July 23, 2026
Mumbai News Kannada
ಪ್ರಕಟಣೆ

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ







ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 

ಕಾರ್ಯಕ್ರಮದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಅಸಣ್ಣ ವಹಿಸಲಿದ್ದು, ಮೇಯರ್ ಸುಧೀರ್ ಶೆಟ್ಟ ಕಣ್ಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಸಿಎ ಸುದೇಶ್ ರೈ, ಜನನಿ ಕನ್ ಸ್ಟ್ರಕ್ಷನ್ ಮಾಲಕ ಸುಧಾಕರ್ ಪೂಂಜ, ಹೋಟೆಲ್ ಉದ್ಯಮಿ ಶಶಿಕಾಂತ ಶೇಖ, ಲ. ಚಂದ್ರಹಾಸ್ ಶೆಟ್ಟಿ, ಲೀಲಾಕ್ಷ ಕರ್ಕೇರ, ಲ. ಸ್ವರೂಪ ಎನ್. ಶೆಟ್ಟಿ, ಲ. ತಾರನಾಥ ಶೆಟ್ಟಿ ಬೋಳಾರ್, ನವೀನ್ ಶೆಟ್ಟಿ ಅಳಕೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದರು.

“ಇದೇ ಸಂದರ್ಭದಲ್ಲಿ ತ್ರಿರಂಗ ಸಂಗಮ ಮುಂಬೈ ಇದರ ಸಂಚಾಲಕರಾದ ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ, ಕರ್ನೂರು ಮೋಹನ್ ರೈ ಅವರನ್ನು ಸನ್ಮಾನಿಸಲಾಗುವುದು” ಎಂದು ಕದ್ರಿ ನವನೀತ್ ಶೆಟ್ಟಿ ಮಾಹಿತಿ ನೀಡಿದರು. 

ಪತ್ರಿಕಾಗೋಷ್ಠಿಯಲ್ಲಿ ಲಯನ್ ಡಿ.ಕಿಶೋರ್ ಶೆಟ್ಟಿ, ನಾಟಕ ರಚನೆಕಾರ ಜೀವನ್ ಉಳ್ಳಾಲ್, ಮೋಹನ್ ಕೊಪ್ಪಲ, ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಗೋಕುಲ್ ದಾಸ್ , ಯಾದವ ಮಣ್ಣಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

.

.

.



Related posts

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk

ಶ್ರೀ ಮಧೂರು ಮದನಂತೇಶ್ವರ-ಸಿದ್ಧಿವಿನಾಯಕ ದೇವಸ್ಥಾನ, ಬ್ರಹ್ಮ ಕಲಶೋತ್ಸವ, ಮಾ.13:ಮುಂಬಯಿ ಭಕ್ತರ ಸಭೆ,

Mumbai News Desk

ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ ಭಾಯಂದರ್ ಪೂರ್ವ : ಎ. 12ರಂದು ವಾರ್ಷಿಕ ಶ್ರೀ ಮಹಾದೇವಿ ಮಹಾಪೂಜೆ

Mumbai News Desk

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಮಹಾರಾಷ್ಟ್ರ ಘಟಕ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ – 10.2.26ರಿಂದ 23.02.26ರ ವರೆಗೆ “ವರ್ಷಾವಧಿ ಉತ್ಸವ”

Mumbai News Desk