30.9 C
Mumbai
June 8, 2026
Mumbai News Kannada
ಮುಂಬಯಿ

ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ.





ದೇವಸ್ಥಾನಗಳು. ದೈವ ಸ್ಥಾನಗಳು ಜೀರ್ಣೋದ್ಧಾರ  ಗೊಂಡಾಗ ಸಮಗ್ರ ಗ್ರಾಮ ಅಭಿವೃದ್ಧಿ ಕೊಳ್ಳುತ್ತದೆ: ಕರ್ನಿರೆ ವಿಶ್ವನಾಥ ಶೆಟ್ಟಿ.

ಮೂಲ್ಕಿ .  ಮೂಲ್ಕಿ  ತಾಲೂಕಿನ  ಕರ್ನಿರೆ  ಗ್ರಾಮದ ಗ್ರಾಮ‌ದೇವರಾದ ವಿಷ್ಣುಮೂರ್ತಿ ದೇವಸ್ಥಾನ (ನೀರ ದೇವಸ್ಥಾನ‌ ವೆಂಬ‌ ಹೆಸರಿನಿಂದ ಪ್ರಸಿದ್ಧಿಯಲ್ಲಿರುವ) ದಲ್ಲಿ‌ ಜ 17 ರಿಂದ 23/01/2024,  ಬ್ರಹ್ಮಕಲೋಶೋತ್ಸವ ನಡೆಯಲಿದ್ದು ಈ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಾದ   ಕರ್ನಿರೆ ವಿಶ್ವನಾಥ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಗೋರೆಗಾಂ ಪೂರ್ವ ಹೋಟೆಲ್ ಬಾಂಬೆ 63, ಇಲ್ಲಿ ಜ 3 ರಂದು   ಮುಂಬಾಯಿಯಲ್ಲಿ ವಾಸವಾಗಿರುವ ಗ್ರಾಮದ ಪ್ರಮುಖರೊಂದಿಗೆ ಸಮಾಲೋಚನಾ ಸಭೆ ನಡೆಯಿತು.

 ಸಭೆಯನ್ನು  ಊರಿನ ಮತ್ತು ಮುಂಬೈಯ ಬ್ರಹ್ಮಕಲಸದ ಪದಾಧಿಕಾರಿಗಳು ಉಪಸ್ಥಿತಿಯಲ್ಲಿ ಬ್ರಹ್ಮಕಲೋಶೋತ್ಸವ  ಗೌರವ ಅಧ್ಯಕ್ಷ ರವೀಂದ್ರ ಸಾಧು ಶೆಟ್ಟಿ ದೀಪ ಪ್ರಜ್ವಲಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ  ಬ್ರಹ್ಮಕಲೋಶೋತ್ಸವ ಅಧ್ಯಕ್ಷ ರಾದ  ಕರ್ನಿರೆ ವಿಶ್ವನಾಥ ಶೆಟ್ಟಿಯವರು ಸಭೆಯಲ್ಲಿ ಭಾಗವಹಿಸಿದ ಪ್ರಮುಖರ ಪರಿಚಯ ನೀಡಿ . ಕರ್ನಿರೆ ಗ್ರಾಮದಲ್ಲಿರುವ ದೈವಸ್ಥಾನವಾಗಲಿ, ದೇವಸ್ಥಾನವಾಗಲಿ, ಮತ್ತು ಧಾರ್ಮಿಕ-ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಬಯಿಯಲ್ಲಿ ನೆಲೆನಿಂತಿರುವ ಗ್ರಾಮಸ್ಥರ‌ ಕೊಡುಗೆ ಅಪಾರವಾಗಿದೆ.‌ಗ್ರಾಮದ‌ ದೈವ ದೇವರುಗಳ ಮೇಲೆ ಅವರಿಟ್ಟಿರುವ ಭಕ್ತಿ  ಎಲ್ಲಿ ಹೋದರೂ ಗ್ರಾಮದತ್ತ‌ ಸೆಳೆಯುತ್ತದೆ ಮತ್ತು ಅದರ ಯಾವುದೇ  ಅಭಿವೃದ್ಧಿಯ ಕಾರ್ಯದಲ್ಲಿ ತ್ವರಿತವಾಗಿ ಸ್ಪಂದಿಸುವಂತೆ‌‌ ಪ್ರೇರೇಪಿಸುತ್ತದೆ ದೇವಸ್ಥಾನಗಳು. ದೈವ ಸ್ಥಾನಗಳು ಜೀರ್ಣೋದ್ಧಾರ  ಗೊಂಡಾಗ ಸಮಗ್ರ ಗ್ರಾಮ ಅಭಿವೃದ್ಧಿ ಕೊಳ್ಳುತ್ತದೆಎಂದು ನುಡಿದರು.

