30.9 C
Mumbai
June 8, 2026
Mumbai News Kannada
ಪ್ರಕಟಣೆ

   ನ. 19 ;   ಕುಲಾಲ ಸಂಘ ಮುಂಬಯಿ  93ನೇ ವಾರ್ಷಿಕ ಮಹಾಸಭೆ.





ಮುಂಬಯಿ: ಮುಂಬಯಿ ಮಹಾನಗರದ ಅತ್ಯಂತ ಹಿರಿಯ ಹಾಗೂ ಪ್ರತಿಷ್ಠಿತ ಜಾತಿಯ ಸಂಸ್ಥೆಗಳೊಂದಾದ ಕುಲಾಲ ಸಂಘ ಮುಂಬಯಿ ಇದರ 93ನೇ ವಾರ್ಷಿಕ ಮಹಾಸಭೆಯು ನ. 19 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 10ಕ್ಕೆ ಸರಿಯಾಗಿ ಪೇಜಾವರ ಮಠದ ಸಭಾಗ್ರಹ, ಯೋಗ ಇನ್ಸ್ಟಿಟ್ಯೂಟ್ ನ ಹಿಂಬದಿ , ಪ್ರಭಾತ್ ಕಾಲೊನಿ, ಸಂತಾಕ್ರುಜ್ (ಪೂ) ಮುಂಬಯಿ 400055 ಇಲ್ಲಿ ಸಂಘದ ಅಧ್ಯಕ್ಷರಾದ ರಘು ಎ .ಮೂಲ್ಯ ಪಾದೆ ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.

ಮಹಾಸಭೆಯಲ್ಲಿ ವಾರ್ಷಿಕ ವರದಿ, ಆಯ – ವ್ಯಯ ವಿವರವನ್ನು ಸಭೆಯ ಮುಂದಿಟ್ಟು ಮಂಜೂರು ಮಾಡುವುದು, ನೂತನ ಲೆಕ್ಕ ಪರಿಶೋಧಕರ ನೇಮಕ , ಸಂಘದ ಹಿರಿಯ ಸಮಾಜ ಸಾಧಕರಾದ ಕುಲಾಲ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಹಾಗೂ ಜ್ಯೋತಿ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್ ಬಿ ಸಾಲಿಯಾನ್, ಸಂಘದ ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹಾಗೂ ಗೋರೆಗಾಂವ್ ನ ಸದ್ಗುರು ನಿತ್ಯಾನಂದ ಆಶ್ರಮದ ಅಧ್ಯಕ್ಷ ರಾಘು ಆರ್ ಮೂಲ್ಯ ಗೋರೆಗಾಂವ್, ಸಂಘದ ಮೀರರೋಡ್ – ವಿರಾರ್ ಸ್ಥಳೀಯ ಸಮಿತಿಯ  ಸಕ್ರಿಯ ಸದಸ್ಯ ಹಾಗೂ ಅಮೂಲ್ಯ ಪತ್ರಿಕೆಯ ಸಂಪಾದಕ ಮಂಡಳಿಯ ಸದಸ್ಯ ರಘುನಾಥ್ ಕರ್ಕೇರ ಬಾಯಂಧರ್ ಇವರನ್ನು ಸನ್ಮಾನಿಸಲಾಗುವುದು.

 ಸಂಘಕ್ಕೆ ವಿಶೇಷವಾಗಿ ಶ್ರಮಿಸಿದ  ದಿ.  ಪಿ.ಕೆ . ಸಾಲಿಯಾನ್ ಸ್ಮರಣಾರ್ಥ ರೋಲಿಂಗ್ ಶೀಲ್ಡ್ ಸ್ಮರಣಿಕೆಯನ್ನು  ರೇಣುಕಾ. ಎಸ್. ಸಾಲಿಯಾನ್, ದಿ. ಪಿ .ಜಿ.ಮೂಲ್ಯ ಸ್ಮರಣಾರ್ಥ ನೀಡುವ ರೋಲಿಂಗ್ ಕಪ್ ನ್ನು ಹರಿಯಪ್ಪ .ಕೆ. ಮೂಲ್ಯ ದೊಂಬಿವಲಿ, ದಿ. ಆರ್. ಎಂ.ಮಡ್ವ ಸ್ಮರಣಾರ್ಥ ರೋಲಿಂಗ್ ಶೀಲ್ಡ್ ನ್ನು ಜಯ ಅಂಚನ್ ರವರಿಗೆ ನೀಡಿ ಗೌರವಿಸಲಾಗುವುದು.

   ಈ ಸಲದ ವಿಧ್ಯಾರ್ಥಿಗಳಿಗೆ ಪ್ರತಿಭೆ ಪುರಸ್ಕಾರ,ವಿಧ್ಯಾರ್ಥಿ ವೇತನ ,ದತ್ತು ಸ್ವೀಕಾರ ದಾನಿಗಳಿಗೆ ಸನ್ಮಾನ,  ಘನ ಪೋಷಕ ಮತ್ತು ಮಹಾ ಪೋಷಕರನ್ನು ಸತ್ಕರಿಸಲಾಗುವುದು  .

  ಮನರಂಜನೆಯ ಕಾರ್ಯಕ್ರಮದ ಅಂಗವಾಗಿ ಉಪಸಮಿತಿಯ ಮಹಿಳಾ ವಿಭಾಗದವರಿಂದ ನೃತ್ಯ ಕಾರ್ಯಕ್ರಮ ಜರಗಲಿದೆ.  ಸದಸ್ಯರೆಲ್ಲರೂ ಕ್ಲಪ್ತ ಸಮಯಕ್ಕೆ ಹಾಜರಿದ್ದು ಈ ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ  ಸಂಘದ    ಗೌ ಅಧ್ಯಕ್ಷರಾದ ದೇವದಾಸ್ ಕುಲಾಲ್, ಉಪಾಧ್ಯಕ್ಷರು ಡಿ ಐ ಮೂಲ್ಯ . ಗೌ.ಪ್ರ. ಕಾರ್ಯದರ್ಶಿ ಕರುಣಾಕರ್ ಸಾಲಿಯಾನ್ .,ಕೋಶಾಧಿಕಾರಿ ಜಯ ಅಂಚನ್. ಮಹಿಳಾ  ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಗುಜರನ್ ಮತ್ತು ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರು ವಿನಂತಿಸಿದ್ದಾರೆ.



Related posts

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ: ಫೆ. 22ರಂದು ವಾರ್ಷಿಕ ಮಹಾಪೂಜೆ, ಮಹಾಸಭೆ

Mumbai News Desk

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk