September 6, 2026
Mumbai News Kannada
ಮುಂಬಯಿ

ಮೀರಾರೋಡ್ ಬ್ರಹ್ಮ ಮಂದಿರದಲ್ಲಿ ಬಾಲ ಭಜನೆ, ಶಾರದಾ ಪೂಜೆ.






ಚಿತ್ರ, ವರದಿ: ಉಮೇಶ್ ಕೆ.ಅಂಚನ್.


ಮುಂಬಯಿ,ಜ.19. ಮೀರಾರೋಡ್ ಪೂರ್ವದ ಮೀರಾಭಾಯಂದರ್ ರಸ್ತೆಯಲ್ಲಿರುವ ಬ್ರಹ್ಮ ಮಂದಿರದಲ್ಲಿ ಲೀಲಾಧರ್ ಸನಿಲ್ ಸಾಂತೂರು (ಬಾಲಾಜಿ ಕ್ಯಾಟರರ್ಸ್)ರವರ ಮುಂದಾಳತ್ವದಲ್ಲಿ ಮಕರ ಸಂಕ್ರಾಂತಿಯಂದು ಶಾರದಾ ಪೂಜೆ, ಶ್ರೀರಾಮ ಪೂಜೆ ಹಾಗೂ ಬಾಲ ಭಜನಾ ಮಂಡಳಿಯವರಿಂದ ಭಜನೆ, ಕುಣಿತ ಭಜನೆ ನಡೆಯಿತು.

ಮೀರಾರೋಡ್ ಭಾರತಿ ಪಾರ್ಕ್ ಲಕ್ಷ್ಮೀ ನಾರಾಯಣ ಬಾಲ ಭಜನಾ ಮಂಡಳಿ ಮತ್ತು ಜೋಗೇಶ್ವರಿ ಜಗದಂಬಾ ಕಾಲಭೈರವ ದೇವಸ್ಥಾನದ ಬಾಲ ಭಜನಾ ಮಂಡಳಿಯ ಮಕ್ಕಳು ಮುಂಜಾನೆಯಲ್ಲಿ ಭಾಗವಹಿಸಿದ್ದರು.ಮೀರಾರೋಡ್ ವಿಭಾಗದ ಡಿವೈನ್ ಪಾರ್ಕ್ ಸದಸ್ಯರಿಂದ ಶ್ರೀ ರಾಮ ರಕ್ಷಾ ಸ್ತೋತ್ರ ಪಟನೆ, ಮಹಾ ಆರತಿ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷೆ ರಂಜನಾ ಸತೀಶ್ ಕಥಾವಟೆ ಬಾಲ ಮಕ್ಕಳ ಭಜನೆಗೆ ಸಂತೋಷ ವ್ಯಕ್ತ ಪಡಿಸಿ ಕಾಣಿಕೆ ನೀಡಿ ಅಭಿನಂದಿಸಿದರು. ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಪೂಜಾರಿ ಸೇರಿದಂತೆ ಪರಿಸರದ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಭಜನಾ ಗುರುಗಳಾದ ಮೀರಾರೋಡ್ ಹೇಮಂತ್ ಮುಚ್ಚೂರು ಮತ್ತು ಜೋಗೇಶ್ವರಿ ರಾಘವೇಂದ್ರ ಶಾನುಭಾಗ್ ದೇವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮವನ್ನು ಬಾಲಚಂದ್ರ ರೈ ನಿರೂಪಿಸಿದರು. ಸುರೇಶ್ ಕೋಟ್ಯಾನ್ ಪಡುಬಿದ್ರಿ, ಸದಾನಂದ ಕೋಟ್ಯಾನ್ ಕಾಪು ಹೇಮಂತ್ ಮುಚ್ಚೂರು, ಸುಧಾಕರ್ ಕೆ.ಸನಿಲ್ ಸಾಂತೂರು ಹಾಗೂ ಬಿಲ್ಲವರ ಅಸೋಸಿಯೇಶನಿನ ಮೀರಾರೋಡ್ ಸ್ಥಳೀಯ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ್ದರು.



Related posts

ಗೋರೆಗಾಂವ್ ಕರ್ನಾಟಕ ಸಂಘದಲ್ಲಿ ತುಳು ದಿನಾಚರಣೆ,ಬಾಷೆ ನಶಿಸಿದಲ್ಲಿ ನಾವು ಸುರಕ್ಷಿತರು ಎನ್ನಲಾಗುದಿಲ್ಲ – ಶಿಮಂತೂರು ಚಂದ್ರಹಾಸ ಸುವರ್ಣ

Mumbai News Desk

ಕುಲಾಲ ಭವನದ ಆಹ್ವಾನ ಪತ್ರಿಕೆ ವಿತರಣೆ: ಕುಲಾಲ ಸಂಘ ಮುಂಬಯಿ-ಥಾಣೆ, ಕಾಸರ, ಖರ್ಜತ್, ಬಿವಂಡಿ ಸ್ಥಳೀಯ ಸಮಿತಿ

Mumbai News Desk

ಕರ್ನಾಟಕ ಸಂಘ ಕಲ್ಯಾಣ: ಕರ್ನಾಟಕ ರಾಜ್ಯೋತ್ಸವ, 23ನೇ ವಾರ್ಷಿಕೋತ್ಸವ

Mumbai News Desk

ಮುಂಬೈ: ಬಾಂದ್ರಾದಲ್ಲಿ ರೈಲ್ವೆ ಭೂಮಿ ತೆರವು ವೇಳೆ ಭಾರಿ ಹಂಗಾಮು, ಪೊಲೀಸರ ಮೇಲೆ ಕಲ್ಲು ತೂರಾಟ, ಲಾಠಿ ಪ್ರಹಾರ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು  ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ

Mumbai News Desk

ಶಹಾಡ್: ಶ್ರೀ ಮೂಕಾಂಬಿಕಾ ದೇವಸ್ಥಾನದ 64ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk