30.9 C
Mumbai
June 8, 2026
Mumbai News Kannada
ಮಹಾರಾಷ್ಟ್ರ

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.





ಚಿತ್ರ, ವರದಿ : ಸತೀಶ್ ಶೆಟ್ಟಿ.

ಶ್ರೀ ದುರ್ಗಾ ಕಾಳಿ ಮಂದಿರ, ಸ್ವರ್ಗೀಯ ಪರಮ ಪೂಜ್ಯ ಶ್ರೀ ಬಾಲಗಂಗಾಧರ್ ಸ್ವಾಮೀಜಿಯವರ ಆಶ್ರಮದಲ್ಲಿ ನವರಾತ್ರಿ ಉತ್ಸವ ಜರಗುತ್ತಿದ್ದು, ಅಕ್ಟೋಬರ್ 15 ರ ಮಂಗಳವಾರದಿಂದ ನವರಾತ್ರಿ ಉತ್ಸವವು ಆರಂಭಗೊಂಡಿದ್ದು, ಪ್ರತಿದಿನ ನೂರಾರು ಭಕ್ತರು ಬಂದು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಪುನೀತರಾಗುತ್ತಿದ್ದಾರೆ.

ಅಕ್ಟೋಬರ್ 15ರ ಮಂಗಳವಾರ ಬೆಳಿಗ್ಗೆ ಗಣ ಹೋಮ, ಪಂಚಾಮೃತ ಅಭಿಷೇಕ, ಕಳಸ ಪ್ರತಿಷ್ಠಾಪನೆ, ಭಜನೆ ಮಂಗಳಾರತಿ ನಡೆದು ತೀರ್ಥ ಪ್ರಸಾದ ವಿತರಣೆ ನಡೆಯಿತು. ಅಕ್ಟೋಬರ್ 20 ಶುಕ್ರವಾರದಂದು ಬೆಳಿಗ್ಗೆ ದುರ್ಗಾ ಹೋಮ, ಮಂಗಳಾರತಿ ನಡೆದು ಸಂಜೆ ಶ್ರೀ ಸ್ವಾಮೀಜಿಯ ಪಾದಪೂಜೆ ನಡೆದು ಭಜನೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ಅಕ್ಟೋಬರ್ 21 ರ ಶನಿವಾರದಂದು ಬೆಳಿಗ್ಗೆ ಸತ್ಯನಾರಾಯಣ ಮಹಾಪೂಜೆ ನಂತರ ಶ್ರೀ ಶನೇಶ್ವರ ಭಕ್ತವೃಂದ ಮಿತ್ರ ಮಂಡಳಿ ಬಾಂಡುಪ್ ಇವರಿಂದ ಶನಿ ಗ್ರಂಥ ಪಾರಾಯಣ, ರಾತ್ರಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಅಕ್ಟೋಬರ್ 24 ರ ದಸರಾದಂದು ಬೆಳಿಗ್ಗೆ ಅಲಂಕಾರ ಪೂಜೆ ಮಹಾಮಂಗಳಾರತಿಯ ನಂತರ ಮಾತ ಅನ್ನಪೂರ್ಣೇಶ್ವರಿ ಮಾತಾಜಿ ಆಶೀರ್ವಾದ ಅನುಸಾರ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಪರಿಸರದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ತೀರ್ಥ ಪ್ರಸಾದ ಸ್ವೀಕರಿಸಬೇಕಾಗಿ ಮಂದಿರದ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ

Mumbai News Desk

ಬೊಯಿಸರ್ ಸಾರ್ವಜನಿಕ ಗಣೇಶೋತ್ಸವ ಮಂಡಲದ 100 ನೆಯ ವರ್ಷದ ಸಂಭ್ರಮಾಚರಣೆ.

Mumbai News Desk

ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ

Mumbai News Desk

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 58.25% ಮತದಾನ : ​ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

Mumbai News Desk

ಮಹಾರಾಷ್ಟ್ರ ಮಂಡಳಿಯ ಎಚ್ಎಸ್ ಸಿ(HSC), ಎಸ್ ಎಸ್ ಸಿ (SSC),2026ರ ಪರೀಕ್ಷೆಯ ವೇಳಾ ಪಟ್ಟಿ ಬಿಡುಗಡೆ

Mumbai News Desk

ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಪೈಕಿ 25 ರಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

Mumbai News Desk