30 C
Mumbai
April 24, 2026
Mumbai News Kannada
ಮುಂಬಯಿ

ಬೋಂಬೆ ಬಂಟ್ಸ್ ಎಸೋಸಿಯೇಶನ್‌ನ ಯುವ ವಿಭಾಗದಿಂದ ದಾಂಡಿಯಾ ನೈಟ್.





  ಧರ್ಮ ಕಾರ್ಯಕ್ಕೆ ಯುವ ಸಮುದಾಯ ಮುಂದಾಗಬೇಕು : ಸಿ ಎ ಸುರೇಂದ್ರ ಕೆ. ಶೆಟ್ಟಿ

ಮುಂಬಯಿ, ಆ. 26 – ಬೊಂಬೇ ಬಂಟ್ಸ್ ಎಸೋಸಿಯೇಶನ್‌ನ ಯುವ ವಿಭಾಗದ ವತಿಯಿಂದ ಅ. 22 ರಂದು  ನವರಾತ್ರಿ ಉತ್ಸವದ ಪ್ರಯುಕ್ತದಾಂಡಿಯಾ ನೈಟ್ ಕಾರ್ಯಕ್ರಮವು ನವಿಮುಂಬಯಿಯ ಜ್ಯೂಯಿ ನಗರದಲ್ಲಿರುವ ಬಂಟ್ಸ್ ಸೆಂಟರ್‌ನಲ್ಲಿ ನಡೆಯಿತು.

   ಉದ್ಘಾಟನೆಯನ್ನು ಬೋಂಬೆ ಬಂಟ್ಸ್ ಎಸೋಸಿಯೇಶನ್‌ನ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ಉದ್ಘಾಟಿಸಿದರು. 

   ಆನಂತರ ಮಾತನಾಡಿದ ಬಾಂಬೆ ಬಂಟ್ಸ್ ಅಸೋಸಿಯೇಶನ್‌ ಅಧ್ಯಕ್ಷ ಸಿಎ ಸುರೇಂದ್ರ ಕೆ. ಶೆಟ್ಟಿ ಅವರು   ಎಸೋಸಿಯೇಶನ್‌ನ ಯುವ ವಿಭಾಗವು ಸದಾ ಕ್ರಿಯಾಶೀಲವಾ ಗಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿ ಸುತ್ತ ಬಂದಿದೆ.     ನವರಾತ್ರಿಯ ಈ ಸಂದರ್ಭದಲ್ಲಿ ಯುವ ಸಮುದಾಯ ಒಟ್ಟಾಗಿ  ದೇವಿಯನ್ನು ಪ್ರಾರ್ಥಿಸಿಕೊಂಡಿದ್ದಾರೆ. ಇಂದಿನ ಕಾರ್ಯ ಕ್ರಮವು ಯಶಸ್ವಿಯಾಗಲು ಸಹಕರಿಸಿದ ಎಲ್ಲಗೊ  ಅಭಿನಂದನೆ ಸಲ್ಲಿಸುತ್ತೇನೆ .  ಧರ್ಮ ಕಾರ್ಯಕ್ಕೆ ಯುವ ಸಮುದಾಯ ಮುಂದಾಗಬೇಕು ಎಂದರು.

 ಅತಿಥಿಗಳಾಗಿ ಬಂಟರ ಸಂಘ ಮುಂಬೈಯ ಸಿಟಿ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಧ್ಯಕ್ಷ 

ಸುಚಿತ ಕೆ. ಶೆಟ್ಟಿ ಮತ್ತು ಮುಲುಂಡ್ ಬಂಟ್ಸ್  ಮಹಿಳಾ ವಿಭಾಗದ ಕಾರ್ಯಧ್ಯಕ್ಷ ರತ್ನ ವಿ. ಶೆಟ್ಟಿ  ಪಾಲ್ಗೊಂಡಿದ್ದರು.

ಅಧ್ಯಕ್ಷರನ್ನು ಮತ್ತು ಅತಿಥಿಗಣ್ಯರನ್ನುಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯ  ಕೀರ್ತನ್  ಶೆಟ್ಟಿ, 

  ಸ್ವಾಗತಿಸಿ ಪುಷ್ಪಗುಚ್ಛ ನೀಡಿ ಗೌರವಿಸಿದರು.

