April 1, 2025
ಸುದ್ದಿ

ಮೈಸೂರು ದಸರಾ -2023 ರ  ಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀನಿವಾಸ ಜೋಕಟ್ಟೆ ಕವನ ವಾಚನ


ಮೈಸೂರು ದಸರಾ- 2023ರ ಕೊನೆಯ ದಿನದ ಪ್ರಧಾನ ಕವಿಗೋಷ್ಟಿ ಅಕ್ಟೋಬರ್ 21 ರಂದು‌ ಕಲಾಮಂದಿರದಲ್ಲಿ ಜರಗಿದ್ದು ಮುಂಬಯಿ ಪತ್ರಕರ್ತ ಕವಿ ಗೋಕುಲವಾಣಿ ಸಂಪಾದಕ  ಶ್ರೀನಿವಾಸ ಜೋಕಟ್ಟೆ ಕವನ ವಾಚನ‌ ಮಾಡಿದರು.ಈ ಪ್ರಧಾನ ಕವಿಗೋಷ್ಟಿಯನ್ನು ಖ್ಯಾತ ಕವಯಿತ್ರಿ ಶಶಿಕಲಾ ವಸ್ತ್ರದ ಉದ್ಘಾಟಿಸಿದರು. ಪ್ರಸಿದ್ಧ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.


ಶ್ರೀನಿವಾಸ ಜೋಕಟ್ಟೆ ಕರ್ನಾಟಕ ಸರಕಾರದ ನವರಸಪುರ ಕವಿಗೋಷ್ಠಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿ, ಆಳ್ವಾಸ್ ನುಡಿಸಿರಿಯ ಕವಿ ನಮನ ,ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕವಿಗೋಷ್ಠಿ ,ವಿಚಾರ ಭಾರತಿ ಸಮ್ಮೇಳನದ ಕವಿಗೋಷ್ಟಿ ಸಹಿತ ಹಲವು ಪ್ರಮುಖ ಕವಿಗೋಷ್ಠಿಗಳಲ್ಲಿ ಕಾವ್ಯವಾಚನ ಮಾಡಿದ್ದಾರೆ, ಅಧ್ಯಕ್ಷತೆ ವಹಿಸಿದ್ದಾರೆ. ಮೂರು ಬಾರಿ ಸಂಕ್ರಮಣ ಕಾವ್ಯ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದಾರೆ. ಅವಿಭಜಿತ ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನದ ಸಾಹಿತ್ಯ ಸ್ಪರ್ಧೆಯಲ್ಲೂ ತಮ್ಮ ಕವನಕ್ಕೆ ಪ್ರಥಮ ಬಹುಮಾನ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಾರ್ಷಿಕ ಉತ್ತಮ‌ ಕಾವ್ಯ ಸಂಕಲನದಲ್ಲೂ ಮೂರು ಬಾರಿ ಇವರ ಕವನಗಳು ಪ್ರಕಟವಾಗಿವೆ. ತಮ್ಮ ‘ಕ್ಷಮಿಸಿ, ಈ ಚಿತ್ರಕ್ಕೆ ಹೆಸರಿಲ್ಲ’ ಕವನ ಸಂಕಲನಕ್ಕೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಪಡೆದಿರುತ್ತಾರೆ.
——-

Related posts

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಮೊದಲ ಮಳೆಗೆ ತತ್ತರಿಸಿದ ಮುಂಬಯಿ, ತಲ್ಲಣಗೊಂಡ ಜನತೆ,ಅಪಾರ ಹಾನಿ.

Mumbai News Desk

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

“ಮಿಸ್ಟರ್ ಮದಿಮಯೆ” ಕರಾವಳಿಯಾದ್ಯಂತ  ತೆರೆಗೆ

Mumbai News Desk