July 23, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.








 

ಮಂಗಳೂರು ನ 12. ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) ಮಂಗಳೂರು ಇದರ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಮಂಗಳೂರಿನ ತಲಪಾಡಿ ನಿವಾಸಿ  ಜಯಲತಾ ಶೆಟ್ಟಿಯವರ ವೈದ್ಯಕೀಯ ಶಸ್ತ್ರಚಿಕಿತ್ಸೆಗಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಮಂಗಳೂರಿನ ಆಶ್ರಯ ಕಾಲೋನಿ ನಿವಾಸಿ ರೇಷ್ಮಾ ಶೆಟ್ಟಿಯವರ ಪುತ್ರ 12 ವರ್ಷದ ರಿತ್ವಿಕ್ ಶೆಟ್ಟಿಯವರು ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ  ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಉಡುಪಿಯ ಹೆಗ್ಗುoಜೆ ಗ್ರಾಮದ ನಿವಾಸಿ  ವಿಜಯ ನಾಯಕ್ ರವರು ಕಾಲಿನ ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ  ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಕಾಸರಗೋಡಿನ ನಿವಾಸಿ  ರವೀಂದ್ರ ರೈ ಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರಾದ ಸಹಾಯ ಧನದ ಚೆಕ್ಕನ್ನು ಅವರ ಪತ್ನಿ  ಸರಸ್ವತಿ ರೈ ಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

 ಮಂಗಳೂರಿನ ಮೂಡಬಿದ್ರೆ ನಿವಾಸಿ ಶ್ರೀ ಶಿವಪ್ಪ ಶೆಟ್ಟಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಅಮರೇಶ್ ಶೆಟ್ಟಿ ತಿರುವಾಜೆ, ಆಹ್ವಾನಿತ ಸದಸ್ಯರಾದ ಶ್ರೀ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.



Related posts

ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮತ್ತು ಸಬಲೀಕರಣ ಸಮಸ್ಯೆಗಳ ಬಗ್ಗೆ ಚರ್ಚೆ.

Mumbai News Desk

ಶ್ರೀನಿವಾಸ ಜೋಕಟ್ಟೆ ಅವರಿಗೆ ‘ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ’ ಪ್ರದಾನ

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ಇರಾನ್-ಅಮೆರಿಕ ಮಹಾಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಜಾಗತಿಕ ತಲ್ಲಣದ ನಡುವೆ ಶಾಂತಿ ಮಾತುಕತೆಗೆ ಉಭಯ ದೇಶಗಳ ಸಮ್ಮತಿ

Mumbai News Desk

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ: ಮುಖ್ಯ ರೂವಾರಿ, ಪುಣೆಯ ರಸಾಯನಶಾಸ್ತ್ರ ಉಪನ್ಯಾಸಕ ಸಿಬಿಐ ವಶಕ್ಕೆ

Mumbai News Desk

ಮೂಲ್ಕಿ: ಅಮ್ಮಂಬಾಳ್ ಸುಬ್ಬರಾವ್ ಪೈ ಸಂಸ್ಮರಣಾ ಕಾರ್ಯಕ್ರಮ.

Mumbai News Desk