July 23, 2026
Mumbai News Kannada
ಪ್ರಕಟಣೆ

ಬೊರಿವಿಲಿ ಶ್ರೀ ಮಹೀಷಮರ್ದಿನಿ ದೇವಸ್ಥಾನ ದಲ್ಲಿ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವ







ಬೊರಿವಿಲಿ, ಜ, 20: ಅಯೋಧ್ಯೆಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ವೈಭವದ ಶ್ರೀ ರಾಮ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಜ. 22ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಜಯರಾಜ್ ನಗರ ವಜೀರನಾಕ ಬೊರಿವಿಲಿ ಇಲ್ಲಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆಯನ್ನು ಆಯೋಜಿಸಲಾಗಿದೆ. 

     ಬೆಳಿಗ್ಗೆ ಗಂಟೆ 10 ರಿಂದ ಶ್ರೀ ಮಹಿಷ ಮರ್ದಿನಿ ಭಜನಾ ಮಂಡಳಿ ಅವರಿಂದ ಭಜನೆ,  ಕಲಶದರ್ಶನ ಹಾಗೂ ಮಧ್ಯಾಹ್ನ ಮಹಾಪೂಜೆ ಜರಗುವುದು. ಆ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಲಿದೆ.

      ಬಹು ನಿರೀಕ್ಷಿತ ಶ್ರೀರಾಮ ಮಂದಿರದ ಉದ್ಘಾಟನೆಯ ಅಂಗವಾಗಿ ಏರ್ಪಡಿಸಲಾದ ಧಾರ್ಮಿಕ ಕಾರ್ಯಕ್ರಮದಲ್ಲಿ ಸರ್ವಸದ್ಭಕ್ತರು ಉಪಸ್ಥಿತರಿದ್ದು  ಶ್ರೀ ಮಹಿಷ ಮರ್ಧಿನಿ ದೇವಿ ಹಾಗೂ ಶ್ರೀ ರಾಮದೇವರ ಕೃಪೆಗೆ ಪಾತ್ರರಾಗಬೇಕಾಗಿ ಸ್ಥಾಪಕ ಆಡಳಿತ ಮೊಕ್ತೇಸರರಾದ ಹರಿಯಾಳಗುತ್ತು ಜಯರಾಜ್  ಶ್ರೀಧರ್ ಶೆಟ್ಟಿ ದಂಪತಿಗಳು, ಆಡಳಿತ ಮಂಡಳಿ ಮೊಕ್ತೇಸರರಾದ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ ಶೆಟ್ಟಿ ದಂಪತಿಗಳು ,ಮೊಕ್ತೇಸರರಾದ ಜಯಪಾಲಿ ಅಶೋಕ ಶೆಟ್ಟಿ,ಅರ್ಚಕ ವೃಂದ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.



Related posts

ಬೆಂಗ್ರೆಯಲ್ಲಿ ಭಕ್ತಿ-ಸಂಸ್ಕೃತಿಯ ಸಂಗಮ: ಶ್ರೀ ವೀರಭಾರತಿ ವ್ಯಾಯಾಮ ಶಾಲೆಯ ಶತಮಾನೋತ್ಸವ ಹಾಗೂ ಶ್ರೀ ಪಟ್ಟಾಭಿರಾಮ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ

Mumbai News Desk

ಬೈಂದೂರು – ಕುಂದಾಪುರ ಬಿಲ್ಲವರು ಮುಂಬಯಿ. ಜನವರಿ 19 ರಂದು ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ಆ 26. ಕುಲಾಲ ಸಂಘ ಮುಂಬಯಿ: ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣೆ

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ – 48ನೇ ವರ್ಷದ ನವರಾತ್ರಿ ಮಹೋತ್ಸವ 2025

Mumbai News Desk

ಡೊಂಬಿವಿಲಿ ಶ್ರೀ ಜಗದಂಬಾ ಮಂದಿರ: ಅ. 16 ರಂದು ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ

Mumbai News Desk