September 6, 2026
Mumbai News Kannada
ಮುಂಬಯಿ

ಕರ್ನಾಟಕ ಸಂಘ, ಸಯನ್ ದಸರಾ ಹಬ್ಬದ ನಿಮಿತ್ತ ಭಜನೆ ಕಾರ್ಯಕ್ರಮ






ಭಜನೆ ಸನಾತನ ಧರ್ಮದ ಜೀವಾಳ – ಡಾ ಎಂ.ಜೆ.ಪ್ರವೀಣ್ ಭಟ್

ಮುಂಬಯಿ ಅ.23.ನಮ್ಮ ನೂತನ ಕರ್ನಾಟಕ ಸಂಘದ ಪ್ರಥಮ ಕಾರ್ಯಕ್ರಮವಾಗಿ ದಸರಾ ಹಬ್ಬದ ಈ ಶುಭ ಸಂದರ್ಭದಲ್ಲಿ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸೂಕ್ತವಾಗಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ದೇವರ ಕೃಪೆಗೆ ಪಾತ್ರರಾಗೋಣ. ಭಜನೆ ಎಂಬುದು ಮುಕ್ತಿಗೆ ಹೆದ್ದಾರಿ. ಅದು ಸನಾತನ ಧರ್ಮದ ಜೀವಾಳ. ಭಗವಂತನಿಗೆ ಅರ್ಪಿಸುವ ನೈವೇದ್ಯವದು. ಭಜನೆಯು ಆತ್ಮದ ಆಂತರಿಕ ಶಬ್ದಗಳ ಮೇಲೆ ಧ್ಯಾನವನ್ನು ಕೇಂದ್ರೀಕರಿಸುತ್ತದೆ ಆದುದರಿಂದ ಭಜನಾ ಕಾರ್ಯಕ್ರಮದಲ್ಲಿ ಮನಸ್ಸಿಗೆ ಶಾಂತಿ ನೆಮ್ಮದಿ ದೊರಕುತ್ತದೆ ಎಂದು ಸಂಘದ ಅಧ್ಯಕ್ಷರಾದ ಡಾ. ಎಂ ಜೆ ಪ್ರವೀಣ್ ಭಟ್ ಅವರು ನುಡಿದರು.

ಅವರು ತಾ. 22/ 10/ 2023 ರಂದು ಸಂಜೆ 5 ರಿಂದ ಸಯನ್ ನಿತ್ಯಾನಂದ ಸಭಾಗೃಹದಲ್ಲಿ ಏರ್ಪಡಿಸಲಾದ ಭಜನಾ ಕಾರ್ಯಕ್ರಮದ ಬಳಿಕ ಮಂಗಳಾರತಿ ನೆರವೇರಿಸಿ ,ಭಜನಾ ತಂಡಗಳನ್ನು ಗೌರವಿಸಿ ಮಾತನಾಡಿದರು.

‘ಚಂದ್ರಹಾಸ ರೈ ಪುತ್ತೂರು ಭಜನಾ ಬಳಗ’, ಡೊಂಬಿವಿಲಿ ಮತ್ತು ಶ್ರೀ ಶನೀಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಜನಾ ಮಂಡಳಿ, ಕೋಳಿವಾಡ, ಸಯನ್ ಇವರುಗಳು ಆಗಮಿಸಿ, ಭಜನಾ ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಿಕೊಟ್ಟರು.

