September 6, 2026
Mumbai News Kannada
ಮುಂಬಯಿ

ಮಲಾಡ್ ಶ್ರೀಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ ಸುವರ್ಣ ಸಂಭ್ರಮದ ಸರಣಿ ಕಾರ್ಯಕ್ರಮ.





ಶ್ರೀ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಫೋರ್ಟ್, ಇವರಿಂದ ಶ್ರೀ ಶನಿ ಗ್ರಂಥ ಪಾರಾಯಣ.

ಚಿತ್ರ,ವರದಿ : ದಿನೇಶ್ ಕುಲಾಲ್


ಮುಂಬಯಿ ಜ 17. ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್, ಇದರ ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಾಂಪೂರ್ತಿ ನಡೆಯುವ ಸರಣಿ ಕಾರ್ಯಕ್ರಮದ ಅಂಗವಾಗಿ ದೇವಸ್ಥಾನದಲ್ಲಿ ಶನೀಶ್ವರ ದೇವರ ಕಥಾಶ್ರವಣ ಹಾಗು ಕಲ್ಪೋಕ್ಷ ಪೂಜೆ ತಾ13.1.24 ಶ್ರೀ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಫೋರ್ಟ್ ಇವರಿಂದ ನಡೆಯಿತು.

ಗ್ರಂಥವಾಚಕರಾಗಿ ಅಣ್ಣಪ್ಪ ಮೊಗವೀರ .ಸದಾನಂದ ಪೂಜಾರಿ. ಅರ್ಥದಾರಿಗಳಾಗಿ ವಿಶ್ವನಾಥ್ ಭಂಡಾರಿ. ವಾಸು ಸಾಲಿಯನ್. ಪ್ರವೀಣ್ ಪೂಜಾರಿ ಮತ್ತು ಜೆ.ಜೆ ಕೋಟ್ಯಾನ್ ಭಾಗವಹಿಸಿದರು.

ಬಳಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ತುಂಗಾ ರಾಘವೇಂದ್ರ ಭಟ್ ಅವರು ಮಹಾಪೂಜೆಯನ್ನು ನೆರವೇರಿಸಿದರು. ದೇವಸ್ಥಾನದ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಸಾಪಲ್ಯ ಅವರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಶನಿ ಗ್ರಂಥ ಪಾರಾಯಣ ಮಾಡಿದ ತಂಡದ ಎಲ್ಲರಿಗೂ ಪ್ರಸಾದವನ್ನು ನೀಡಿದರು

ಈ ಸಂದರ್ಭದಲ್ಲಿ ಸಮಿತಿಯ ಗೌರವ ಕಾರ್ಯದರ್ಶಿ ಸಂತೋಷ್ ಶೆಟ್ಟಿ,ಕೋಶಧಿಕಾರಿ ಹರೀಶ್ ಸಾಲಿಯಾನ್, ಹಿರಿಯ ಸದಸ್ಯರಾದ ನಾರಾಯಣ ಶೆಟ್ಟಿ,ಮಹಿಳಾ ವಿಭಾಗದ ಕಾರ್ಯಧ್ಯಕ್ಷರಾದ ಶೀತಲ್ ಕೋಟ್ಯಾನ್ ಮತ್ತಿತರ ಸದಸ್ಯರು ಉಪಸ್ಥರಿದ್ದರು.



Related posts

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ  ಸಭಾದ ಮಹಿಳಾ ವಿಭಾಗದಿಂದ ಸಡಗರದ ‘ಆಟಿಡೊಂಜಿ ಕೂಟ’ ಆಚರಣೆ

Mumbai News Desk

ವರ್ಲಿ   ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ ಇದರ 29ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ ಸಂಭ್ರಮದೊಂದಿಗೆ ಆಚರಣೆ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಜೋಗೇಶ್ವರಿ ಸ್ಥಳೀಯ ಕಚೇರಿ ವತಿಯಿಂದ ಶ್ರೀ ಶನೇಶ್ವರ ಗ್ರಂಥ ಪಾರಾಯಣ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ಶೈಕ್ಷಣಿಕ ಪ್ರವಾಸ

Mumbai News Desk

ಕಲ್ವಾದಲ್ಲಿ ವಿಜೃಂಭಣೆಯಿಂದ ಜರುಗಿದ ‘ಆಟಿಡೊಂಜಿ ದಿನ’ ಸಂಭ್ರಮ

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 85 ನೇ ವಾರ್ಷಿಕ ಮಹಾಸಭೆ

Mumbai News Desk