July 23, 2026
Mumbai News Kannada
ಪ್ರಕಟಣೆ

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .







ಪುಣೆ  ಜ 19.   ಅಯೋಧ್ಯೆಯಲ್ಲಿ ಭಾರತೀಯರ ಶತ ಶತಮಾನಗಳ ಪ್ರಯತ್ನಗಳ ಮೂಲಕ ಇದೀಗ 2024 ಜನವರಿ 22ರಂದು ಭವ್ಯ ಮಂದಿರ ನಿರ್ಮಾಣಗೊಂಡು ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾ ಮಹೋತ್ಸವ ವು ಜರುಗಲಿದ್ದು ಅದೇ ಪುಣ್ಯ ಮುಹೂರ್ತ ದಲ್ಲಿ. ಪುಣೆ ಪೀಂಪ್ರಿ ಚಿಂಚ್ ವಾಡ್ ಬಂಟರ ಸಂಘದ ಆಶ್ರಯದಲ್ಲಿ    ಸಂಘದ ಸಭಾಭವನದಲ್ಲಿ ಪ್ರಸಿದ್ಧ ಹರಿದಾಸ ರಾದ “ವಿಶ್ವೇಶ ದಾಸ”ಬಿರುದಾಂಕಿತ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ಅವರಿಂದ “ರಾಮ ಸೀತಾ ಕಲ್ಯಾಣ “ಎಂಬ ಹರಿಕಥೆಯು  ಬೆಳಿಗ್ಗೆ 10-30 ರಿಂದ ನಡೆಯಲಿದೆ .

  ಹರಿಕಥೆಯು   ಹಾರ್ಮೋನಿಯಂ ನಲ್ಲಿ ಶೇಖರ್ ಸಸಿಹಿತ್ಲು, ತಬ್ಲಾದಲ್ಲಿ ಜನಾರ್ಧನ ಸಾಲಿಯಾನ್, ಸಂಗೀತ ಸಹಕಾರ  ವಿಖ್ಯಾತ ವಿ ಭಟ್ ಅವರು ನೀಡಲಿದ್ದಾರೆ,,ಎಲ್ಲ ಶ್ರೀರಾಮ ಭಕ್ತರು ಸಂಪ್ರದಾಯದ ಉಡುಪು, ಕೇಸರಿ ಶಾಲು ಧರಿಸಿ ಬಂದು ಭಾಗವಹಿಸಿ ಈ ಭವ್ಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು,

   ಮಧ್ಯಾಹ್ನ 12:22 ಕ್ಕೆ ಅಯೋಧ್ಯಾ ರಾಮನ ಪ್ರಾಣ ಪ್ರತಿಷ್ಠಾ ಸಮಯದಲ್ಲಿ ರಾಮದೇವರಿಗೆ ರಾಮ ಭಜನೆ, ರಾಮನಾಮ ಉದ್ಘೋಷ ದೊಂದಿಗೆ ಮಹಾ ಮಂಗಳಾರತಿ ಯು ನಡೆಯಲಿದೆ .

ಆನಂತರ ಪ್ರಸಾದ ಭೋಜನವು ನಡೆಯಲಿದೆ,, ಈ ಪುಣ್ಯ ಸತ್ಕಾರ್ಯ ದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀರಾಮನ ಕೃಪೆಗೆ ಪಾತ್ರರಾಗ ಬೇಕಾಗಿ

ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ಅಧ್ಯಕ್ಷ ರಾದ ರಾಕೇಶ್ ಎ ಶೆಟ್ಟಿ,,ಪ್ರಧಾನ ಕಾರ್ಯದರ್ಶಿ ಅರುಣ್ ಯಸ್ ಶೆಟ್ಟಿ, ಗೌರವ ಕೋಶಾಧಿಕಾರಿ ಸುಧಾಕರ್ ಶೆಟ್ಟಿ  ಪೆಲತ್ತೂರು, ಭಜನಾ ವಿಭಾಗ ಕಾರ್ಯಾಧ್ಯಕ್ಷ ರಾದ ರಾಜೇಶ್ ಶೆಟ್ಟಿ ಅವರು ವಿನಂತಿಸಿದ್ದಾರೆ.

———- 

Show quoted text



Related posts

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಬಾಬಾ ದರ್ಶನದಲ್ಲಿ ತಾತ್ಕಾಲಿಕ ಬದಲಾವಣೆ: ವಿಗ್ರಹ ನವೀಕರಣ ಹಿನ್ನೆಲೆ ಏಪ್ರಿಲ್ 27 ರಿಂದ ದರ್ಶನ ಸ್ಥಗಿತ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk

ಜೂ. 21ರಂದು ವಸಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಶ್ರೀ ಗುರು ನಾರಾಯಣ ಸೇವಾ ಸಮಿತಿ ವಸಯಿ,  ಮಾ. 9ರಂದು 29ನೇ ವಾರ್ಷಿಕ ಮೂರ್ತಿ ಪ್ರತಿಷ್ಠಾಪನ ದಿನಾಚರಣೆ

Mumbai News Desk

ಡಿ.17 ರಂದು ಡೊಂಬಿವಲಿ ಜನ ಗಣ ಮನ ಶಾಲಾ ವಠಾರದಲ್ಲಿ “ಕಂಸ ದಿಗ್ವಿಜಯ ಕಂಸ ವಧೆ” ಪೌರಾಣಿಕ ಯಕ್ಷಗಾನ

Mumbai News Desk