32 C
Mumbai
March 7, 2026
Mumbai News Kannada
ಪ್ರಕಟಣೆ

ಬೊರಿವಿಲಿ ಶ್ರೀ ಮಹೀಷಮರ್ದಿನಿ ದೇವಸ್ಥಾನ ದಲ್ಲಿ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವ





ಬೊರಿವಿಲಿ, ಜ, 20: ಅಯೋಧ್ಯೆಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ವೈಭವದ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಜ. 22ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಜಯರಾಜ್ ನಗರ ವಜೀರನಾಕ ಬೊರಿವಿಲಿ ಇಲ್ಲಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯನ್ನು ಆಯೋಜಿಸಲಾಗಿದೆ. 

     ಬೆಳಿಗ್ಗೆ ಗಂಟೆ 10 ರಿಂದ ಶ್ರೀ ಮಹಿಷ ಮರ್ದಿನಿ ಭಜನಾ ಮಂಡಳಿ ಅವರಿಂದ ಭಜನೆ,  ಕಲಶದರ್ಶನ ಹಾಗೂ ಮಧ್ಯಾಹ್ನ ಮಹಾಪೂಜೆ ಜರಗುವುದು. ಆ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಲಿದೆ.

      ಬಹು ನಿರೀಕ್ಷಿತ ಶ್ರೀರಾಮ ಮಂದಿರದ ಉದ್ಘಾಟನೆಯ ಅಂಗವಾಗಿ ಏರ್ಪಡಿಸಲಾದ ಧಾರ್ಮಿಕ ಕಾರ್ಯಕ್ರಮದಲ್ಲಿ ಸರ್ವಸದ್ಭಕ್ತರು ಉಪಸ್ಥಿತರಿದ್ದು  ಶ್ರೀ ಮಹಿಷ ಮರ್ಧಿನಿ ದೇವಿ ಹಾಗೂ ಶ್ರೀ ರಾಮದೇವರ ಕೃಪೆಗೆ ಪಾತ್ರರಾಗಬೇಕಾಗಿ ಸ್ಥಾಪಕ ಆಡಳಿತ ಮೊಕ್ತೇಸರರಾದ ಹರಿಯಾಳಗುತ್ತು ಜಯರಾಜ್  ಶ್ರೀಧರ್ ಶೆಟ್ಟಿ ದಂಪತಿಗಳು, ಆಡಳಿತ ಮಂಡಳಿ ಮೊಕ್ತೇಸರರಾದ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ ಶೆಟ್ಟಿ ದಂಪತಿಗಳು ,ಮೊಕ್ತೇಸರರಾದ ಜಯಪಾಲಿ ಅಶೋಕ ಶೆಟ್ಟಿ,ಅರ್ಚಕ ವೃಂದ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.



Related posts

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.

Mumbai News Desk

ಕಾರ್ನಾಡು ಶ್ರೀ ಧರ್ಮಸ್ಥಾನ : ಮಾರ್ಚ್ 08, 09, ಮತ್ತು 10ರಂದು “ವರ್ಷಾವಧಿ ನೇಮೋತ್ಸವ”

Mumbai News Desk

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk

ಡಿ. 21ರಂದು ಅಂಧೇರಿಯಲ್ಲಿ ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ನೇತೃತ್ವದ 37ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಸೆ.7 ರಂದು ಕಲ್ಯಾಣ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಭವ್ಯ ಸಮಾರಂಭ

Mumbai News Desk

ಬೈಂದೂರು – ಕುಂದಾಪುರ ಬಿಲ್ಲವರು ಮುಂಬಯಿ. ಜನವರಿ 19 ರಂದು ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk