September 6, 2026
Mumbai News Kannada
ಮುಂಬಯಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು  ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ ಅಭಿಯಾನ: 





——-

ಮುಂಬಯಿ ಜ 19. ಮಾಲಾಡ್  ಪೂರ್ವದ ತುಳು ಕನ್ನಡಿಗರು ಸ್ಥಾಪಿಸಿದ ಶ್ರೀ ವರ ಮಹಾಲಕ್ಷ್ಮಿ ಪೂಜಾ  ಸಮಿತಿಯಲ್ಲಿ ಭಜನಾ ತಂಡ ರೂಪಗೊಂಡಿದ್ದು ಮೀರಾ ರೋಡ್ ಶ್ರೀ ಧರ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಜನೆ ಅಭ್ಯಾಸ ನಡೆಯುತ್ತಿದ್ದು ಈ ಭಜಕರಿಂದ ಜನವರಿಯ 22 ರಂದು ಆಯ್ಯೋದ್ಯಯಲ್ಲಿ ಶ್ರೀ ರಾಮನ ಮೂರ್ತಿ ಪ್ರತಿಷ್ಠಾಪನೆಯ ಸುಸಂದರ್ಭದಲ್ಲಿ  ಮಲಾಡ್ ನ್  ತುಳು ಕನ್ನಡಿಗರ ಮನೆ ಮನೆ ಯಲ್ಲಿ “ಶ್ರೀ ರಾಮ ನಾಮ ಸ್ಮರಣೆ *ಅಭಿಯಾನವು ಸಮಿತಿಯ ಅಧ್ಯಕ್ಷ ನ್ಯಾ. ಜಗನ್ನಾಥ್ ಶೆಟ್ಟಿ ಪಣಿಯೂರ್ ಇವರ  ನೇತೃತ್ವದಲ್ಲಿ   ಬೆಳಿಗ್ಗೆ 9 ರಿಂದ ಸಂಜೆ 5.30ವರೆಗೆ ಭಜನೆ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಶ್ರೀರಾಮನ ಮೂರ್ತಿಗೆ ವಿಶೇಷ ಪೂಜೆ ನಡೆದ ಬಳಿಕ   ಭಜನೆಗೆ  ಆಮಂತ್ರಿತ ತುಳು ಕನ್ನಡಿಗರ ಮನೆಗಳಲ್ಲಿ ದೀಪ ಬೆಳಗಿಸುವುದರ ಜೊತೆಗೆಭಜನೆ ಮಂಗಳಾರತಿ ನಡೆಯಲಿದೆ.

ಜಗತ್ತಿನಾದ್ಯಂತ ರಾಮ ಜಪ ಆರಂಭವಾಗಿದ್ದು, ಮಲಾಡ ನಲ್ಲಿ ಭಜನೆಯ ಯಜ್ಞ ನಡೆಯಲಿದೆ ಎಂದು ಪೂಜಾ ಸಮಿತಿಯ ಉಪಾಧ್ಯಕ್ಷರುಗಳಾದ ಸಂತೋಷ್ ಕೆ ಪೂಜಾರಿ ,ಕುಮಾರೇಶ್ ಆಚಾರ್ಯ ,ಪ್ರದಾನ ಕಾರ್ಯದರ್ಶಿ ದಿನೇಶ್ ಪೂಜಾರಿ, ಕೋಶಾಧಿಕಾರಿ ಜಗನ್ನಾಥ್ ಮೆಂಡನ್, ಮಹಿಳಾ ವಿಭಾಗದ  ಕಾರ್ಯದ್ಯಕ್ಷೆ ರತ್ನ . ಡಿ. ಕುಲಾಲ್, ಕಾರ್ಯದರ್ಶಿ ಶ್ರೀಮತಿ ಕೆ ಆಚಾರ್ಯ, ಕೋಶಾಧಿಕಾರಿ ಶೀಲಾ ಪೂಜಾರಿ ಹಾಗೂ ಯುವ ವಿಭಾಗದ  ಕಾರ್ಯದ್ಯಕ್ಷೆ ಸೌಮ್ಯ ಮೆಂಡನ್, ಕಾರ್ಯದರ್ಶಿ ಸುದೀಪ್ ಪೂಜಾರಿ ,. ಕೋಶಧಿಕಾರಿ ದಿಶಾ ಕರ್ಕೇರ ಹಾಗೂ ಸಮಿತಿಯ ಪದಾಧಿಕಾರಿಗಳು ತಿಳಿಸಿರುತ್ತಾರೆ.

ಕಳೆದ ವರ್ಷ ವರಮಹಾಲಕ್ಷ್ಮಿ ಪೂಜಾ  ಸಮಿತಿಯ ಯುವ ವಿಭಾಗ ಮಕ್ಕಳ ಉತ್ಸವ ಕಾರ್ಯಕ್ರಮ ದ   ಸಂದರ್ಭದಲ್ಲಿ ಶ್ರೀ ರಾಮನ ಕಥೆಯನ್ನ ಆಧರಿಸಿ ಶ್ರೀರಾಮ ಪಟ್ಟಾಭಿಷೇಕ ಎನ್ನುವ ನಾಟಕ ಡಾ  ಶಶಿನ್ ಆಚಾರ್ಯ, ಯೋಗೇಶ್ವರಿ ಗೌಡ,.ಸುದೀಪ್ ಪೂಜಾರಿ, ಪವನ್ ರಾವ್ , ನಿಧಿ ನಾಯಕ್, ಪ್ರಥಮ್ ಪೂಜಾರಿ ಇವರ ಸಂಯೋಜನೆಯಲ್ಲಿ ಮೂಡಿಬಂದಿದೆ.



Related posts

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ ಇದರ 138ನೇ ವಾರ್ಷಿಕ ಮಹಾಸಭೆ

Mumbai News Desk

ಜೊಗೇಶ್ವರಿಯ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶಾಖೆಯಲ್ಲಿ  ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಸಂಪನ್ನ.

Mumbai News Desk

ಬೋರಿವಲಿ ತುಳು ಸಂಘದ 16ನೇ ವಾರ್ಷಿಕೋತ್ಸವ.

Mumbai News Desk

ವಿದ್ಯಾವಿಹಾರ್ ಪಶ್ಚಿಮದ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದುಕಾ ಪ್ರದಾನ, ಪಂಚವಟಿ ತಾಳಮದ್ದಳೆ ಹಾಗೂ ಸನ್ಮಾನ

Mumbai News Desk

ವಡಾಲದ ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಗೆ ಎಸ್ ಎಸ್ ಸಿ ಯಲ್ಲಿ ಶೇಕಡ 100% ಫಲಿತಾಂಶ.

Mumbai News Desk

ಕುಲಾಲ ಸಂಘದ ವತಿಯಿಂದ ಸಂಭ್ರಮದ ಗಣೇಶೋತ್ಸವ,

Mumbai News Desk