     ಕರ್ನಿರೆ ಗ್ರಾಮದ‌ ಮುಖ್ಯಸ್ಥರಾದ (ಗುತ್ತಿನಾರ್)ಮತ್ತುಬ್ರಹ್ಮಕಲಶೋತ್ಸವದ ಸಮಿತಿಯ ಕಾರ್ಯಾದ್ಯಕ್ಷರಾದ ಕರ್ನೀರೆ ಹರಿಶ್ಚಂದ್ರ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತಾಡುತ್ತ ಗ್ರಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿ‌ ಕಾರ್ಯಗಳಲ್ಲಿ‌ ಮುಂಬಯಿಯ ಗಣ್ಯರೇ ಅಲ್ಲದೆ‌ ಸಾಮಾನ್ಯರಲ್ಲಿ ಸಾಮಾನ್ಯರು ಕೈಜೋಡಿಸುತ್ತಿರುವುದು ಗ್ರಾಮದ ದೈವ ದೇವರುಗಳ ಮೇಲಿರುವ ಭಕ್ತಿ‌‌ ಗ್ರಾಮದ ಮೇಲಿನ‌‌ ಕಾಳಜಿಯಾಗಿದೆ . ಅವರು ಗ್ರಾಮ ದೈವ ಧರ್ಮ ಜಾರಂದಾಯ ದೈವಸ್ಥಾನದ‌ ಜೀರ್ಣೋದ್ಧಾರ ಮತ್ತು ಅದಕ್ಕೆ ಬೇಕಾದ ಬೆಳ್ಳಿ-ಬಂಗಾರದ ನಗನಾಣ್ಯಗಳಿಗೆ  ಮಾಡಿದ‌ ಕೊಡುಗೆಯನ್ನು ಸ್ಮರಿಸುತ್ತ ಗ್ರಾಮ‌ ದೇವರ  ಬ್ರಹ್ಮಕಲಶೋತ್ಸವ‌ ಮತ್ತು ದೇವಸ್ಥಾನದ ಜೀರ್ಣೋದ್ಧಾರಕ್ಕೆ ತಗಲುವ ವೆಚ್ಚ ಮತ್ತು ಉತ್ಸವದಲ್ಲಿ ಆಚರಿಸಲಾಗುವ ಪೂಜೆಗಳ ವಿವರ‌‌ ನೀಡಿ‌ ಕಾರ್ಯಕ್ರಮದ‌ ಕರೆಯೋಲೆಯನ್ನು ಬಿಡುಗಡೆ ಮಾಡಿ ದೇವರ ಸಂಭ್ರಮಾಚರಣೆ ಈ ಉತ್ಸವದಲ್ಲಿ ಎಲ್ಲರ ವೈಯಕ್ತಿಕ ಉಪಸ್ಥಿತಿ ಮತ್ತು‌ ಸಹಕಾರ  ಕೋರಿದರು.

ಸಮಿತಿಯ ಸದಸ್ಯರಾದ  ಗಂಗಾಧರ ಎನ್ ಅಮೀನ್‌   ಕರ್ನಿರೆ ಮಾತಾಡುತ್ತ ಗ್ರಾಮದ ಯಾವುದೇ ಕಾರ್ಯಗಳಿಗೆ ಹೊರ ರಾಜ್ಯದಲ್ಲಿರುವ ಸದಸ್ಯರ‌ ಕೊಡುಗೆ  ಸದಾಕಾಲ ಇರುತ್ತದೆ ಮತ್ತು ಗ್ರಾಮ ದೇವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವವು ಗಣ್ಯರ ಸಹಕಾರದಿಂದ ಯಾರೂ ಎಣಿಸದೆ ಸಫಲತೆಯನ್ನು ಕಾಣುತ್ತದೆ ಎಂಬ ಭರವಸೆಯ ನುಡಿ ನುಡಿದರು.

ಗ್ರಾಮದ ಸದಸ್ಯರಾದ   ಕರ್ನಿರೆ   ಹರೀಶ್ಚಂದ್ರ‌ ಕುಂದರ್ ಮಾತಾಡುತ್ತ   ಕರ್ನಿರೆ ಒಂದು ಸಣ್ಣ‌ ಗ್ರಾಮವಾದರೂ ಅದರ‌ ಹೆಸರು ವಿಶ್ವಾದ್ಯಂತ ಹರಡಬೇಕಾದರೆ ಹೊರ ರಾಜ್ಯ ಮತ್ತು ದೇಶದಲ್ಲಿ ಗ್ರಾಮದ ಸದಸ್ಯರು‌ ಮಾಡಿದ ಸಾಧನೆಗಳು ಕಾರಣವಾಗಿದೆ ಮತ್ತು   ಕರ್ನಿರೆ  ಒಬ್ಬ ಉತ್ತಮ‌ ನಾಯಕನಾಗಿ   ಕರ್ನಿರೆ  ವಿಶ್ವನಾಥ ಶೆಟ್ಟಿ‌ ಮುಂದಾಳುತ್ವ ವಹಿಸುತ್ತಿದ್ದಾರೆ.     ಗ್ರಾಮ‌ ದೈವ ಜಾರಂದಾಯ ತಾನು ತನ್ನ‌ ಕಾರ್ಣಿಕ ಪ್ರದರ್ಶಿಸಿ‌ ಬಂದು ನೆಲೆ‌ನಿಂತ ಊರು ಮತ್ತು ಊರ ಸಮಸ್ತರು ತೆಗೆದುಕೊಂಡ ಯಾವುದೇ ನಿರ್ಣಯಗಳು ಕಾರ್ಣಿಕ ರೂಪವಾಗಿ ಈಡೇರುತ್ತದೆ. ಈ ಕಾರ್ಯಕ್ರಮವೂ ಅದಕ್ಕೆ  ಅಪವಾದವಾಗದು ಎಂದರು.

