27.7 C
Mumbai
July 23, 2026
Mumbai News Kannada
ಸುದ್ದಿ

ಮೈಸೂರು ದಸರಾ -2023 ರ  ಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀನಿವಾಸ ಜೋಕಟ್ಟೆ ಕವನ ವಾಚನ








ಮೈಸೂರು ದಸರಾ- 2023ರ ಕೊನೆಯ ದಿನದ ಪ್ರಧಾನ ಕವಿಗೋಷ್ಟಿ ಅಕ್ಟೋಬರ್ 21 ರಂದು‌ ಕಲಾಮಂದಿರದಲ್ಲಿ ಜರಗಿದ್ದು ಮುಂಬಯಿ ಪತ್ರಕರ್ತ ಕವಿ ಗೋಕುಲವಾಣಿ ಸಂಪಾದಕ  ಶ್ರೀನಿವಾಸ ಜೋಕಟ್ಟೆ ಕವನ ವಾಚನ‌ ಮಾಡಿದರು.ಈ ಪ್ರಧಾನ ಕವಿಗೋಷ್ಟಿಯನ್ನು ಖ್ಯಾತ ಕವಯಿತ್ರಿ ಶಶಿಕಲಾ ವಸ್ತ್ರದ ಉದ್ಘಾಟಿಸಿದರು. ಪ್ರಸಿದ್ಧ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.


ಶ್ರೀನಿವಾಸ ಜೋಕಟ್ಟೆ ಕರ್ನಾಟಕ ಸರಕಾರದ ನವರಸಪುರ ಕವಿಗೋಷ್ಠಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿ, ಆಳ್ವಾಸ್ ನುಡಿಸಿರಿಯ ಕವಿ ನಮನ ,ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕವಿಗೋಷ್ಠಿ ,ವಿಚಾರ ಭಾರತಿ ಸಮ್ಮೇಳನದ ಕವಿಗೋಷ್ಟಿ ಸಹಿತ ಹಲವು ಪ್ರಮುಖ ಕವಿಗೋಷ್ಠಿಗಳಲ್ಲಿ ಕಾವ್ಯವಾಚನ ಮಾಡಿದ್ದಾರೆ, ಅಧ್ಯಕ್ಷತೆ ವಹಿಸಿದ್ದಾರೆ. ಮೂರು ಬಾರಿ ಸಂಕ್ರಮಣ ಕಾವ್ಯ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದಾರೆ. ಅವಿಭಜಿತ ದ.ಕ. ಜಿಲ್ಲಾ ಸಾಹಿತ್ಯ ಸಮ್ಮೇಳನದ ಸಾಹಿತ್ಯ ಸ್ಪರ್ಧೆಯಲ್ಲೂ ತಮ್ಮ ಕವನಕ್ಕೆ ಪ್ರಥಮ ಬಹುಮಾನ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಾರ್ಷಿಕ ಉತ್ತಮ‌ ಕಾವ್ಯ ಸಂಕಲನದಲ್ಲೂ ಮೂರು ಬಾರಿ ಇವರ ಕವನಗಳು ಪ್ರಕಟವಾಗಿವೆ. ತಮ್ಮ ‘ಕ್ಷಮಿಸಿ, ಈ ಚಿತ್ರಕ್ಕೆ ಹೆಸರಿಲ್ಲ’ ಕವನ ಸಂಕಲನಕ್ಕೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಪಡೆದಿರುತ್ತಾರೆ.
——-



Related posts

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ

Mumbai News Desk

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ

Mumbai News Desk

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

Mumbai News Desk