July 22, 2026
Mumbai News Kannada
ಮುಂಬಯಿ

ಅಯ್ಯಪ್ಪ ಸ್ವಾಮಿ ಭಕ್ತವೃಂದ ಚೆಂಬೂರು, ವಾರ್ಷಿಕ ಪಡಿಪೂಜೆ ಮತ್ತು ಮಹಾಪೂಜೆ







ಶ್ರೀ ಉದ್ಭವ ದುರ್ಗಾಪರಮೇಶ್ವರಿ ಮಂದಿರ, ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಚೆಂಬೂರು, ಅಯ್ಯಪ್ಪ ಸ್ವಾಮಿಯ ವಾರ್ಷಿಕ ಪಡಿಪೂಜೆ ಮತ್ತು ಮಹಾಪೂಜೆ

ಚೆಂಬೂರು ಆಶೀಶ್ ಥೀಯೇಟರ್ ಸಮೀಪದ ಶಬರಿ ಶಾನ್ ಟವರ್ ನ ಬದಿಯಲ್ಲಿರುವ ಶ್ರೀ ಉದ್ಭವ ದುರ್ಗಾಪರಮೇಶ್ವರಿ ಮಂದಿರದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ವಾರ್ಷಿಕ ಪಡಿಪೂಜೆ, ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ಡಿಸೆಂಬರ್ 25 ಸೋಮವಾರದಂದು ಶ್ರೀ ರಾಜು ದೇವಾಡಿಗ ಗುರುಸ್ವಾಮಿ ತ್ರಾಸಿ ಇವರ ಮಾರ್ಗದರ್ಶನದಲ್ಲಿ ಶಿಬಿರದ ಉದಯ ದೇವಾಡಿಗ ಗುರುಸ್ವಾಮಿ, ರಾಘವೇಂದ್ರ ದೇವಾಡಿಗ ಗುರುಸ್ವಾಮಿ ಮತ್ತು ಶ್ರೀಮತಿ ತುಂಗಾ ಕೆ. ದೇವಾಡಿಗರವರ ಮುಂದಾಳತ್ವದಲ್ಲಿ ಜರಗಿತು.

ಅಂದು ಬೆಳಿಗ್ಗೆ ಮಂದಿರದ ಭಜನಾ ಮಂಡಳಿಯವರಿಂದ ಭಜನೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ನವಿಮುಂಬಯಿ ಇವರಿಂದ ಭಜನೆ, ಉದ್ಭವ ದುರ್ಗಾಪರಮೇಶ್ವರಿ ಮಂದಿರದ ಮಹಾ ಆರತಿ, ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆ, ಮಹಾಪೂಜೆ ತದನಂತರ ತೀರ್ಥಪ್ರಸಾದ ವಿತರಣೆಗೊಂಡು, ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ಅನ್ನಪ್ರಸಾದವನ್ನು ಸ್ವೀಕರಿಸಿದರು.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಾಚಿ ಭಂಡಾರಿ ಗೆ ಶೇ 93.40 ಅಂಕ.

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆಯ ಕಾರ್ಯಕ್ರಮ

Mumbai News Desk

ಮುಂಬಯಿಯಲ್ಲಿ “ಕುಲಾಲ ಭವನ ಮಂಗಳೂರು” ಲೋಕಾರ್ಪಣೆ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ಸಂಭ್ರಮದ ನಾಡಹಬ್ಬ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೋಕ್ಷ ರವಿ ಶೆಟ್ಟಿಗೆ ಶೇ 91.80 ಅಂಕ

Mumbai News Desk

ಮುಂಬೈ : ಮೊಗವೀರ ಕೋ-ಆಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿ: 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವ ಸಂಪನ್ನ

Mumbai News Desk