27.7 C
Mumbai
July 23, 2026
Mumbai News Kannada
ಸುದ್ದಿ

ಆನಂದ ಶೆಟ್ಟಿ ಎಕ್ಕಾರ್ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಯ್ಕೆ







ಆನಂದ ಶೆಟ್ಟಿ ಎಕ್ಕಾರ್ ಪರಿಚಯ

ಮಹಾರಾಷ್ಟ್ರದ ತುಳು ಸಾಂಸ್ಕೃತಿಕ ನಗರವೆಂದು ಹಾಗೂ ಮಹಾರಾಷ್ಟ್ರದ ತುಳುನಾಡೆಂದೇ ಖ್ಯಾತಿಯನ್ನು ಪಡೆದ ಡೊಂಬನಹಳ್ಳಿ ( ಡೊಂಬಿವಲಿ) ನಗರದ ನಿವಾಸಿಯಾಗಿರುವ ಶ್ರೀ ಆನಂದ ದೇಜು ಶೆಟ್ಟಿ ಎಕ್ಕಾರ್ ಇವರು ಮೂಲತ ಶ್ರೀ ದುರ್ಗಾಪರಮೇಶ್ವರಿ ನೆಲೆನಿಂತ ಕಟೀಲು ಸಮೀಪದ ಎಕ್ಕಾರಿನ ಅಜೀಲರ ಮನೆಯವರು, ತಾಯಿ ಸುಂದರಿ ದೇಜು ಶೆಟ್ಟಿ, ದೇಜು ಶೆಟ್ಟಿ ತಂದೆ ಪೊಳಲಿಯ ಅದೂರಿನವರು ಮೂರು ಗಂಡು ಎರಡು ಹೆಣ್ಣು ಮಕ್ಕಳಲ್ಲಿ ಇವರು ಮೂರನೇ ಯವರು ಎಕ್ಕಾರು ಕೊಡಮಣಿತ್ತಾಯ ಮತ್ತು ಶ್ರೀ ಕಟೀಲು ದುರ್ಗೆಯ ಪರಮ ಭಕ್ತರಾದ ಶ್ರೀಯುತರು ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ತನ್ನ ವಿದ್ಯಾಭ್ಯಾಸವನ್ನು ಎಕ್ಕಾರು ಸರಕಾರಿ ಶಾಲೆಯಲ್ಲಿ , 6 ನೇ ತರಗತಿಯಿಂದ ಎಸ್.ಎಸ್.ಸಿ ವರೆಗಿನ ವಿದ್ಯಾಭ್ಯಾಸವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ಶಾಲೆಯಲ್ಲಿ ಪೂರೈಸಿ ಪಿಯುಸಿ ಶಿಕ್ಷಣವನ್ನು ದಾಮಸ್ ಕಟ್ಟೆ ಕಿನ್ನಿಗೋಳಿಯ ಪೊಂಪಯಿ ಕಾಲೇಜ್‌ನಲ್ಲಿ ಪೂರೈಸಿದರು ಉನ್ನತ ಶಿಕ್ಷಣವನ್ನು ಮಂಗಳೂರಿನ ಸೆಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪೂರೈಸಿದರು ಮತ್ತು ಬದುಕು ನಿರ್ವಹಣೆಗಾಗಿ 1983 ರಲ್ಲಿ ಮಾಯನಗರಿ ಮುಂಬಯಿಗೆ ಅಗಮಿಸಿ ಎಂ.ಬಿ.ಎ ವಿದ್ಯಾಭ್ಯಾಸವನ್ನು ಮುಂಬಯಿಯ ಸಿದ್ಧಾರ್ಥ್ ಕಾಲೇಜ್ ನಲ್ಲಿ ಪೂರೈಸಿ ತಾನೊಬ್ಬ ಉದ್ಯೋಗಪತಿ ಯಾಗ ಬೇಕೆಂಬ ಕನಸ್ಸನ್ನು ಕಂಡು 1985 ರಲ್ಲಿ ಬದ್ಲಾಪುರ ಇಂಡಸ್ಟ್ರಿಯಲ್ ಪರಿಸರದಲ್ಲಿ ನೋವಕೆಮ್ ಇಂಡಸ್ಟ್ರೀಸ್, ನೋವ ಸ್ಪೆಸಾಲಿಟಿ ಕೆಮಿಕಲ್ಸ್ ಎಂಬ ತಮ್ಮ ಸ್ವಂತ ಕೆಮಿಕಲ್ ಉದ್ಯಮವನ್ನು ಪ್ರಾರಂಬಿಸಿ ಅದರಲ್ಲಿ ಯಶಸ್ಸುನ್ನು ಕಂಡಿದ್ದಾರೆ.
ಹಲವಾರು ಸಂಘ- ಸಂಸ್ಥೆಯ ಸದಸ್ಯರಾಗಿರುವ ಆನಂದ ಶೆಟ್ಟಿ, ಪ್ರತಿಷ್ಠಿತ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯಲ್ಲಿ 6 ವರ್ಷಗಳ ಕಾಲ ಉಪ ಕಾರ್ಯಾಧ್ಯಕ್ಷರಾಗಿ ಸದ್ಯ ಕಾರ್ಯಾಧ್ಯಕ್ಷರಾಗಿ ಅಯ್ಕೆಯಾಗಿದ್ದಾರೆ ಹೊರನಾಡ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಯಾದ ಕರ್ನಾಟಕ ಸಂಘ ಡೊಂಬಿವಲಿ ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.ಡೊಂಬಿವಲಿ ನಗರದ ಪ್ರತಿಯೊಂದು ಸಂಘ- ಸಂಸ್ಥೆಗಳ ನಿಕಟ ಸಂಬಂಧವನ್ನು ಹೊಂದಿರುವ ಶೆಟ್ಟರು ಪತ್ನಿ ಲತಾ, ಪುತ್ರಿಯರಾದ ದಿವ್ಯಾ ಕರುಣಾಕರ ಶೆಟ್ಟಿ, ನಿಧಿ ಶೆಟ್ಟಿ, ಅಳಿಯ ಕರುಣಾಕರ ಶೆಟ್ಟಿ ಹಾಗೂ ಮೊಮ್ಮಕ್ಕಳ ಸಹಿತ ಸಂತೃಪ್ತ ಬದುಕನ್ನು ಸಾಗಿಸುತ್ತಿದ್ದಾರೆ.



Related posts

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk

ಮೂಡುಬಿದ್ರೆ ಮಹಾವೀರ ಕಾಲೇಜಿನ ವಜ್ರ ಮಹೋತ್ಸವದ ಸಿದ್ಧತೆಗಾಗಿ ಮಾ. 22ರಂದು ಮುಂಬೈನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆ

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk