30 C
Mumbai
April 24, 2026
Mumbai News Kannada
ಮುಂಬಯಿ

ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿಯಲ್ಲಿ ರಾಮ ನಾಮ ಜಪ ಯಜ್ಞ ಸಂಪನ್ನ.





ಮುಂಬಯಿಯ ತುಳು ಕನ್ನಡಿಗರ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಳಲ್ಲಿ ಒಂದಾದ ಶ್ರೀ ಉಮಾ ಮಹೇಶ್ವರಿ ದೇವಸ್ಥಾನ ಜರಿಮರಿ ಯಲ್ಲಿ ತಾರೀಕು 7.1 2024 ನೇ ಆದಿತ್ಯವಾರ ಬೆಳಿಗ್ಗೆ ಸೂರ್ಯೋದಯ ದಿಂದ ಸೂರ್ಯಾಸ್ತದವರೆಗೆ ನಿರಂತರ ವಾಗಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಹಾಗೂ ಭಕ್ತ ಸಮೂಹದ ಸಹಕಾರ ದಿಂದ ಅಯೋಧ್ಯಯ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆಯ ಪ್ರಯುಕ್ತ ಶ್ರೀ ರಾಮ ನಾಮ ಜಪ ಯಜ್ಞ ಯಶಸ್ವಿಯಾಗಿ ನೆರವೇರಿತು.

ಪ್ರಧಾನ ಅರ್ಚಕರಾದ ಎಸ್ ಎನ್ ಉಡುಪ, ಭೂವಾಜಿ ರವೀಂದ್ರ ಶಾಂತಿ, ಪ್ರವೀಣ್ ಮಾಬಿಯನ್, ಶೇಖರ ಶೆಟ್ಟಿ, ಹಾಗೂ ಗೀತಾ ಶೆಟ್ಟಿ ದೀಪಾ ಪ್ರಜ್ವಲಿಸಿ ಜಪ ಯಜ್ಞಕ್ಕೆ ಚಾಲನೆ ನೀಡಿದರು.

ದಿನವಿಡಿ ರಾಮ ನಾಮ ಜಪಯಜ್ಞ ನಡೆದು ಸಂಜೆ ಮಂಗಲೋತ್ಸವ ದೊಂದಿಗೆ ಮುಕ್ತಾಯಗೊಂಡು, ಪ್ರಧಾನ ಅರ್ಚಕರಾದ ಎಸ್ ಎನ್ ಉಡುಪರವರು ಅಯೋಧ್ಯಯ ಶ್ರೀ ರಾಮ ಮಂದಿರದ ಪ್ರತಿಷ್ಟಾಪನೆ ಕುರಿತು ಹಾಗೂ ಜಪ ಯಜ್ಞದ ಮಹತ್ವವನ್ನು ಭಕ್ತರಿಗೆ ಸಂಕಿಪ್ತವಾಗಿ ವಿವರಿಸಿದರು, ನಂತರ ತೀರ್ಥ ಪ್ರಸಾದ ವಿತರಿಸಲಾಯಿತು.

ಈ ಪುಣ್ಯ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರುವಲ್ಲಿ
ಮಂದಿರದ ಟ್ರಸ್ಟಿಗಳಾದ ಶ್ರೀಮತಿ ಲಲಿತಾ ಬಿ ಕೆ ಸೀನ, ಹಾಗೂ ಪರಿವಾರ ಮತ್ತು ಅರ್ಚಕರಾದ ರಾಜೇಶ್ ಭಟ್ ಹಾಗೂ ಅರ್ಚಕ ವೃಂದದವರು ಸಂಪೂರ್ಣ ಸಹಕಾರ ನೀಡಿದರು.



Related posts

ಶ್ರೀ ನಾರಾಯಣ ಗುರು ಭಜನಾ ಮಂಡಳಿ, ಕಾಂದಿವಲಿ ಬಿಲ್ಲವರ ಆಯೋಜನೆಯಲ್ಲಿ ಶನೀಶ್ವರ ಪಾರಾಯಣ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಪೂಜೆ!

Mumbai News Desk

ಭಂಡಾರಿ ಸೇವಾ ಸಮಿತಿ ಮುಂಬಯಿ – 70ನೇ ವಾರ್ಷಿಕ ಕೌಟುಂಬಿಕ ಸ್ನೇಹ ಸಮ್ಮಿಲನ

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಛೇರಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ

Mumbai News Desk

ಬಂಟರ ಸಂಘದಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ,

Mumbai News Desk

ಕುಲಾಲ ಸಂಘ ಮುಂಬಯಿ ನವಿ ಮುಂಬಯಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನದ ಉದ್ಘಾಟನಾ ಆಹ್ವಾನ ಪತ್ರಿಕೆ ವಿತರಣಾ ಸಮಾರಂಭ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ 

Mumbai News Desk