   ಕರ್ನಿರೆ  ಸಚಿನ್ ಶೆಟ್ಟಿಯವರು ಮಾತಾಡುತ್ತ‌‌‌ ನೀರ ದೇವಸ್ಥಾನವೆಂದು ಪ್ರಸಿದ್ಧಿ ಪಡೆದಿರುವ ವಿಷ್ಣುಮೂರ್ತಿ‌ ದೇವಸ್ಥಾನದ ಇತಿಹಾಸ ಮತ್ತು ಬೆಳೆದು ಬಂದ ರೀತಿ ವಿವರಿಸಿ ತನ್ನವರ ಸಂಪೂರ್ಣ‌‌ ಬೆಂಬಲ ವ್ಯಕ್ತಪಡಿಸಿದರು.

  ಸಭೆಯಲ್ಲಿ ಪಾಲ್ಗೊಂಡಿದ್ದ ಮುಂಬೈ ಬಂಟರ ಸಂಘದ ಎಸ್ಎಂ ಶೆಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯ ಧ್ಯಕ್ಷ  ರತ್ನಾಕರ ಶೆಟ್ಟಿಮುಂಡ್ಕೂರು  , ಕಿರಣ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಮುಂತಾದವರು ತಮ್ಮ ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಿದರು ಕಾರ್ಯಕ್ರಮಕ್ಕೆ ಶುಭಕೋರಿದರು.

ಬ್ರಹ್ಮಕಳಸೋತ್ಸವ ಸಮಿತಿಯ ಪದಾಧಿಕಾರಿಗಳಾದ  ರವಿ ಶೆಟ್ಟಿ ಕರ್ನಿರೆ , ಮೋಹನ್ ಶೆಟ್ಟಿ ಮತ್ತು   , ಮೋಹನ್ ಕೋಟ್ಯಾನ್ ವೇದಿಕೆಯಲ್ಲಿ‌ ಉಪಸ್ಥಿತರಿದ್ದರು. ಗ್ರಾಮದ ಮುಂಬಯಿಯ ಉದ್ಯಮಿಗಳು,  ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಮಸ್ಥರ  ಪಾಲ್ಗೊಂಡಿದ್ದರು



Related posts

ವಸಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ನಿಧನ

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್; ಭಕ್ತಿ ಸಡಗರದಿಂದ ಸಂಪನ್ನಗೊಂಡ ಭಜನಾ ಮಂಗಳೋತ್ಸವ.

Mumbai News Desk

ಮುಂಬೈನಲ್ಲಿ ಈದ್ -ಎ -ಮಿಲಾದ್ ರಜೆಯನ್ನು ಸೆಪ್ಟಂಬರ್ 8ಕ್ಕೆ ಬದಲಾಯಿಸಿದ ಮಹಾರಾಷ್ಟ್ರ ಸರಕಾರ

Mumbai News Desk

ಕೊಂಕಣಿ ವೆಲ್ಫೇರ್ ಅಸೋಸಿಯೇಷನ್ ಸಯನ್ : ಕನ್ಯಾ ಮರಿಯಮ್ಮನವರ ಜನ್ಮದಿನೋತ್ಸವ ಮೋಂತಿ ಪೆಸ್ತ್

Mumbai News Desk

ಒಕ್ಕಲಿಗರ ಸಂಘ ಮಹಾರಾಷ್ಟ್ರದಿಂದ ಸಮಾಜದ ವಿದ್ಯಾರ್ಥಿಗಳಿಗೆ  ಶಿಕ್ಷಣ ಮಾಹಿತಿ ಶಿಬಿರ- ಪುಸ್ತಕ ವಿತರಣೆ,

Mumbai News Desk

ಸಾಯಿಬಾಬಾ ಪೂಜಾ ಸಮಿತಿ, ಕಾಲಘೋಡ (ರಿ.): ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ 31ನೇ ವಾರ್ಷಿಕ ಮಹಾಸಭೆ

Mumbai News Desk