July 23, 2026
Mumbai News Kannada
ಪ್ರಕಟಣೆ

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ







   ನವಿ ಮುಂಬಯಿ  ನ 23.  ಕರ್ನಾಟಕ ಸಂಘ ಪನ್ವೆಲ್ ನಲ್ಲಿ ತಾರೀಕು 26 /11 /2023  ರವಿವಾರ ಕರ್ನಾಟಕ ರಾಜ್ಯೋತ್ಸವದ ಆಚರಣೆಯನ್ನು ಸಂಘದ ಅಧ್ಯಕ್ಷರಾದ  ಭಾಸ್ಕರ್ ಶೆಟ್ಟಿ ಪದ್ಮ ಇವರ ಅಧ್ಯಕ್ಷತೆಯಲ್ಲಿ ಆಚರಿಸಲಾಗುವುದು .

ಈ ಪ್ರಯುಕ್ತ ಅದೇ ದಿನ ಬೆಳಿಗ್ಗೆ 8:00 ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಘದಲ್ಲಿ ರಕ್ತದಾನ ಶಿಬಿರವು ನೆರವೇರಲಿರುವುದು. ಸಂಜೆ 4:30 ಗಂಟೆಯಿಂದ ಸಂಘದ ಸಭಾಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ದಿನದ ಆಚರಣೆ ಕಾರ್ಯಕ್ರಮವು ನಡೆಯಲಿದ್ದು, ಸದಸ್ಯರಿಂದ ಹಾಗೂ ಸದಸ್ಯರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ಸನ್ಮಾನ  ಕಾರ್ಯಕ್ರಮ ನಡೆಯಲಿರುವುದು. 

ಸಭಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ  ಭಾಸ್ಕರ್ ಶೆಟ್ಟಿ ಅವರು ವಹಿಸಿಕೊಳ್ಳುವರು .ಮುಖ್ಯ ಅತಿಥಿಗಳಾಗಿ ಗೊರೆಗಾವ್ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ  ದೇವಲ್ಕುಂದ ಭಾಸ್ಕರ್ ಶೆಟ್ಟಿ ಅವರು ಹಾಗೂ ಕನ್ನಡ ಭವನ ಎಜುಕೇಶನ್ ಸೊಸೈಟಿಯ ಶಾಲೆಯ ಮುಖ್ಯೋಪಾದಾಯಿನಿ  ಅಮೃತ ಶೆಟ್ಟಿ ಅವರು ಉಪಸ್ಥಿತರಿರುವರು. ಜೊತೆಗೆ ಸಂಘದ ಕಾರ್ಯ ಧ್ಯಕ್ಷರಾಗಿರುವ  ನಗರ ಸೇವಕರಾದ  ಸಂತೋಷ್ .ಜಿ. ಶೆಟ್ಟಿಯವರು, ಸಂಘದ ಪದಾಧಿಕಾರಿಗಳು ಹಾಗೂ ಮಹಿಳಾ ವಿಭಾಗದ ಅಧ್ಯಕ್ಷ  ಶಶಿಕಲಾ ದಾಬ್ಕೆ ಅವರು ಉಪಸ್ಥಿತರಿರುವರು.

 ಇದೇ ಸಂದರ್ಭದಲ್ಲಿ ಸದಸ್ಯರೊಂದಿಗೆ ದೀಪಾವಳಿ ಹಬ್ಬದ ಆಚರಣೆಯ ಕಾರ್ಯಕ್ರಮವು ನಡೆಯಲ್ಪಡುತ್ತದೆ. ಕೊನೆಗೆ ಪ್ರೀತಿ ಭೋಜನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಸಂಪೂರ್ಣ ಒಂದು ದಿನ ಪೂರ್ತಿಯ ಈ ಎಲ್ಲ ಕಾರ್ಯಕ್ರಮಕ್ಕೆ ಎಲ್ಲಾ ಸದಸ್ಯರು ಹಾಗೂ ಪರಿಸರದ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಕರ್ನಾಟಕ ಸಂಘದ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳು ವಿನಂತಿಸಿರುತ್ತಾರೆ.



Related posts

ಮೈಸೂರು ಅಸೋಸಿಯೇಷನ್, ಮುಂಬೈ ನ.25 ರಂದು ಕನಕ ಜಯಂತಿ ಆಚರಣೆ

Mumbai News Desk

ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಏಪ್ರಿಲ್ 24 ರಿಂದ 26 ರವರೆಗೆ

Mumbai News Desk

ಮೇ 31, 2026 ರಂದು ಕುಮಾರಿ ಲಿಖಿತಾ ರತ್ನಾಕರ ಕರ್ಕೇರರ ಭರತನಾಟ್ಯಂ ಪ್ರಥಮ ರಂಗ ಪ್ರವೇಶ

Mumbai News Desk

ಮುಂಬಯಿ: ವಡಾಲಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಇಂದು (ಮಾ. 22) ಶ್ರೀ ಮಹಾವೀರ ಕಾಲೇಜು ಹಳೆಯ ವಿದ್ಯಾರ್ಥಿಗಳ ವಿಶೇಷ ಸ್ನೇಹ ಮಿಲನ

Mumbai News Desk

ಮಾ. 1: ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ

Mumbai News Desk

ಕನ್ನಡ ಸಂಘ ಸಾಂತಾಕ್ರೂಜ್ : ಫೆ. 10 ರಂದು 66ನೇ ವಾರ್ಷಿಕೋತ್ಸವ;ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣಾ ಸಮಾರಂಭ

Mumbai News Desk