30.9 C
Mumbai
June 8, 2026
Mumbai News Kannada
Uncategorizedಸುದ್ದಿ

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ





ಮುಂಬಯಿ: ಕನ್ನಡ ಸಾಹಿತ್ಯ ಪರಿಷತ್ತು ಎರ್ಪಡಿಸಿದ 2022ನೆಯ ಸಾಲಿನ ಶ್ರೀ ಕೆ. ವಾಸುದೇವಾಚಾರ್ಯ ದತ್ತಿ ಪುರಸ್ಕಾರಕ್ಕೆ ಅನಿತಾ ಪಿ. ತಾಕೊಡೆಯವರ ‘ನಿವಾಳಿಸಿ ಬಿಟ್ಟ ಕೋಳಿ ಕಥಾ ಸಂಕಲನ’ ಆಯ್ಕೆಯಾಗಿದೆ. 2022ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟವಾದ ಕೃತಿಗಳನ್ನು ಒಟ್ಟು 51 ದತ್ತಿಗಳ 57 ಪ್ರಶಸ್ತಿಗಳಿಗೆ ಬರಹಗಾರರಿಂದ ಪುಸ್ತಕಗಳನ್ನು ಆಹ್ವಾನಿಸಿತ್ತು. ಇದಕ್ಕೆ ರಾಜ್ಯ ದೇಶ ಮತ್ತು ವಿದೇಶಗಳಿಂದಲೂ ನಾಲ್ಕು ಸಾವಿರ ಕೃತಿಗಳು ಬಂದಿದ್ದು ಅವುಗಳಲ್ಲಿ 25 ಜನ ಪರಿಣಿತರ ಸಮಿತಿ ಪ್ರಾಥಮಿಕವಾಗಿ ಆಯ್ಕೆ ಮಾಡಿತ್ತು. ನಾಡೋಜ ಡಾ.ಮಹೇಶ ಜೋಶಿಯವರ ನೇತೃತ್ವದ ಸಮಿತಿ ಪಾರದರ್ಶಕವಾಗಿ ಕೆಳಕಂಡ ಅಂತಿಮ ಪಟ್ಟಿಯನ್ನು ಆಯ್ಕೆ ಮಾಡಿದ್ದು ಶೀಘ್ರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಿತಾ ಪೂಜಾರಿಯವರು ಕವಿಯಾಗಿ, ಲೇಖಕರಾಗಿ, ಕಥೆಗಾರರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಪರಿಚಿತರಾಗಿದ್ದಾರೆ. ಇವರು ಕೆ.ಎಸ್.ಒ.ಯು. ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಪದವಿ ಪಡೆದಿದ್ದಾರೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇದೀಗ ಮುಂಬಯಿ ವಿಶ್ವವಿದ್ಯಾಲಯದಲ್ಲಿ ಡಾ.ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ “ಮುಂಬಯಿ ಬಿಲ್ಲವರು ಸಾಂಸ್ಕೃತಿಕ ಅಧ್ಯಯನ” ಈ ವಿಷಯದ ಕುರಿತು ಪಿಎಚ್.ಡಿ ಅಧ್ಯಯನದಲ್ಲಿ ನಿರತರಾಗಿದ್ದಾರೆ.
ಈಗಾಗಲೇ ಅನಿತಾ ಅವರ ಒಟ್ಟು ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ. ಇವರ ಕವನ ಸಂಕಲನ “ಅಂತರಂಗದ ಮೃದಂಗ”ದ ಹಸ್ತಪ್ರತಿಗೆ, ಜಗಜ್ಯೋತಿ ಕಲಾವೃಂದ ಮುಂಬೈ ವತಿಯಿಂದ “ಶ್ರೀಮತಿ ಸುಶೀಲಾ ಎಸ್ ಶೆಟ್ಟಿ ಸ್ಮಾರಕ ಕಾವ್ಯ ಪ್ರಶಸ್ತಿ”, “ಜನಸ್ಪಂದನ ಟ್ರಸ್ಟ್(ರಿ) ಸುವ್ವಿ ಪಬ್ಲಿಕೇಷನ್ಸ್, ಶಿಕಾರಿಪುರ” ಕೊಡಮಾಡುವ “ಅಲ್ಲಮ ಸಾಹಿತ್ಯ ಪ್ರಶಸ್ತಿ ಲಭಿಸಿದೆ. ಮೋಹನ ತರಂಗ’ ಈ ಕೃತಿಗೆ 2019-20ನೆಯ ಸಾಲಿನ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ ನಗದು ಪುರಸ್ಕಾರ ಪ್ರಾಪ್ತಿಯಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಇವರ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಮುಂಬಯಿ ಮತ್ತು ಮಂಗಳೂರು ಆಕಾಶವಾಣಿಯಲ್ಲಿ ಇವರ ಕತೆ, ಭಾವಗೀತೆ ಮತ್ತು ಕವನಗಳು ಪ್ರಸಾರಗೊಂಡಿವೆ. ಇವರು 2019ರಲ್ಲಿ ಮೈಸೂರು ಅರಮನೆಯಲ್ಲಿ ನಡೆದ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿ ಗೌರವ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಸ್ತುತ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ(ರಿ)ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.



Related posts

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ವಸಯಿಯ ಮೋಹಿತ್ ಆನಂದ ಪೂಜಾರಿಗೆ ಶೇ 86.50%

Mumbai News Desk

U.S. Economy’s 3% Spurt Emboldens Tax Cut Supporters (and Critics)

admin

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk

ತಂತ್ರಜ್ಞಾನ ಮತ್ತು ಭರವಸೆಯ ಸಮ್ಮಿಲನ: ಭಾರತ್ ಬ್ಯಾಂಕ್‌ನಿಂದ ಹೊಸ ನೆಟ್ ಬ್ಯಾಂಕಿಂಗ್ ಅಪ್ಲಿಕೇಶನ್ ಸೇವೆಗಳಿಗೆ ಚಾಲನೆ.

Mumbai News Desk

ಮುಂಬೈ: 67 ವರ್ಷದ ಹಿರಿಯ ನಾಗರಿಕ ಗೋವಿಂದ ನಾರಾಯಣ ಧುರಿ ನಾಪತ್ತೆ; ಸುಳಿವು ನೀಡಲು ಕುಟುಂಬಸ್ಥರ ಮನವಿ

Mumbai News Desk