30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವ ಸಮಿತಿ, ಕಿಸನ್ ನಗರ ಥಾಣೆ – ಡಿ.16, ಮತ್ತು 17ರಂದು 23ನೇ ವಾರ್ಷಿಕ ಮಹಾಪೂಜೆ.





ಥಾಣೆ ಪಶ್ಚಿಮ ಕಿಸನ್ ನಗರ, ಒಧವ್ ಬಾಗ್ ಸಮೀಪ ಕಳೆದ 23 ವರ್ಷಗಳಿಂದ ಶ್ರೀ ಅಯ್ಯಪ್ಪ ಸ್ವಾಮಿಯ ಮಂದಿರವನ್ನು ಸ್ಥಾಪಿಸಿ ,ಆರಾದಿಸಿಕೊಂಡು ಬರುತ್ತಿರುವ ಶ್ರೀ ಅಯ್ಯಪ್ಪ ಸೇವ ಸಮಿತಿಯ 23ನೇ ವಾರ್ಷಿಕ ಮಹಾಪೂಜೆಯು ಡಿ.17 ರಂದು ಕಿಸನ್ ನಗರದ ಒಧವ್ ಬಾಗ್ ಮೈದಾನದಲ್ಲಿ ಜರಗಲಿದೆ.
ಕಾರ್ಯಕ್ರಮದ ವಿವರ :
ಡಿ.16 ರಂದು ಸಂಜೆ 6.15 ಗಂಟೆಗೆ ಶ್ರೀ ಸತ್ಯನಾರಾಯಣ ಮಹಾಪೂಜೆ.
ರಾತ್ರಿ 8 ಗಂಟೆಗೆ, ಪ್ರತಿಭಾ ಪುರಸ್ಕಾರ
8.30ಕ್ಕೆ ತೀರ್ಥ ಪ್ರಸಾದ ವಿತರಣೆ.
9.ಗಂಟೆಗೆ ಬಿಲ್ಲವರ ಎಸೋಸಿಯೇಶನ್ ಥಾಣೆ ಸ್ಥಳೀಯ ಕಚೇರಿ ಹಾಗೂ ನವೋದಯ ಕನ್ನಡ ಸೇವ ಸಂಘದ ಸದಸ್ಯರಿಂದ ಭಜನೆ.
ಆದಿತ್ಯವಾರ, ಡಿ.17 ರಂದು ಬೆಳ್ಳಿಗ್ಗೆ 4.30 ಗಂಟೆಗೆ ನಿತ್ಯ ಶರಣು ಘೋಷ
ಬೆಳ್ಳಿಗ್ಗೆ 8 ಗಂಟೆಗೆ ಪಂಚ್ ಪರಮೇಶ್ವರ ದೇವಸ್ಥಾನದಿಂದ ಡಿಸೋಜ ನಗರ ಮುಖೇನ ಶಿವಾಜಿ ನಗರ ,ಅಲ್ಲಿಂದ ಪೂಜೆ ನಡೆಯುವ ಮೈದಾನಕ್ಕೆ ಮೆರವಣಿಗೆ.
10.30ಕ್ಕೆ ಸಹಸ್ರ ನಾಮಾರ್ಚನೆ
11.30ಕ್ಕೆ ಹೂವಿನ ಪೂಜೆ
12.30ಕ್ಕೆ ಕರ್ಪುರ ಆರತಿ, ಮಹಾ ಆರತಿ.
1 ಗಂಟೆಗೆ ಪ್ರಸಾದ ವಿತರಣೆ ಹಾಗೂ ಮಹಾ ಅನ್ನ ಸಂತರ್ಪಣೆ.

ಡಿ.16 ರಂದು ನಡೆಯುವ ಶ್ರೀ ಸತ್ಯನಾರಾಯಣ ಮಹಾಪೂಜೆ, ಮತ್ತು ಡಿ.17 ರಂದು ಜರಗಲಿರುವ ಶ್ರೀ ಅಯ್ಯಪ್ಪ ಮಹಾಪೂಜೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ,ಶ್ರೀ ಅಯ್ಯಪ್ಪ ಸ್ವಾಮಿಯ ಪ್ರಸಾದ ಸ್ವೀಕರಿಸುವಂತ್ತೆ ,ಸಮಿತಿಯ ಅಧ್ಯಕ್ಷರಾದ ಜಯರಾಮ ಎಸ್.ಪೂಜಾರಿ, ಉಪಾಧ್ಯಕ್ಷ ರಾಜೇಶ್ ರೈ, ಕಾರ್ಯದರ್ಶಿ ರಮೇಶ್ ಎಸ್.ಕೋಟ್ಯಾನ್, ಜತೆ ಕಾರ್ಯದರ್ಶಿ ವಿನಯ ಪಿ.ಸನಿಲ್, ಕೋಶಾಧಿಕಾರಿ ನರೇಶ್ ಬಿ.ಪೂಜಾರಿ, ಜತೆ ಕೋಶಾಧಿಕಾರಿ ಪ್ರಶಾಂತ್ ಕೆ.ಶೆಟ್ಟಿ, ಸಲಹೆಗಾರರಾದ ರಾಜು ಸಫಲಿಗ, ಉತ್ತಮ್ ಎ. ಗಾಂವ್ಕರ್ ,ಸಮಿತಿಯ ಸದಸ್ಯರು, ಪೂಜಾ ಸಮಿತಿಯ ಸದಸ್ಯರು, ಶಿಬಿರದ ಸ್ವಾಮಿಗಳು ವಿನಂತಿಸಿಕೊಂಡಿದ್ದಾರೆ.

.

.

.

.

.

.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ

Mumbai News Desk

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,

Mumbai News Desk

ಫೆ. 1, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಫೆ.15 ರಂದು ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ 24 ಗಂಟೆಗಳ ಅಖಂಡ ಭಜನೆ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಬೊರಿವಲಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ನಾಗರ ಪಂಚಮಿ ಉತ್ಸವ

Mumbai News Desk