30.5 C
Mumbai
June 8, 2026
Mumbai News Kannada
ಮುಂಬಯಿ

ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ.





ಮುಂಬಯಿ : ಖ್ಯಾತ ನೃತ್ಯ ಕಲಾವಿದೆ ವಿದೂಶಿ ಗೀತಾ ಸಾಲ್ಯಾನ್ ಅವರ ನಟನಾ ನೃತ್ಯ ಅಕಾಡೆಮಿ  ಪೊವಾಯಿಯ 11ನೇ ವಾರ್ಷಿಕೋತ್ಸವ ಸಮಾರಂಭವು ಡಿ. 17ರಂದು ಮಧ್ಯಾಹ್ನ ೨ ರಿಂದ ಗೋಕುಲ ಶ್ರೀಕೃಷ್ಣ ಕ್ಷೇತ್ರದ ಸಭಾಗೃಹ ಸಾಯನ್ ಇಲ್ಲಿ ನಡೆಯಿತು .  ಉದಯೋನ್ಮುಖ ಎಳೆಯ ಕಲಾವಿದರು ವಿವಿಧ ನೃತ್ಯಗಳಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ವಿದುಷಿ ಗೀತಾ ವೇದ್ ಪ್ರಾರಂಭದಲ್ಲಿ ಸ್ವಾಗತಿಸಿ ನೃತ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

. ನೃತ್ಯ ಕಾರ್ಯಕ್ರಮ ಬಳಿಕ ವಿದ್ಯಾರ್ಥಿಗಳಿಗೆ ಎಲ್ಲರಿಗೂ ವಿಶೇಷವಾದ ಯ ಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮುಂಬೈ  ಕುಲಾಲ ಸಂಘದ ಅಧ್ಯಕ್ಷ ರಘುಮೂಲ್ಯ. ಜ್ಯೋತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯದರ್ಶಿ ಪಿ ಶೇಖರ್ ಮುಲ್ಯ ಬಿ ಎಸ್ ಕೆ ಪಿ ಅಸೋಸಿಯೇಷನ್ ಉಪಾಧ್ಯಕ್ಷ ವಾಮನ ಹೊಳ್ಳ. ಮತ್ತು ವೇದ ಅವರು ಉಪಸ್ಥರಿದ್ದರು.

ಗೀತಾ ವೇದ್ ಸ್ಥಾಪಿಸಿದ ನಟನಾ ನೃತ್ಯ ಅಕಾಡೆಮಿ ಪೊವೈ, ಮರೋಲ್ ಮತ್ತು ನಹರ್‌ನಲ್ಲಿ ತನ್ನ ತರಗತಿಗಳನ್ನು ಹೊಂದಿದೆ. ಇವರು ಮುಂಬೈನ ನಳಂದ ನೃತ್ಯ ಕಲಾ ಮಹಾವಿದ್ಯಾಲಯದಿಂದ ಭರತನಾಟ್ಯದಲ್ಲಿ ಲಲಿತಕಲೆಗಳ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಪವಾರ್ ಪಬ್ಲಿಕ್ ಸ್ಕೂಲ್ ಭಾಂಡಪ್‌ನಲ್ಲಿ ಕಾರ್ಯನಿರತರಾಗಿದ್ದಾರೆ. 17ನೇ ಡಿಸೆಂಬರ್ 2023 ರಂದು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶನ ನೀಡಿದ್ದಾರೆ.

ಮುಂಬಯಿಯ ನಲಂದಾ ನೃತ್ಯ ಕಲಾ ಮಹಾವಿದ್ಯಾಲಯದಿಂದ ಭರತ ನಾಟ್ಯವನ್ನು ಅಭ್ಯಾಸಮಾಡಿ ಇದೀಗ ಪವಾರ್ ಪಬ್ಲಿಕ್ ಶಾಲೆಯಲ್ಲಿ ನೃತ್ಯ ಶಿಕ್ಷಕಿಯಾಗಿ ದುಡಿಯುತ್ತಿದ್ದಾರೆ. ದೇಶದ ವಿವಿದೆಡೆ ನೃತ್ಯವನ್ನು ಪ್ರದರ್ಶಿಸಿ ಜನಪ್ರಿಯರಾದ  ಗೀತಾ ಸಾಲ್ಯಾನರು ಪುಣೆ ವಿಶ್ವವಿದ್ಯಾಲಯದ ಎಂ.ಎ.  ವಿದ್ಯಾರ್ಥಿನಿ.  ಗೀತಾ ಸಾಲ್ಯಾನ್ ಅವರು ನೂರಾರು ಮಕ್ಕಳನ್ನು ನೃತ್ಯಕಲಾವಿದರನ್ನಾಗಿ ಮಾಡಿರುವರು

———- 



Related posts

ಬಿಲ್ಲವರ ಅಸೋಸಿಯೇಶನಿನ ಮೀರಾ ರೋಡ್ ಸ್ಥಳೀಯ ಕಚೇರಿಯ ವತಿಯಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಸಮಿತಿಯಲ್ಲಿ ಗಣರಾಜ್ಯೋತ್ಸವ ಆಚರಣೆ.

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk

ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ಶ್ರೀ ಶನೀಶ್ವರ ದೇವರ 47ನೇ ವಾರ್ಷಿಕ ಮಹಾಪೂಜೆ: ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆ!

Mumbai News Desk

ಮುಂಬಯಿಯ  ಕುಲಾಲ ಸಂಘದ ಯುವ ವಿಭಾಗದವತಿಯಿಂದ ಕ್ರೀಡೋತ್ಸವ, ಬಹುಮಾನ ವಿತರಣೆ

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ, ಗುರುಪೂರ್ಣಿಮೆ ಆಚರಣೆ – 2024

Mumbai News Desk