32 C
Mumbai
April 24, 2026
Mumbai News Kannada
ಸುದ್ದಿ

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ





ನಮ್ಮೆಲ್ಲರ ಒಗ್ಗಟ್ಟು ಸಮಾಜದ ಮೇಲಿನ ಅಭಿಮಾನ ನಿರಂತರ ಇರಬೇಕು: ಶೈಲೇಶ್ ಶೆಟ್ಟಿ

   ಆಫ್ರಿಕಾ:    ಬಂಟರ ಸಂಘ ಪೂರ್ವ ಆಫ್ರಿಕಾ ನೈರೋಬಿ ಕೀನ್ಯಾ ಇದರ ಮೊದಲನೇ ವಾರ್ಷಿಕೋತ್ಸವ ದಿನಾಂಕ 28 10.2023ನೇ ಶನಿವಾರದಂದು ಹೋಟೆಲ್ ರೆಡ್ ಜಿಂಜರ್ 2ನೇ ಪಾರ್ಕ್ ಲ್ಯಾಂಡ್ಸ್ ಅವೆನ್ಯೂ ನೈರೋಬಿ ಕೀನ್ಯಾದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಶೈಲೇಶ್ ಶೆಟ್ಟಿಯವರು ಮಾತನಾಡುತ್ತಾ ಜಗತ್ತಿನಯಾವ ಮೂಲೆಯಲ್ಲಿ  ಸಮಾಜ ಬಾಂಧವರು ಇದ್ದರೂ ಕೂಡ .ಸಮಾಜದ ಅಭಿಮಾನ ಒಗ್ಗಟ್ಟು  ಗುರುತಿಸಿಕೊಂಡು ಬಂದವರು.  ಭಾರತವನ್ನು ಬಿಟ್ಟು ಈ ದೇಶಕ್ಕೆ ಬಂದರು ಇಲ್ಲಿ ತುಳು ನಾಡಿನ ಸಂಸ್ಕೃತಿಯನ್ನು ಆಚರಣೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು. ಒಗ್ಗಟ್ಟಿನಲ್ಲಿ ನಮ್ಮ ಸಮಾಜವನ್ನು ಬೆಳೆಸುವಲ್ಲಿ ಎಲ್ಲರೂ ಒಂದಾಗಿದ್ದೇವೆ. ನಮ್ಮೆಲ್ಲರ ಒಗ್ಗಟ್ಟು ಸಮಾಜದ ಮೇಲಿನ ಅಭಿಮಾನ ನಿರಂತರ ಇರಬೇಕು ಎಂದು ನುಡಿದರು

     ಸಂಘದ ಮಹಿಳಾ ಸದಸ್ಯೆಯರು ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಗಳೂರು ಮೀನನಾಥ ಖ್ಯಾತಿಯ ರಾಘವೇಂದ್ರ ರೈ ಕುಂಜತ್ತೂರು ಇವರಿಂದ ಹಾಗೂ ಸಂಘದ ಸದಸ್ಯರಿಂದ ಸಂಗೀತ, ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. 

 ಅಕ್ಷಯ ರಾಜೇಶ್ ಶೆಟ್ಟಿ ಇವರ ಸನ್ಮಾನ ಪತ್ರ ವಾಚನ ದೊಂದಿಗೆ ನಟ ಹಾಗೂ ರಂಗಭೂಮಿ ಕಲಾವಿದರಾದ  ರಾಘವೇಂದ್ರ ರೈ ಅವರನ್ನು ಸನ್ಮಾನಿಸಲಾಯಿತು.

 ಕಾರ್ಯಕ್ರಮದ ಆರಂಭದಿಂದ ಕೊನೆಯವರೆಗೂ ತುಳು ಭಾಷೆಗೆ ಹೆಚ್ಚು ಪ್ರಾಧಾನ್ಯತೆ ನೀಡಿರುವುದು ವಿಶೇಷವಾಗಿತ್ತು.

 ಈ ಸಂದರ್ಭದಲ್ಲಿ *ಮೂಡಾಯಿ ಆಫ್ರಿಕಾದ ಪೆರ್ಮೆದ ಬಂಟೆರ್* ಆಲ್ಬಮ್ ಹಾಡು ಬಿಡುಗಡೆಗೊಂಡಿತು.

ಶಾಂತಿ ಯಶವಂತ್ ಶೆಟ್ಟಿ, ಶುಭ ಶೈಲೇಶ್ ಶೆಟ್ಟಿ ಪ್ರಾರ್ಥನೆಯನ್ನು ಹಾಡಿದರು, 

. ಸಂಘದ ಎಲ್ಲಾ ಸದಸ್ಯರಿಗೆ ಪ್ರಥಮ ವರ್ಷದ ಸವಿನೆನಪಿಗಾಗಿ   ಶಾಲು ಹಾಗೂ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಸಪ್ನ ಅಶೋಕ್ ಭಂಡಾರಿ, ಗಾಯತ್ರಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂದೀಪ್ ಸಾಮಾನಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅಭಿಜಿತ್ ಸೂಡ ವಂದಿಸಿದರು.                                                                                                       



Related posts

ಬೈಂದೂರು: ಕೊಡೇರಿ ಕಡಲ್ಕೊರೆತ ಪ್ರದೇಶಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ತಂಡ ಭೇಟಿ: ಸ್ಥಳೀಯರೊಂದಿಗೆ ಸಮಾಲೋಚನೆ

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 

Mumbai News Desk

ಮುಂಬೈ : ಶಾಂತಾ ಸುಬ್ಬಯ್ಯ ನಿಧನ

Mumbai News Desk

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,

Mumbai News Desk