31 C
Mumbai
March 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.






 

ಮಂಗಳೂರು ನ 12. ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) ಮಂಗಳೂರು ಇದರ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಮಂಗಳೂರಿನ ತಲಪಾಡಿ ನಿವಾಸಿ  ಜಯಲತಾ ಶೆಟ್ಟಿಯವರ ವೈದ್ಯಕೀಯ ಶಸ್ತ್ರಚಿಕಿತ್ಸೆಗಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಮಂಗಳೂರಿನ ಆಶ್ರಯ ಕಾಲೋನಿ ನಿವಾಸಿ ರೇಷ್ಮಾ ಶೆಟ್ಟಿಯವರ ಪುತ್ರ 12 ವರ್ಷದ ರಿತ್ವಿಕ್ ಶೆಟ್ಟಿಯವರು ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ  ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಉಡುಪಿಯ ಹೆಗ್ಗುoಜೆ ಗ್ರಾಮದ ನಿವಾಸಿ  ವಿಜಯ ನಾಯಕ್ ರವರು ಕಾಲಿನ ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ  ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಕಾಸರಗೋಡಿನ ನಿವಾಸಿ  ರವೀಂದ್ರ ರೈ ಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರಾದ ಸಹಾಯ ಧನದ ಚೆಕ್ಕನ್ನು ಅವರ ಪತ್ನಿ  ಸರಸ್ವತಿ ರೈ ಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

 ಮಂಗಳೂರಿನ ಮೂಡಬಿದ್ರೆ ನಿವಾಸಿ ಶ್ರೀ ಶಿವಪ್ಪ ಶೆಟ್ಟಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಅಮರೇಶ್ ಶೆಟ್ಟಿ ತಿರುವಾಜೆ, ಆಹ್ವಾನಿತ ಸದಸ್ಯರಾದ ಶ್ರೀ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.



Related posts

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ

Mumbai News Desk

ಆಂಧ್ರಪ್ರದೇಶ : ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು

Mumbai News Desk

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

Mumbai News Desk