ಸಂಘದ ಉಪಾಧ್ಯಕ್ಷರುಗಳಾದ ಶ್ರೀ ಸತೀಶ್ ಆರ್. ಶೆಟ್ಟಿ , ಶ್ರೀ ಸದಾನಂದ ಶೆಟ್ಟಿ, ಸದಾಶಿವ ಬಿ ಎನ್ ಶೆಟ್ಟಿ, ಸಲಹೆಗಾರ ಸುಂದರ ಮೂಲ್ಯ, ಸಂಸ್ಥಾಪಕ ಸದಸ್ಯರಲ್ಲಿ ಓರ್ವರಾದ ಹ್ಯಾರಿ ಸಿಕ್ವೇರಾ, ಗೌ.ಕಾರ್ಯದರ್ಶಿ ಡಾ.ಜಿ.ಪಿ.ಕುಸುಮಾ, ಜೊತೆ ಕಾರ್ಯದರ್ಶಿಗಳಾದ ಶ್ರೀ ಪ್ರವೀಣ್ ಶೆಟ್ಟಿ, ಜಯಶೀಲ ಬಿ ಮೂಲ್ಯ, ಶ್ರೀ ಉಮೇಶ್ ಶೆಟ್ಟಿ ಕುಕ್ಕುಂದೂರು, ಶ್ರೀ ದಯಾ ಮೂಲ್ಯ, ಜೊತೆ ಕೋಶಾಧಿಕಾರಿ ಶ್ರೀಮತಿ ಚಂದ್ರಿಕಾ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಶ್ರೀಮತಿ ಪ್ರಭಾ ಸುವರ್ಣ, ಮೊದಲಾದವರು ಉಪಸ್ಥಿತರಿದ್ದರು.

ಮಂಗಳಾರತಿಯಾದ ಬಳಿಕ ನೆರೆದ ಭಕ್ತಾಭಿಮಾನಿಗಳಿಗೆ ಪ್ರಸಾದ
ವಿತರಣೆಗೈಯಲಾಯಿತು. ಕೊನೆಗೆ ಲಘುಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.


ಕರ್ನಾಟಕ ಸಂಘ ಸಯನ್ ಇದೇ ತಿಂಗಳ 15ರಂದು ನವರಾತ್ರಿಯ ಪರ್ವದಿನದಂದು ಉದ್ಘಾಟನೆಗೊಂಡಿತ್ತು, ಸಂಘವು ಹಮ್ಮಿಕೊಂಡಿದ್ದ ಭಜನಾ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ,ತುಳು-ಕನ್ನಡಿಗರು ಭಾಗವಹಿಸಿದ್ದರು.



Related posts

ಬೋರಿವಲಿ ಪೂರ್ವ ನ್ಯಾನ್ಸಿ ಕಾಂಪ್ಲೆಕ್ಸ್: ಶ್ರೀ ಜಗದೀಶ್ವರಿ ಮಂದಿರದಲ್ಲಿ ದೃಢ ಕಲಶಾಭಿಷೇಕ ಸಂಪನ್ನ

Mumbai News Desk

48ರ ಸಂಭ್ರಮದಲ್ಲಿ ಭಾರತ್ ಬ್ಯಾಂಕ್: ಧಾರಾವಿ ಶಾಖೆಯಲ್ಲಿ ಗ್ರಾಹಕರ ಆತ್ಮೀಯತೆಗೆ ಸಾಕ್ಷಿಯಾದ ಸಂಸ್ಥಾಪನಾ ದಿನಾಚರಣೆ

Mumbai News Desk

ಅಯ್ಯಪ್ಪ ಸ್ವಾಮಿ ಭಕ್ತವೃಂದ ಚೆಂಬೂರು, ವಾರ್ಷಿಕ ಪಡಿಪೂಜೆ ಮತ್ತು ಮಹಾಪೂಜೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಕೆ ಭೋಜರಾಜ್ ರವರಿಗೆ ನುಡಿ ನಮನ ಕಾರ್ಯಕ್ರಮ.

Mumbai News Desk

ಬಂಟರ ಸಂಘ, ಮುಂಬಯಿ: ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ಮಾತಾ ಕಿ ಚೌಕಿ ಭಕ್ತಿ ಪ್ರಧಾನ ಕಾರ್ಯಕ್ರಮ

Mumbai News Desk

ಬಿಲ್ಲವರ ಅಸೋಸಿಯೇಶನ್ ಮಲಾಡ್ ಸ್ಥಳೀಯ ಕಚೇರಿ – 170ನೇ ಗುರು ಜಯಂತಿ ಆಚರಣೆ.

Mumbai News Desk