ್ಯನ್, ಮೊದಲಾದಾರ ಉಪಸ್ಥಿತರಿದ್ದರು. ಸಂಗೀತ ಸಿಂಗ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.


ಪ್ರಾರಂಭದಲ್ಲಿ ಶಾಲೆಯ ಸಂಗೀತ ಶಿಕ್ಷಕರಾದ ಸಚಿನ್ ಮೋರೆ ಅವರ ಪ್ರಾರ್ಥನೆಯೊಂದಿಗೆ ಬಹುಮಾನ ವಿತರಣಾ ಸಮಾರಂಭ ಪ್ರಾರಂಭಗೊಂಡು.
ಚಂದ್ರಕಾಂತ್ ಶಿಂದೆ ಅವರು ವಂದನಾರ್ಪಣೆ ಮಾಡಿದರು.



Related posts

ಕುಂದರ್ ಮೂಲಸ್ಥಾನ ಸಭಾ ಮುಂಬಯಿ, ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2025

Mumbai News Desk

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ವಾರ್ಷಿಕ ಮಹಾಸಭೆ : ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಿ – ಲವ ಕರ್ಕೇರ.

Mumbai News Desk

ಡಬ್ಲ್ಯೂ ಐ ಎಫ್ ಎ ಅಂತರ್ ಜಿಲ್ಲಾ ಸಬ್ ಜ್ಯೂನಿಯರ್ ಫುಟ್ಬಾಲ್ ಪಂದ್ಯಾಟ, ಸಮರ್ಥ್ ರೈ ಅವರ ಅದ್ಬುತ ಆಟದಿಂದ ಮುಂಬಯಿ ತಂಡಕ್ಕೆ ಜಯ.

Mumbai News Desk

ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾಗೆ ಮಹಾಮೋಸ – ಅನ್ಯಾಯದ ತೀರ್ಪಿಗೆ ಯಶಸ್ವಿ ಜೈಸ್ವಾಲ್ ಬಲಿ.

Mumbai News Desk

ಮಲಾಡ್ ಕನ್ನಡ ಸಂಘ ಒಳಾಂಗಣ ಕ್ರೀಡೆ ಸ್ಪರ್ಧೆ.

Mumbai News Desk

ಭಾಯಂದರ್, ರೈ ಸುಮತಿ ಎಜುಕೇಷನಲ್ ಟ್ರಸ್ಟ್ ನ ಸೇಂಟ್ ಆಗ್ನೆಸ್ ಆಂಗ್ಲ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

Mumbai News Desk