September 7, 2026
Mumbai News Kannada
ಮಹಾರಾಷ್ಟ್ರ

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.





ಚಿತ್ರ, ವರದಿ : ಸತೀಶ್ ಶೆಟ್ಟಿ.

ಶ್ರೀ ದುರ್ಗಾ ಕಾಳಿ ಮಂದಿರ, ಸ್ವರ್ಗೀಯ ಪರಮ ಪೂಜ್ಯ ಶ್ರೀ ಬಾಲಗಂಗಾಧರ್ ಸ್ವಾಮೀಜಿಯವರ ಆಶ್ರಮದಲ್ಲಿ ನವರಾತ್ರಿ ಉತ್ಸವ ಜರಗುತ್ತಿದ್ದು, ಅಕ್ಟೋಬರ್ 15 ರ ಮಂಗಳವಾರದಿಂದ ನವರಾತ್ರಿ ಉತ್ಸವವು ಆರಂಭಗೊಂಡಿದ್ದು, ಪ್ರತಿದಿನ ನೂರಾರು ಭಕ್ತರು ಬಂದು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಪುನೀತರಾಗುತ್ತಿದ್ದಾರೆ.

ಅಕ್ಟೋಬರ್ 15ರ ಮಂಗಳವಾರ ಬೆಳಿಗ್ಗೆ ಗಣ ಹೋಮ, ಪಂಚಾಮೃತ ಅಭಿಷೇಕ, ಕಳಸ ಪ್ರತಿಷ್ಠಾಪನೆ, ಭಜನೆ ಮಂಗಳಾರತಿ ನಡೆದು ತೀರ್ಥ ಪ್ರಸಾದ ವಿತರಣೆ ನಡೆಯಿತು. ಅಕ್ಟೋಬರ್ 20 ಶುಕ್ರವಾರದಂದು ಬೆಳಿಗ್ಗೆ ದುರ್ಗಾ ಹೋಮ, ಮಂಗಳಾರತಿ ನಡೆದು ಸಂಜೆ ಶ್ರೀ ಸ್ವಾಮೀಜಿಯ ಪಾದಪೂಜೆ ನಡೆದು ಭಜನೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಅಕ್ಟೋಬರ್ 21 ರ ಶನಿವಾರದಂದು ಬೆಳಿಗ್ಗೆ ಸತ್ಯನಾರಾಯಣ ಮಹಾಪೂಜೆ ನಂತರ ಶ್ರೀ ಶನೇಶ್ವರ ಭಕ್ತವೃಂದ ಮಿತ್ರ ಮಂಡಳಿ ಬಾಂಡುಪ್ ಇವರಿಂದ ಶನಿ ಗ್ರಂಥ ಪಾರಾಯಣ, ರಾತ್ರಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಅಕ್ಟೋಬರ್ 24 ರ ದಸರಾದಂದು ಬೆಳಿಗ್ಗೆ ಅಲಂಕಾರ ಪೂಜೆ ಮಹಾಮಂಗಳಾರತಿಯ ನಂತರ ಮಾತ ಅನ್ನಪೂರ್ಣೇಶ್ವರಿ ಮಾತಾಜಿ ಆಶೀರ್ವಾದ ಅನುಸಾರ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಪರಿಸರದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಮಂದಿರದ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಕರ್ನಾಟಕ ಮಹಾಮಂಡಲ ಮೀರಾ ಭಾಯಂದರ್ ನ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ , ಹರಸಿನ ಕುಂಕುಮ ಕಾರ್ಯಕ್ರಮ 

Mumbai News Desk

ಮಹಾರಾಷ್ಟ್ರ : ಹಲಾಲ್ ಪ್ರಾಮಾಣೀಕರಣವನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪ್ರಸ್ತಾವನೆ

Mumbai News Desk

ಮಹಾರಾಷ್ಟ್ರ: ಸಚಿವ ಸ್ಥಾನಕ್ಕೆ ಮಾಣಿಕ್ರಾವ್ ಕೊಕಾಟೆ ರಾಜೀನಾಮೆ!

Mumbai News Desk

ಮಹಾರಾಷ್ಟ್ರ : ನಗರ ಸಂಸ್ಥೆಗಳ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಮಹಾಯುತಿ

Mumbai News Desk

ನಾಶಿಕ್ ಸಿಟಿ ವಲಯ ರೋಟರಿ ಕ್ಲಬ್ ಅಧ್ಯಕ್ಷರಾಗಿ ಬಾಲಚಂದ್ರ ಕೋಟ್ಯಾನ್ ಆಯ್ಕೆ.

Mumbai News Desk

ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ 25 ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

Mumbai News Desk