April 2, 2025
ಮುಂಬಯಿ

ಮೀರಾರೋಡ್ ಬ್ರಹ್ಮ ಮಂದಿರದಲ್ಲಿ ಬಾಲ ಭಜನೆ, ಶಾರದಾ ಪೂಜೆ.


ಚಿತ್ರ, ವರದಿ: ಉಮೇಶ್ ಕೆ.ಅಂಚನ್.


ಮುಂಬಯಿ,ಜ.19. ಮೀರಾರೋಡ್ ಪೂರ್ವದ ಮೀರಾಭಾಯಂದರ್ ರಸ್ತೆಯಲ್ಲಿರುವ ಬ್ರಹ್ಮ ಮಂದಿರದಲ್ಲಿ ಲೀಲಾಧರ್ ಸನಿಲ್ ಸಾಂತೂರು (ಬಾಲಾಜಿ ಕ್ಯಾಟರರ್ಸ್)ರವರ ಮುಂದಾಳತ್ವದಲ್ಲಿ ಮಕರ ಸಂಕ್ರಾಂತಿಯಂದು ಶಾರದಾ ಪೂಜೆ, ಶ್ರೀರಾಮ ಪೂಜೆ ಹಾಗೂ ಬಾಲ ಭಜನಾ ಮಂಡಳಿಯವರಿಂದ ಭಜನೆ, ಕುಣಿತ ಭಜನೆ ನಡೆಯಿತು.

ಮೀರಾರೋಡ್ ಭಾರತಿ ಪಾರ್ಕ್ ಲಕ್ಷ್ಮೀ ನಾರಾಯಣ ಬಾಲ ಭಜನಾ ಮಂಡಳಿ ಮತ್ತು ಜೋಗೇಶ್ವರಿ ಜಗದಂಬಾ ಕಾಲಭೈರವ ದೇವಸ್ಥಾನದ ಬಾಲ ಭಜನಾ ಮಂಡಳಿಯ ಮಕ್ಕಳು ಮುಂಜಾನೆಯಲ್ಲಿ ಭಾಗವಹಿಸಿದ್ದರು.ಮೀರಾರೋಡ್ ವಿಭಾಗದ ಡಿವೈನ್ ಪಾರ್ಕ್ ಸದಸ್ಯರಿಂದ ಶ್ರೀ ರಾಮ ರಕ್ಷಾ ಸ್ತೋತ್ರ ಪಟನೆ, ಮಹಾ ಆರತಿ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷೆ ರಂಜನಾ ಸತೀಶ್ ಕಥಾವಟೆ ಬಾಲ ಮಕ್ಕಳ ಭಜನೆಗೆ ಸಂತೋಷ ವ್ಯಕ್ತ ಪಡಿಸಿ ಕಾಣಿಕೆ ನೀಡಿ ಅಭಿನಂದಿಸಿದರು. ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಪೂಜಾರಿ ಸೇರಿದಂತೆ ಪರಿಸರದ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಭಜನಾ ಗುರುಗಳಾದ ಮೀರಾರೋಡ್ ಹೇಮಂತ್ ಮುಚ್ಚೂರು ಮತ್ತು ಜೋಗೇಶ್ವರಿ ರಾಘವೇಂದ್ರ ಶಾನುಭಾಗ್ ದೇವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮವನ್ನು ಬಾಲಚಂದ್ರ ರೈ ನಿರೂಪಿಸಿದರು. ಸುರೇಶ್ ಕೋಟ್ಯಾನ್ ಪಡುಬಿದ್ರಿ, ಸದಾನಂದ ಕೋಟ್ಯಾನ್ ಕಾಪು ಹೇಮಂತ್ ಮುಚ್ಚೂರು, ಸುಧಾಕರ್ ಕೆ.ಸನಿಲ್ ಸಾಂತೂರು ಹಾಗೂ ಬಿಲ್ಲವರ ಅಸೋಸಿಯೇಶನಿನ ಮೀರಾರೋಡ್ ಸ್ಥಳೀಯ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದರು.

Related posts

ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ಆಟಿ ಡೊಂಜಿ ದಿನ ತುಳು ಕಾರ್ಯಕ್ರಮ

Mumbai News Desk

ಕರ್ನಿರೆ ಗಂಗಾಧರ್ ಅಮೀನ್ ಅವರ “ಕೊಂಕಣ್ ಸ್ವಾದ್” ಗೆ ಟೈಮ್ಸ್ ಪುಡ್ ಪ್ರಶಸ್ತಿ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಜೀವಿಕ ವಿಜಯಓದ್ಭಾವ ಶೆಟ್ಟಿ ಗೆ ಶೇ 94 ಅಂಕ.

Mumbai News Desk

ಮೀರಾರೋಡಿನಲ್ಲಿ ಗೆಜ್ಜೆ ಗಿರಿ ಮೇಳದವರಿಂದ……ಎಡ್ಮೂರ ಮುಗೇರ ಸತ್ಯೊಲು…ಯಕ್ಷಗಾನ ಪ್ರದರ್ಶನ.

Mumbai News Desk

ಕಲೆಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥ -ವಾರ್ಷಿಕ ಅಯ್ಯಪ್ಪ ಮಹಾಪೂಜೆ ಭಕ್ತಿ, ಸಂಭ್ರಮದೊಂದಿಗೆ ಸಂಪನ್ನ,

Mumbai News Desk