
ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಉಡುಪಿಯ ಹಾವಂಜೆ ನಿವಾಸಿ ಗಣೇಶ್ ಶೆಟ್ಟಿಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮತ್ತು ಗಣೇಶ್ ಶೆಟ್ಟಿಯವರ ಪುತ್ರಿ ಪ್ರತಿಭಾವಂತ ಕರಾಟೆ ಪಟು ಕುಮಾರಿ ರಿಯಾ ಶೆಟ್ಟಿಯವರಿಗೆ ಕ್ರೀಡೆಗೆ ಪ್ರೋತ್ಸಾಹವಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಗಣೇಶ್ ಶೆಟ್ಟಿಯವರ ಪತ್ನಿ ಜಯಲಕ್ಷ್ಮಿ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ,ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ನೀತಾ ರಾಜೇಶ್ ಶೆಟ್ಟಿ, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.