32 C
Mumbai
April 24, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.






 

ಮಂಗಳೂರು ನ 12. ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) ಮಂಗಳೂರು ಇದರ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಮಂಗಳೂರಿನ ತಲಪಾಡಿ ನಿವಾಸಿ  ಜಯಲತಾ ಶೆಟ್ಟಿಯವರ ವೈದ್ಯಕೀಯ ಶಸ್ತ್ರಚಿಕಿತ್ಸೆಗಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಮಂಗಳೂರಿನ ಆಶ್ರಯ ಕಾಲೋನಿ ನಿವಾಸಿ ರೇಷ್ಮಾ ಶೆಟ್ಟಿಯವರ ಪುತ್ರ 12 ವರ್ಷದ ರಿತ್ವಿಕ್ ಶೆಟ್ಟಿಯವರು ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ  ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಉಡುಪಿಯ ಹೆಗ್ಗುoಜೆ ಗ್ರಾಮದ ನಿವಾಸಿ  ವಿಜಯ ನಾಯಕ್ ರವರು ಕಾಲಿನ ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ  ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಕಾಸರಗೋಡಿನ ನಿವಾಸಿ  ರವೀಂದ್ರ ರೈ ಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರಾದ ಸಹಾಯ ಧನದ ಚೆಕ್ಕನ್ನು ಅವರ ಪತ್ನಿ  ಸರಸ್ವತಿ ರೈ ಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

 ಮಂಗಳೂರಿನ ಮೂಡಬಿದ್ರೆ ನಿವಾಸಿ ಶ್ರೀ ಶಿವಪ್ಪ ಶೆಟ್ಟಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಅಮರೇಶ್ ಶೆಟ್ಟಿ ತಿರುವಾಜೆ, ಆಹ್ವಾನಿತ ಸದಸ್ಯರಾದ ಶ್ರೀ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.



Related posts

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

Mumbai News Desk

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk

ಮುಂಬೈ : ಶಾಂತಾ ಸುಬ್ಬಯ್ಯ ನಿಧನ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk