April 2, 2025
ಮುಂಬಯಿ

ವೈಭವದ ವಿಸರ್ಜನ ಮೆರವಣಿಗೆಯೊಂದಿಗೆ ಪಶ್ಚಿಮ ವಿಭಾಗದ ನವರಾತ್ರಿ ಉತ್ಸವ ಸಂಪನ್ನ.

ಚಿತ್ರ, ವರದಿ : ಸತೀಶ್ ಶೆಟ್ಟಿ.

ಮುಂಬೈ ಮಹಾರಾಷ್ಟ್ರದ ಮಿನಿ ತುಳುನಾಡು ಎಂದೇ ಖ್ಯಾತವಾಗಿರುವ ಡೊಂಬಿವಲಿಯ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ನವರಾತ್ರಿ ಉತ್ಸವವು ವಿವಿಧ ಪೂಜೆ, ಸೇವಾದಿಗಳಿಂದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 24ರ ದಸರದಂದು ನಡೆದ ವೈಭವಯುತ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು.

ಮಂಡಳಿಯ ಧರ್ಮದರ್ಶಿ ಅಶೋಕ್ ದಾಸು ಶೆಟ್ಟಿ ಅವರು ಮೆರವಣಿಗೆಗೆ ಚಾಲನೆ ನೀಡಿದರು,

ವಿವಿಧ ವೇಶಭೂಷಣಗಳೊಂದಿಗೆ ನಾಸಿಕ್ ಡೋಲ್, ತಟ್ಟಿರಾಯ, ಸಿಡಿಮದ್ದು, ಬ್ಯಾಂಡುವಾಲಗ, ಕೇರಳ ಚೆಂಡೆ ಕುಣಿತ, ಮಂಡಳಿಯ ಮಹಿಳೆಯರಿಂದೆ ಭಜನೆ, ಮಂಡಳಿಯ ಮಕ್ಕಳಿಂದ ಕುಣಿತ ಭಜನೆ, ಹುಲಿವೇಷ, ಯಕ್ಷಗಾನದ ಪ್ರತ್ಯಕ್ಷತೆ, ಹಾಗೂ ಇನ್ನಿತರ ವೇಷಭೂಷಣಗಳು ಮೆರವಣಿಗೆಗೆ ಮೆರಗನ್ನು ನೀಡಿದವು. ಪರಿಸರದ ತುಳು ಕನ್ನಡಿಗರು ಸಾಂಪ್ರದಾಯಿಕ ಉಡುಗೆ ತೊಟ್ಟು ಮೆರವಣಿಗೆಯ ಮೆರೆಗನ್ನು ಹೆಚ್ಚಿಸಿದರು.

ಸಾವಿರಾರು ಸಂಖ್ಯೆಯಲ್ಲಿ ಭಕ್ತರು, ಪರಿಸರದ ತುಳು ಕನ್ನಡಿಗರು ಪಾಲ್ಗೊಂಡ ಶ್ರೀ ದೇವಿಯ ವೈಭವವಾದ ಮೆರವಣಿಗೆಯನ್ನು ರಸ್ತೆಯ ಇಕ್ಕೆಲಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕಣ್ತುಂಬಿಕೊಂಡು ಪುನೀತರಾದರು.

ಸಂಭ್ರಮ ಉಲ್ಲಾಸ ದಿಂದ ಮೆರವಣಿಗೆ ಮೂಲಕ ತಂದ ದೇವಿಯ ಮೂರ್ತಿಯನ್ನು ಪೂಜೆ, ಪ್ರಾರ್ಥನೆಗೈದು ನದಿಯಲ್ಲಿ ವಿಸರ್ಜಿಸಲಾಯಿತು.

Related posts

ಮಲಾಡ್ ಕನ್ನಡ ಸಂಘದ ವತಿಯಿಂದ ಯಕ್ಷಗಾನ ತಾಳಮದ್ದಳೆ ಸುಧನ್ವ ಮೋಕ್ಷ

Mumbai News Desk

ಭಾರತ್ ಬ್ಯಾಂಕ್ ಈ ವರ್ಷದ 2024 ಕ್ಯಾಲೆಂಡರ್ ಬಿಡುಗಡೆ.

Mumbai News Desk

ವಡಾಲದ ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗೆ ಎಸ್ ಎಸ್ ಸಿ ಯಲ್ಲಿ ಶೇಕಡ 100% ಫಲಿತಾಂಶ.

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ ನ ಶೈಕ್ಷಣಿಕ ಆರ್ಥಿಕ ನೆರವು ವಿತರಣಾ, ದತ್ತು ಸ್ವೀಕರ,

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ )ಥಾಣೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್ ಆಯ್ಕೆ.

Mumbai News Desk

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”

Mumbai News Desk