32 C
Mumbai
March 7, 2026
Mumbai News Kannada
ಮುಂಬಯಿ

ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ರಾಮ ನಾಮ ಜಪ ಯಜ್ಞ ಸಂಪನ್ನ.





ಮುಂಬಯಿಯ ತುಳು ಕನ್ನಡಿಗರ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಳಲ್ಲಿ ಒಂದಾದ ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿ ಯಲ್ಲಿ ತಾರೀಕು 7.1 2024 ನೇ ಆದಿತ್ಯವಾರ ಬೆಳಿಗ್ಗೆ ಸೂರ್ಯೋದಯ ದಿಂದ ಸೂರ್ಯಾಸ್ತದವರೆಗೆ ನಿರಂತರ ವಾಗಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಹಾಗೂ ಭಕ್ತ ಸಮೂಹದ ಸಹಕಾರ ದಿಂದ ಅಯೋಧ್ಯಯ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆಯ ಪ್ರಯುಕ್ತ ಶ್ರೀ ರಾಮ ನಾಮ ಜಪ ಯಜ್ಞ ಯಶಸ್ವಿಯಾಗಿ ನೆರವೇರಿತು.

ಪ್ರಧಾನ ಅರ್ಚಕರಾದ ಎಸ್ ಎನ್ ಉಡುಪ, ಭೂವಾಜಿ ರವೀಂದ್ರ ಶಾಂತಿ, ಪ್ರವೀಣ್ ಮಾಬಿಯನ್, ಶೇಖರ ಶೆಟ್ಟಿ, ಹಾಗೂ ಗೀತಾ ಶೆಟ್ಟಿ ದೀಪಾ ಪ್ರಜ್ವಲಿಸಿ ಜಪ ಯಜ್ಞಕ್ಕೆ ಚಾಲನೆ ನೀಡಿದರು.

ದಿನವಿಡಿ ರಾಮ ನಾಮ ಜಪಯಜ್ಞ ನಡೆದು ಸಂಜೆ ಮಂಗಲೋತ್ಸವ ದೊಂದಿಗೆ ಮುಕ್ತಾಯಗೊಂಡು, ಪ್ರಧಾನ ಅರ್ಚಕರಾದ ಎಸ್ ಎನ್ ಉಡುಪರವರು ಅಯೋಧ್ಯಯ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆ ಕುರಿತು ಹಾಗೂ ಜಪ ಯಜ್ಞದ ಮಹತ್ವವನ್ನು ಭಕ್ತರಿಗೆ ಸಂಕಿಪ್ತವಾಗಿ ವಿವರಿಸಿದರು, ನಂತರ ತೀರ್ಥ ಪ್ರಸಾದ ವಿತರಿಸಲಾಯಿತು.

ಈ ಪುಣ್ಯ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರುವಲ್ಲಿ
ಮಂದಿರದ ಟ್ರಸ್ಟಿಗಳಾದ ಶ್ರೀಮತಿ ಲಲಿತಾ ಬಿ ಕೆ ಸೀನ, ಹಾಗೂ ಪರಿವಾರ ಮತ್ತು ಅರ್ಚಕರಾದ ರಾಜೇಶ್ ಭಟ್ ಹಾಗೂ ಅರ್ಚಕ ವೃಂದದವರು ಸಂಪೂರ್ಣ ಸಹಕಾರ ನೀಡಿದರು.



Related posts

*ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನ* , ರಾವಲ್ಪಾಡ, ದಹಿಸರ್, ಪೂರ್ವ *ಮುದ್ದು ಕೃಷ್ಣ ಸ್ಪರ್ಧೆ* .ಬಹುಮಾನ ವಿತರಣೆ.

Mumbai News Desk

ರತನ್ ಪೂಜಾರಿ ಯವರಿಗೆ ಶ್ರೀ ವಿಷ್ಣು ಮಂದಿರದಲ್ಲಿ ಗೌರವಾರ್ಪಣೆ.

Mumbai News Desk

ಮುಂಬೈ ‘ಎನ್ಕೌಂಟರ್ ಸ್ಪೆಶಲಿಸ್ಟ್’ ದಯಾ ನಾಯಕ್ ನಿವೃತ್ತಿಗೆ ಎರಡು ದಿನಗಳ ಮೊದಲು ಎಸಿಪಿ ಹುದ್ದೆಗೆ ಬಡ್ತಿ

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಭಾಂಡುಪ್ ಸ್ಥಳೀಯ ಕಚೇರಿಯ ಸಂಯೋಜನೆಯಲ್ಲಿ ಬಾಬು ಶಿವ ಪೂಜಾರಿ ಅವರ “ಬಿಲ್ಲವರ ಗುತ್ತು” ಗ್ರಂಥದ ಮುಂಬಯಿ ಅವೃತಿ ಬಿಡುಗಡೆ.

Mumbai News Desk

ಅಖಿಲ ಗಾಂವ್ದೇವಿ ಕನ್ನಡ ಮಿತ್ರ ಮಂಡಳಿ ಮುಂಬಯಿ – ವಿಜೃಂಭಣೆಯಿಂದ ಜರಗಿದ 94 ನೇ ವರ್ಷದ ಗಣೇಶೋತ್ಸವ

Mumbai News Desk

ಕುಲಾಲ ಸಂಘದ ಗುರುವಂದನಾ ಭಜನಾ ಮಂಡಳಿಯ ಗುರು ಪೂರ್ಣಿಮೆಯ ಆಚರಣೆ.

Mumbai News Desk