  ಕಾರ್ಯಕ್ರಮದಲ್ಲಿ  ಬೋಂಬೇ ಬಂಟ್ಸ್ ಎಸೋಸಿಯೇಶನ್‌ನ ಉಪಾಧ್ಯಕ್ಷ ಅಡ್ವಕೇಟ್‌ ಡಿ.ಕೆ. ಶೆಟ್ಟಿ, ಗೌ. ಪ್ರ. ಕಾವ್ಯದರ್ಶಿ ಐಕಳ ಕಿಶೋರ್ ಶೆಟ್ಟಿ, ಗೌ. ಕೋಶಾಧಿಕಾರಿ ಸಿಎ ವಿಶ್ವನಾಥ್ ಶೆಟ್ಟಿ, ಜತೆ ಕಾರ್ಯದರ್ಶಿ ಎಡ್ವಕೇಟ್‌ ಗುಣಕರ್‌ ಶೆಟ್ಟಿ, ಜತೆ ಕೋಶಾಧಿಕಾರಿ ಸಿಎ ದಿವಾಕರ್. , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯ  ಕೀರ್ತನ್  ಶೆಟ್ಟಿ, ಉಪ ಕಾರ್ಯಾಧ್ಯಕ್ಷ ನಿಶಾಂತ್ ಶೆಟ್ಟಿ, ಕಾರ್ಯದರ್ಶಿ ಅವಿತ ಶೆಟ್ಟಿ, ಜೊತೆ ಕಾರ್ಯದರ್ಶಿ ಸಿಂಧೂರ ಶೆಟ್ಟಿ, ಕೋಶಾಧಿಕಾರಿ ಧನಂಜಯ ಶೆಟ್ಟಿ, ಜತೆ ಕೋಶಾಧಿಕಾರಿ ಗೌರೇಶ್ ಶೆಟ್ಟಿ ., ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಶಾಂತಾ ನಾರಾಯಣ ಶೆಟ್ಟಿ ಗೌರವ ಕಾರ್ಯ ದರ್ಶಿ ಉಷಾ ಆರ್. ಶೆಟ್ಟಿ, ಗೌರವ ಕೋಶಾ ಧಿಕಾರಿ ಶಹಾನಿ ವಿ. ಶೆಟ್ಟಿ, ಜತೆ ಕಾರ್ಯದರ್ಶಿ ಲಲಿತಾ ಡಿ. ಶೆಟ್ಟಿ, ಜತೆ ಕೋಶಾಧಿಕಾರಿ ಮಾಯಾ ಆಳ್ವ  ಉಪಸ್ಥಿತರಿದ್ದರು.

ತೀರ್ಪುಗಾರರಾಗಿ ನಿಖಿಲ್ ಶೆಟ್ಟಿ.ಆರತಿ ಶೆಟ್ಟಿ

ನಿವೇದಿತಾ ಶೆಟ್ಟಿ. ಸಹಕರಿಸಿದರು.

ವಿಜೇತರು

ಅತ್ಯುತ್ತಮ ನೃತ್ಯಗಾರ್ತಿ – ಕೃತಿಕಾ ಶೆಟ್ಟಿ

ಅತ್ಯುತ್ತಮ ಉಡುಗೆ – ಸ್ವಾತಿ ಶೆಟ್ಟಿ

ಜನಪ್ರಿಯ ಮುಖ – ಶೋಭಾ ಶೆಟ್ಟಿ

ಚೈಲ್ಡ್ ಬೆಸ್ಟ್ ಡ್ಯಾನ್ಸರ್ – ನಿರ್ವಿಕಾ ಶೆಟ್ಟಿ

ಹಾರ್ಟ್ ಪರ್ಫಾರ್ಮರ್ – ರಿನೀತ್ ಶೆಟ್ಟಿ

ಸಮಾಧಾನಕರ ಬಹುಮಾನ –

ಮಹಾಕ್ಷ ಶೆಟ್ಟಿ

ದೀಕ್ಷಾ ಭಂಡಾರಿ

ಅಶ್ವಿನಿ ಶೆಟ್ಟಿ

ವಿದೀತ್ ಶೆಟ್ಟಿ

ಅಶ್ಮಿತಾ ಶೆಟ್ಟಿ

ನಿಕಿತಾ ಶೆಟ್ಟಿ



Related posts

ಧರೆಗಿಳಿದ ಮಳೆಹನಿ, ಮಿನುಗಿದ ಮುಂಬೈ: ಪ್ರಕೃತಿಯ ವಿಶೇಷ ಸಿರಿಯಲ್ಲಿ 2026ರ ಉದಯ

Mumbai News Desk

ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ : ಸೀರೆ, ವಜ್ರಾಭರಣ ಹಾಗೂ ಇನ್ನಿತರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ,

Mumbai News Desk

ಬೊರಿವಲಿ: ಜಗದೀಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ; ಲೋಕಕಲ್ಯಾಣಕ್ಕೆ ಧರ್ಮ ಜಾಗೃತಿ ಅಗತ್ಯ: ಪೇಜಾವರ ಶ್ರೀ

Mumbai News Desk

ಗಣಪನ ಭಕ್ತಿ ಸಿಂಚನದಲ್ಲಿ ತೇಲಿದ ಕಾಂದಿವಲಿ ಕನ್ನಡ ಸಂಘ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಆಷಾಢೋತ್ಸವ

Mumbai News Desk

ಕಾಂದಿವಿಲಿ ಕನ್ನಡ ಸಂಘ ದಹಾಣುಕರ್ ವಾಡಿ 29ನೇ ವಾರ್ಷಿಕ ಮಹಾಸಭೆ

Mumbai News Desk