32 C
Mumbai
March 7, 2026
Mumbai News Kannada
ಸುದ್ದಿ

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 





ದುಬಾಯಿ : ತೀಯಾ ಫ್ಯಾಮಿಲಿ ಯು.ಎ.ಇ.ಯ ಇವರ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ದುರ್ಗ ಪೂಜೆಯು ಪೂಜೆಯು ಭಕ್ತಿ ಸಡಗರದಿಂದ ಜರುಗಿತು.

      ನಗರದ ಬರ್ ದುಬೈಯ ಸಿಂಧೆ ಸೆರೊಮಣಿ ಸಭಾಂಗಣದಲ್ಲಿ ಅಕ್ಟೋಬರ್ 29 ರಂದು ಶ್ರೀ ರಘು ಭಟ್ ರವರ ಪೌರೋಹಿತ್ಯದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ಜರುಗಿತು. ಯುಎಇಯ ಎಲ್ಲಾ ರಾಜ್ಯದ ನೂರಾರು ಭಕ್ತಾದಿಗಳು,ತೀಯಾ ಸಮಾಜ ಬಾಂಧವರು ಪೂಜೆಯಲ್ಲಿ ಪಾಲ್ಗೊಂಡು ಪುನಿತರಾದರು.

   ದುರ್ಗ ಪೂಜೆಯ  ಪ್ರತಿನಿದಿಯಾಗಿ  ಸಂಸ್ಥೆಯ ಕೋಶಾಧಿಕಾರಿ ಶ್ರೀನಿವಾಸ ಕೋಟ್ಯಾನ್ ಮತ್ತು ಶ್ರೀಮತಿ ಸರೀತ ಕೋಟ್ಯಾನ್ ದಂಪತಿಗಳು ಕುಳಿತುಕೊಂಡಿದ್ದರು.

     ರಾಜರಾಜೇಶ್ವರಿ ಭಜನಾ ಮಂಡಳಿ ದುಬೈಯ ವತಿಯಿಂದ ಭಜನೆ, ತೀಯಾ ಸಮಾಜದ ಮಹಿಳೆಯರಿಂದ ಕುಣಿತ ಭಜನೆ ಮತ್ತು ಮಹಾ ಮಂಗಳಾರತಿ ನಂತರ ಅನ್ನ ಪ್ರಸಾದದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

      ತೀಯಾ ಸಮಾಜ ಯ.ಎ.ಇ.ಯ ಅಧ್ಯಕ್ಷರಾದ ರಾಜೇಶ್ ಪಳ್ಳಿಕೆರೆಯವರು ಪೂಜೆಯಲ್ಲಿ ಅತ್ಯುತ್ತಮ ಭಜನಾ ಕಾರ್ಯಕ್ರಮ ಏರ್ಪಡಿಸಿದ್ದ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರನ್ನು, ಪೂಜಾ ಮಂಟಪವನ್ನು ತಯರಿಸಿದ ದೀಪಕ್ ರಾಜ್ ,ಪುರಂದರ ಶೆಟ್ಟಿಗಾರ್  ಮತ್ತು ಮಾದ್ಯಮದ ಮಿತ್ರರನ್ನು ಅಭಿನಂದಿಸಿದ್ದರು.ಹಾಗೂ ಯು.ಎ.ಇ.ಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಮತ್ತು ಪೂಜೆಗೆ ಆಗಮಿಸಿದ ಭಕ್ತಾದಿಗಳನ್ನು ಸ್ವಾಗತಿಸಿ ಧನ್ಯವಾದವಿತ್ತರು.



Related posts

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk

*ಜಾಗತಿಕ ಬಂಟರ ಸಂಘಗಳ ಒಕ್ಕೂಟ:  ಆಡಳಿತ ಮಂಡಳಿ ಸಭೆ* *50 ಲಕ್ಷ ರೂಪಾಯಿ ಅನುದಾನ ವಿತರಣೆ*

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ

Mumbai News Desk

ಮೂಲ್ಕಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡು ಅವರಿಗೆ ಆದ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ್ ಸ್ವಾಮೀಜಿ ಅವರಿಂದ ಗೌರವ.

Mumbai News Desk