30 C
Mumbai
April 24, 2026
Mumbai News Kannada
ಸುದ್ದಿ

ತೀಯಾ ಫ್ಯಾಮಿಲಿ ಯು.ಎ.ಇ.ಯ  ವತಿಯಿಂದ ಭಕ್ತಿ ಸಡಗರದ ದುರ್ಗಾ ಪೂಜೆ 





ದುಬಾಯಿ : ತೀಯಾ ಫ್ಯಾಮಿಲಿ ಯು.ಎ.ಇ.ಯ ಇವರ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ದುರ್ಗ ಪೂಜೆಯು ಪೂಜೆಯು ಭಕ್ತಿ ಸಡಗರದಿಂದ ಜರುಗಿತು.

      ನಗರದ ಬರ್ ದುಬೈಯ ಸಿಂಧೆ ಸೆರೊಮಣಿ ಸಭಾಂಗಣದಲ್ಲಿ ಅಕ್ಟೋಬರ್ 29 ರಂದು ಶ್ರೀ ರಘು ಭಟ್ ರವರ ಪೌರೋಹಿತ್ಯದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ಜರುಗಿತು. ಯುಎಇಯ ಎಲ್ಲಾ ರಾಜ್ಯದ ನೂರಾರು ಭಕ್ತಾದಿಗಳು,ತೀಯಾ ಸಮಾಜ ಬಾಂಧವರು ಪೂಜೆಯಲ್ಲಿ ಪಾಲ್ಗೊಂಡು ಪುನಿತರಾದರು.

   ದುರ್ಗ ಪೂಜೆಯ  ಪ್ರತಿನಿದಿಯಾಗಿ  ಸಂಸ್ಥೆಯ ಕೋಶಾಧಿಕಾರಿ ಶ್ರೀನಿವಾಸ ಕೋಟ್ಯಾನ್ ಮತ್ತು ಶ್ರೀಮತಿ ಸರೀತ ಕೋಟ್ಯಾನ್ ದಂಪತಿಗಳು ಕುಳಿತುಕೊಂಡಿದ್ದರು.

     ರಾಜರಾಜೇಶ್ವರಿ ಭಜನಾ ಮಂಡಳಿ ದುಬೈಯ ವತಿಯಿಂದ ಭಜನೆ, ತೀಯಾ ಸಮಾಜದ ಮಹಿಳೆಯರಿಂದ ಕುಣಿತ ಭಜನೆ ಮತ್ತು ಮಹಾ ಮಂಗಳಾರತಿ ನಂತರ ಅನ್ನ ಪ್ರಸಾದದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

      ತೀಯಾ ಸಮಾಜ ಯ.ಎ.ಇ.ಯ ಅಧ್ಯಕ್ಷರಾದ ರಾಜೇಶ್ ಪಳ್ಳಿಕೆರೆಯವರು ಪೂಜೆಯಲ್ಲಿ ಅತ್ಯುತ್ತಮ ಭಜನಾ ಕಾರ್ಯಕ್ರಮ ಏರ್ಪಡಿಸಿದ್ದ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರನ್ನು, ಪೂಜಾ ಮಂಟಪವನ್ನು ತಯರಿಸಿದ ದೀಪಕ್ ರಾಜ್ ,ಪುರಂದರ ಶೆಟ್ಟಿಗಾರ್  ಮತ್ತು ಮಾದ್ಯಮದ ಮಿತ್ರರನ್ನು ಅಭಿನಂದಿಸಿದ್ದರು.ಹಾಗೂ ಯು.ಎ.ಇ.ಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಮತ್ತು ಪೂಜೆಗೆ ಆಗಮಿಸಿದ ಭಕ್ತಾದಿಗಳನ್ನು ಸ್ವಾಗತಿಸಿ ಧನ್ಯವಾದವಿತ್ತರು.



Related posts

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ

Mumbai News Desk

ಚುನಾವಣಾ ಆಯೋಗದಿಂದ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

‘ಸಾರಾಭಾಯಿ ವರ್ಸಸ್ ಸಾರಾಭಾಯಿ’, ‘ಜಾನೆ ಭಿ ದೋ ಯಾರೋ’ ಖ್ಯಾತಿಯ ಜನಪ್ರಿಯ ನಟ ಸತೀಶ್ ಶಾ ನಿಧನ

Mumbai News Desk

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk