32 C
Mumbai
March 7, 2026
Mumbai News Kannada
ಪ್ರಕಟಣೆ

ಡಿ.10 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ.





ಡೊಂಬಿ ವಲಿ ಪಶ್ಚಿಮ, ಟೇಲ್ಕಸ್ ವಾಡಿ ಯ ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಇದರ 10ನೇ ವರ್ಷದ ಅಯ್ಯಪ್ಪ ಸ್ವಾಮಿಯ ಪಡಿ ಪೂಜೆ ಮತ್ತು ಮಹಾಪೂಜೆ ಇದೇ ಬರುವ ದಿನಾಂಕ 10-12-2023 ಆದಿತ್ಯವಾರದಂದು ಶ್ರೀ ಶರತ್ ಗುರುಸ್ವಾಮಿ ಕುಡ್ಗಿಹಿತ್ಲು ಇವರ 17ನೇ ವರ್ಷದ ಶಬರಿಮಲೆ ಯಾತ್ರೆ ಹಾಗೂ ಇವರ ಮಾರ್ಗದರ್ಶನದಲ್ಲಿ
ನಡೆಯಲಿರುವುದು.

ಬೆಳಿಗ್ಗೆ ಗಂಟೆ 6:00 ಕ್ಕೆ ಗಣಹೋಮ, 8:00 ಕ್ಕೆ ಭಜನೆ, ಮಧ್ಯಾಹ್ನ ಗಂಟೆ 12:00 ಕ್ಕೆ ಪಡಿಪೂಜೆ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ಜರುಗಲಿದೆ.

ಶ್ರೀ ಸ್ವಾಮಿಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಈ ವರ್ಷದ ಮಾಲಾಧಾರರಾದ ಶ್ರೀ ಶರತ್ ಗುರುಸ್ವಾಮಿ, ಶ್ರೀ ದಿನೇಶ್‌ ಸ್ವಾಮಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿ, ಶ್ರೀ ಹರೀಶ್ ಸ್ವಾಮಿ, ಶ್ರೀ ಸುಧಾಕರ್ ಸ್ವಾಮಿ, ಶ್ರೀ ಸುರೇಶ್ ಸ್ವಾಮಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ವಿಶೇಷ ಸೂಚನೆ :

ಶ್ರೀ ಶಬರಿ ಆಯ್ಯಪ್ಪ ಭಜನಾಮಂಡಳಿ, ಡೊಂಬಿವಲಿ (ಪಶ್ಚಿಮ) ಇವರ ದಶಮಾನೋತ್ಸವದ ಸಲುವಾಗಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರವಿವಾರ ದಿನಾಂಕ 17/12/2023 ರಂದು ಅಪರಾಹ್ನ 3.30 ಕ್ಕೆ ಸರಿಯಾಗಿ ಲೇವಾಭವನ, ದತ್ತ ನಗರ, ಡೊಂಬಿವಲಿ (ಪೂರ್ವ) ಇಲ್ಲಿ ಸಿರಿಕಲಾ ಮೇಳ ಬೆಂಗಳೂರು ಹಾಗೂ ಅತಿಥಿ ಕಲಾವಿದರಿಂದ “ಕಂಸ ದಿಗ್ವಿಜಯ-ಕಂಸ ವಧೆ” ಎಂಬ ಕನ್ನಡ ಪೌರಾಣಿಕ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ. ಕಲಾಭಿಮಾನಿಗಳಾದ ತಾವೆಲ್ಲರು ಆಗಮಿಸಿ ಈ ಕಾರ್ಯಕ್ರಮವನ್ನು ಚಂದಗಾಣಿಸಿ ಕೋಡಬೇಕಾಗಿ ವಿನಂತಿ.

.

.

.



Related posts

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk

ಸಾಂತಾಕ್ರೂಸ್ :  ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಅ 3 ರಿಂದ 11 ವರೆಗೆ ನವರಾತ್ರಿ ಉತ್ಸವ.

Mumbai News Desk

ಸಿರಿಕಲಾ ಮೇಳದ ಪುಣೆ-ಮುಂಬೈ ದಶಮಾನೋತ್ಸವ ತಿರುಗಾಟ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ, ಇರಾನಿ ಕಾಲೋನಿ ಮಲಾಡ್.ಭಕ್ತಿ ಸಂಭ್ರಮದೊಂದಿಗೆ ಶನಿ ಜಯಂತಿ ಆಚರಣೆ.

Mumbai News Desk

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk