30.9 C
Mumbai
June 8, 2026
Mumbai News Kannada
ಪ್ರಕಟಣೆ

ಜ.6ಕ್ಕೆ ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ, ವಾಗ್ಮಿ, ದಿನೇಶ್ ಮಟ್ಟು ಅವರಿಗೆ ಗೌರವ.





ನಾಡಿನ ಹೆಸರಾಂತ ಪತ್ರಕರ್ತ ,ರಾಜಕೀಯ ವಿಶ್ಲೇಷಕ ,ವಾಗ್ಮಿ, ಬಿಲ್ಲವ ಸಮಾಜದ ಹೆಮ್ಮೆಯ ರತ್ನ ,2023ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ವಿಭಾಗದಲ್ಲಿ ಪಡೆದ ದಿನೇಶ್ ಅಮೀನ್ ಮಟ್ಟು ಅವರಿಗೆ ಜ.6ರಂದು ಮುಂಬೈಯಲ್ಲಿ ಗೌರವಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ಆಶ್ರಯದಲ್ಲಿ ,ಗೋರೆಗಾಂವ್ ಪೂರ್ವದ ಜಯಲೀಲಾ ಸಭಾಗ್ರಹದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ,ಮುಲ್ಕಿ ಇದರ ಉಪಾಧ್ಯಕ್ಷ ಸೂರ್ಯಕಾಂತ ಜೆ ಸುವರ್ಣ ವಹಿಸಲಿರುವರು.
ಮುಖ್ಯ ಅತಿಥಿಯಾಗಿ ಕರ್ನಾಟಕ ಮಲ್ಲದ ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿ ಉಪಸ್ಥಿತರಿರುವರು.
ಶ್ರೀ ಗುರುನಾರಾಯಣ ಅಧ್ಯಯನ ಪೀಠ ಮಂಗಳೂರು, ಇದರ ನಿರ್ದೇಶಕ ಡಾ.ಗಣೇಶ್ ಸಂಕಮಾರ್ ಅಭಿನಂದನಾ ಭಾಷಣಗೈಯಲಿರುವರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾಧಾಕೃಷ್ಣ ನ್ರತ್ಯ ಅಕಾಡೆಮಿಯ ವಿದ್ಯಾರ್ಥಿಗಳಿಂದ ನ್ರತ್ಯ ಪ್ರದರ್ಶನ ಪ್ರಸ್ತುತಗೊಳ್ಳಲಿದೆ.
ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಿ ಭೋಜನದ ವ್ಯವಸ್ಥೆ ಮಾಡಲಾಗಿದೆ.

.

.

.

.

.



Related posts

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಜೀವ ರಕ್ಷಕ, ಈಜು ತಜ್ಞ ಈಶ್ವರ್ ಮಲ್ಪೆ ಅವರಿಗೆ 10ನೇ ಮೂಲತ್ವ ವಿಶ್ವ ಪ್ರಶಸ್ತಿ 2024

Mumbai News Desk

SARVAJANIKA SHRI GANESHOTSAVA 2024 IN AJMAN ON 8TH SEPTEMBER BY MARGADEEPA

Mumbai News Desk

ಗೋರೆವಾಂವ್ ಪೂರ್ವದ  ಶ್ರೀ ಸದ್ಗುರುನಿತ್ಯಾನಂದ ಆಶ್ರಮ. ಜು10ರಂದು  ಗುರು ಪೂರ್ಣಿಮೆ.

Mumbai News Desk

ಶ್ರೀ ವಿಠೋಬ ಗೋಪಾಲಕ್ರಷ್ಣ ಭಜನಾ ಮಂದಿರ ಹೆಜಮಾಡಿ : ಎ. 21(ಇಂದು) ರಂದು ವಾರ್ಷಿಕ ಮಂಗಳೋತ್ಸವ, ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ

Mumbai News Desk

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk