32 C
Mumbai
April 24, 2026
Mumbai News Kannada
ಸುದ್ದಿ

ಬೊಂಡಾಲ ಬಯಲಾಟ ಸುವರ್ಣ ಸಂಭ್ರಮ ಕರೆಯೋಲೆ ಬಿಡುಗಡೆ





ಮಂಗಳೂರು: ‘ಊರಿನ ಕಷ್ಟ – ಕಾರ್ಪಣ್ಯಗಳ ನಿವಾರಣೆಗಾಗಿ ಶ್ರೀದೇವಿಯ ಹರಕೆ ರೂಪದಲ್ಲಿ ಹಿರಿಯರು ಆರಂಭಿಸಿದ್ದ ಕಟೀಲು ಮೇಳದ ಬಯಲಾಟ ಸೇವೆಗೆ ಐವತ್ತು ವರ್ಷ ತುಂಬಿದೆ. ಈ ಸುವರ್ಣ ಸಂಭ್ರಮವನ್ನು ಊರವರೆಲ್ಲ ಶ್ರದ್ದಾಭಕ್ತಿಗಳಿಂದ ಆಚರಿಸೋಣ’ ಎಂದು ಬೊಂಡಾಲ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಗೌರವಾಧ್ಯಕ್ಷ ಬಿ.ಸೀತಾರಾಮ ಶೆಟ್ಟಿ ಕರೆ ನೀಡಿದ್ದಾರೆ. ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ 2024 ಫೆಬ್ರವರಿ 14 ರಿಂದ 16 ರವರೆಗೆ ನಡೆಯುವ ಯಕ್ಷಗಾನ ಬಯಲಾಟ ಸುವರ್ಣ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

      ಸುವರ್ಣ ಸಂಭ್ರಮದ ಸಂಚಾಲಕ ಪ್ರೊ.ಭಾಸ್ಕರ ರೈ ಕುಕುವಳ್ಳಿ ಮಾತನಾಡಿ ‘ಪ್ರತಿ ವರ್ಷ ಊರಿನ ಹಬ್ಬದ ಸ್ವರೂಪದಲ್ಲಿ ಜರುಗುತ್ತಿರುವ ಬೊಂಡಾಲದ ಯಕ್ಷೋತ್ಸವ ಶಂಭೂರು ಗ್ರಾಮಸ್ಥರ ಒಂದು ಮಾದರಿ ಕಾರ್ಯಕ್ರಮವಾಗಿ ಗಮನ ಸೆಳೆದಿದೆ. ದೇವರ ಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ, ಹಿರಿಯ ಕಲಾವಿದರಿಗೆ ಸನ್ಮಾನ – ಪ್ರಶಸ್ತಿ ಪ್ರದಾನಗಳ ಮೂಲಕ ಇದನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸಲಾಗುತ್ತಿದೆ. ಸಮಿತಿಯ ಈ ಸೇವೆ ಸಾರ್ಥಕ’ ಎಂದು ನುಡಿದರು.

        ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಸುಪ್ರೀತ್ ಶೆಟ್ಟಿ ಬೊಂಡಾಲ ಅಂತರಗುತ್ತು ವಂದಿಸಿದರು. ಕೋಶಾಧಿಕಾರಿ ಸುನಾದ್ ರಾಜ್ ಶೆಟ್ಟಿ ನಿರೂಪಿಸಿದರು. ಸುವರ್ಣ ಸಂಭ್ರಮದ ಕಾರ್ಯಾಧ್ಯಕ್ಷ ಪದ್ಮನಾಭ ಮಯ್ಯ ಏಲಬೆ ಅವರ ನೇತೃತ್ವದಲ್ಲಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಶರತ್ ಶೆಟ್ಟಿ ಕಕ್ಕೆಮಜಲು, ನಾಗೇಶ್ ಶೆಟ್ಟಿ ಹೊಸಮನೆ, ಸತೀಶ್ ಪಕ್ಕಳ, ದೇವಿಪ್ರಸಾದ್ ಶೆಟ್ಟಿ ಬೊಂಡಾಲ, ಕೇಶವ ಮೊಂಟಪಾಲು, ರಾಕೇಶ್ ಮಾರ್ಲಾ ಬೊಂಡಾಲ ಅಂತರಗುತ್ತು, ಯಶೋಧರ ಬಂಗೇರ ಕೊಲ್ಲೂರು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಮಹಿಳಾ ವಿಭಾಗದ ಪ್ರಮುಖರು ಉಪಸ್ಥಿತರಿದ್ದರು.



Related posts

ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ ಸರ್ಕಾರ – ಬಸ್ ಪ್ರಯಾಣ ದರ ಶೇಕಡ 15ರಷ್ಟು ಏರಿಕೆ

Mumbai News Desk

ಜಾಗತಿಕ ಮಟ್ಟದಲ್ಲಿ ಕಾರ್ಕಳದ ಪ್ರತಿಭೆ: ಇಥಿಯೋಪಿಯದಲ್ಲಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ನಿಟ್ಟೆಯ ವಿಶಾಲ್ ಪೂಜಾರಿ

Mumbai News Desk

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ಉಡುಪಿ : ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ, ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ – ಹರಿರಾಮ್ ಶಂಕರ್

Mumbai News Desk

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ

Mumbai News Desk