
ಚಿತ್ರ ವರದಿ : ದಿನೇಶ್ ಕುಲಾಲ್
ಮುಂಬಯಿ, ಡಿ.28- ಉಪನಗರ ಸಾಂತಾಕ್ರೂಸ್ ಪಶ್ಚಿಮದ ಮಿಲನ್ ಸಬ್ ವೇ ರೋಡ್, ಆಶಾ ಚಾಳ್ನಲ್ಲಿ ಮಂತ್ರ ದೇವಿಯ ಆರಾಧಕ, ಧಾರ್ಮಿಕ ಚಿಂತಕ ಕುತ್ಯಾರು ವಾಸುದೇವ ಬಂಜನ್ ಮಾರ್ಗದರ್ಶನದಲ್ಲಿ ಸ್ಥಾಪಿಸಿರುವ ಶ್ರೀಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಆಡಳಿತದ ಶ್ರೀಮಂತ್ರ ದೇವಿ ಕ್ಷೇತ್ರದ ವಾರ್ಷಿಕ ಮಹಾಪೂಜೆಯು ಡಿ.26 ಮಂಗಳ ವಾರ. ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಬೆಳಿಗ್ಗೆ ಶ್ರೀದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮ-ಹವನ, ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ನಡೆಯಿತು.
ಮಹಾಪ್ರಸಾದ ಅನ್ನದಾನ ತಡ ಸಂಜೆವರೆಗೆ ಸಂಜೆ ನಡೆಯಿತು..
ಬೆಳಿಗ್ಗೆ ಶ್ರೀದೇವಿಯ ಆವೇಶ ನಡೆಯಿತು. ರಾಜೇಶ್ ಕೋಟ್ಯಾನ್ ಮತ್ತು ದಿನೇಶ್ ಕೋಟ್ಯಾನ್ ಬಳಗದವರ ವಾದ್ಯ ವಲಗ ಸೇವೆ ನಡೆಯಿತು .ದೇವರ ಮಂಟಪವನ್ನು ರಂಗ ವಿನ್ಯಾಸಗಾರ .ಕಲಾವಿದ ಅಶೋಕ್ ಕೊಡ್ಯಡ್ಕ ಯ ಸಿಂಗಾರಿ ಸಿದ್ದರು.

ಈ ಪುಣ್ಯ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ವಿವಿಧ ಜಾತಿಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡು ಮಹಾಪ್ರಸಾದ ಅನ್ನದಾನವನ್ನು ಸ್ವೀಕರಿಸಿದರು . ಮೊತ್ತೇಸರರಾದ ವಾಸುದೇವ ಬಂಜನ್ , ಅಧ್ಯಕ್ಷರು, ಟ್ರಸ್ಟಿ, ಮಧ್ಯಸ್ಥರು, ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಮತ್ತು ಭಕ್ತರು . ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದೆ