September 6, 2026
Mumbai News Kannada
ಮುಂಬಯಿ

ವೈಭವದ ವಿಸರ್ಜನ ಮೆರವಣಿಗೆಯೊಂದಿಗೆ ಪಶ್ಚಿಮ ವಿಭಾಗದ ನವರಾತ್ರಿ ಉತ್ಸವ ಸಂಪನ್ನ.





ಚಿತ್ರ, ವರದಿ : ಸತೀಶ್ ಶೆಟ್ಟಿ.

ಮುಂಬೈ ಮಹಾರಾಷ್ಟ್ರದ ಮಿನಿ ತುಳುನಾಡು ಎಂದೇ ಖ್ಯಾತವಾಗಿರುವ ಡೊಂಬಿವಲಿಯ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ನವರಾತ್ರಿ ಉತ್ಸವವು ವಿವಿಧ ಪೂಜೆ, ಸೇವಾದಿಗಳಿಂದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 24ರ ದಸರದಂದು ನಡೆದ ವೈಭವಯುತ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು.

ಮಂಡಳಿಯ ಧರ್ಮದರ್ಶಿ ಅಶೋಕ್ ದಾಸು ಶೆಟ್ಟಿ ಅವರು ಮೆರವಣಿಗೆಗೆ ಚಾಲನೆ ನೀಡಿದರು,

ವಿವಿಧ ವೇಶಭೂಷಣಗಳೊಂದಿಗೆ ನಾಸಿಕ್ ಡೋಲ್, ತಟ್ಟಿರಾಯ, ಸಿಡಿಮದ್ದು, ಬ್ಯಾಂಡುವಾಲಗ, ಕೇರಳ ಚೆಂಡೆ ಕುಣಿತ, ಮಂಡಳಿಯ ಮಹಿಳೆಯರಿಂದೆ ಭಜನೆ, ಮಂಡಳಿಯ ಮಕ್ಕಳಿಂದ ಕುಣಿತ ಭಜನೆ, ಹುಲಿವೇಷ, ಯಕ್ಷಗಾನದ ಪ್ರತ್ಯಕ್ಷತೆ, ಹಾಗೂ ಇನ್ನಿತರ ವೇಷಭೂಷಣಗಳು ಮೆರವಣಿಗೆಗೆ ಮೆರಗನ್ನು ನೀಡಿದವು. ಪರಿಸರದ ತುಳು ಕನ್ನಡಿಗರು ಸಾಂಪ್ರದಾಯಿಕ ಉಡುಗೆ ತೊಟ್ಟು ಮೆರವಣಿಗೆಯ ಮೆರೆಗನ್ನು ಹೆಚ್ಚಿಸಿದರು.

ಸಾವಿರಾರು ಸಂಖ್ಯೆಯಲ್ಲಿ ಭಕ್ತರು, ಪರಿಸರದ ತುಳು ಕನ್ನಡಿಗರು ಪಾಲ್ಗೊಂಡ ಶ್ರೀ ದೇವಿಯ ವೈಭವವಾದ ಮೆರವಣಿಗೆಯನ್ನು ರಸ್ತೆಯ ಇಕ್ಕೆಲಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕಣ್ತುಂಬಿಕೊಂಡು ಪುನೀತರಾದರು.

ಸಂಭ್ರಮ ಉಲ್ಲಾಸ ದಿಂದ ಮೆರವಣಿಗೆ ಮೂಲಕ ತಂದ ದೇವಿಯ ಮೂರ್ತಿಯನ್ನು ಪೂಜೆ, ಪ್ರಾರ್ಥನೆಗೈದು ನದಿಯಲ್ಲಿ ವಿಸರ್ಜಿಸಲಾಯಿತು.



Related posts

ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.

Mumbai News Desk

₹20,000+ಕೋಟಿ ವ್ಯವಹಾರದ ಮೈಲುಗಲ್ಲು ಮತ್ತು10% ಲಾಭಾಂಶ— ಭಾರತ್ ಬ್ಯಾಂಕಿನ ಬಲಿಷ್ಠತೆ, ಸಾಧನೆ ಮತ್ತು ಇನ್ನಷ್ಟು ಉಜ್ವಲ ಭವಿಷ್ಯದ ಹೊಸ ಅಧ್ಯಾಯ

Mumbai News Desk

ಭಾರತ್ ಬ್ಯಾಂಕ್ ಗೊರೆಗಾಂವ್ ಪೂರ್ವ ಶಾಖೆಯ ಅಧಿಕಾರಿ ರಮೇಶ್ ಸಿ ಕೋಟ್ಯಾನ್ ಸೇವಾ ನಿವೃತ್ತಿ

Mumbai News Desk

ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗದ ಆಯೋಜನೆಯಲ್ಲಿ ಸರಣಿ ತಾಳಮದ್ದಳೆಯ ದಶಮ ಪ್ರಸ್ತುತಿ: ಕಲಾವಿದರಿಗೆ ಸನ್ಮಾನ

Mumbai News Desk

ಶ್ರೀ ಕಟೀಲ್ ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್ 5ನೇ ವಾರ್ಷಿಕೋತ್ಸವ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರದ್ಧಾ ಗಣೇಶ್ ನಾಯ್ಕ ಗೆ ಶೇ 95.60 ಅಂಕ.

Mumbai News Desk