July 23, 2026
Mumbai News Kannada
ಸುದ್ದಿ

ಕರ್ನಿರೆ ಸುವರ್ಣ ಪ್ರತಿಷ್ಠಾನದಿಂದ ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ   ಸಮ್ಮಾನ 







—————————

ಮಂಗಳೂರು: ಸುವರ್ಣ ಪ್ರತಿಷ್ಠಾನ ಕರ್ನಿರೆ ವತಿಯಿಂದ 11ನೇ ವಾರ್ಷಿಕೋತ್ಸವದ ಅಂಗವಾಗಿ ಶೈಕ್ಷಣಿಕ ನರವಿನೊಂದಿಗೆ ಯಕ್ಷ ಕಲಾರಾಧನೆ ಮತ್ತು ಹಿರಿಯ ಕಲಾವಿದರ ಸನ್ಮಾನ ಕಾರ್ಯಕ್ರಮ ಫೆಬ್ರವರಿ 25ರಂದು ಜರಗಿತು. ಕರ್ನಿರೆ ಜಾರಂದಾಯ ದೈವದ ಗಡುವಾಡು ಬಳಿ ಕೊಪ್ಪಳ ತೋಟದಲ್ಲಿ ದುಬೈ ನಿವಾಸಿ – ಹವ್ಯಾಸಿ ಯಕ್ಷಗಾನ ವೇಷಧಾರಿ ಪ್ರಭಾಕರ ಡಿ. ಸುವರ್ಣ ಮತ್ತು ಕುಟುಂಬಿಕರು ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.

ಕಲಾಸಾಧಕರ ಸಮ್ಮಾನ ಯಕ್ಷಗಾನ ಕ್ಷೇತ್ರದಲ್ಲಿ ತಾಳಮದ್ದಳೆ ಅರ್ಥಧಾರಿಗಳಾಗಿ, ವೇಷಧಾರಿಗಳಾಗಿ ಮತ್ತು ಸಂಘಟಕರಾಗಿ ಪ್ರಸಿದ್ಧರಾದ ಎಂಟು ಮಂದಿ ಸಾಧಕ ಕಲಾವಿದರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯಕ್ಷಗಾನ ವಿದ್ವಾಂಸರಾದ ಡಾ.ಎಂ. ಪ್ರಭಾಕರ ಜೋಶಿ ಮತ್ತು ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಅರ್ಥಧಾರಿ, ಸಂಘಟಕರಾದ ಉಜಿರೆ ಅಶೋಕ ಭಟ್, ವೇಷಧಾರಿಗಳಾದ ಸರಪಾಡಿ ಅಶೋಕ ಶೆಟ್ಟಿ, ಡಿ‌ಮನೋಹರ ಕುಮಾರ್, ಶಶಿಕಾಂತ ಶೆಟ್ಟಿ ಕಾರ್ಕಳ ಹಾಗೂ ಯಕ್ಷಗಾನ ಮತ್ತು ನೃತ್ಯ ಕಲಾವಿದೆ ಸುಮಂಗಲಾ ರತ್ನಾಕರ್ ಅವರನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣ ಸನ್ಮಾನಿಸಿದರು.

ಪೋಷಕರಿಗೆ ಗೌರವ:

        ಸಮಾರಂಭದಲ್ಲಿ ಪ್ರತಿಷ್ಠಾನದ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ ನಿಧಿಯನ್ನು ವಿತರಿಸಲಾಯಿತು. ಅಲ್ಲದೆ ಯಕ್ಷಗಾನ ಪೋಷಕರಾದ ಮುಂಬೈ ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ ಮತ್ತು ಸಂಘಟಕ ಪದ್ಮನಾಭ ಕಟೀಲು ಅವರನ್ನು ಸನ್ಮಾನಿಸಲಾಯಿತು. ಸ್ಥಳೀಯ ಸಂಘಟಕರಾದ ಗಿರೀಶ್ ಸುವರ್ಣ ದಂಪತಿಯನ್ನು ಸಭೆಯಲ್ಲಿ ಗೌರವಿಸಲಾಯಿತು. ಸನ್ಮಾನಿತರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

      ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಪ್ರಭಾಕರ ಡಿ. ಸುವರ್ಣ ಸ್ವಾಗತಿಸಿದರು. ಗೌರವಾಧ್ಯಕ್ಷ ಭುಜಂಗ ಡಿ. ಸುವರ್ಣ ಮತ್ತು ಪ್ರತಿಷ್ಠಾನದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಜನಾರ್ದನ ಅಮ್ಮುಂಜೆ ನಿರೂಪಿಸಿ ವಂದಿಸಿದರು.

   ‌ಬಳಿಕ ತೆಂಕುತಿಟ್ಟಿನ ವಿವಿಧ ಮೇಳಗಳ ಹೆಸರಾಂತ ಕಲಾವಿದರು ಮತ್ತು ಮಹಿಳಾ ಕಲಾವಿದೆಯರಿಂದ ‘ಶ್ರೀಮತಿ ಪರಿಣಯ – ಸಮಗ್ರ ಭೀಷ್ಮ’ ಯಕ್ಷಗಾನ ಬಯಲಾಟ ಜರಗಿತು.



Related posts

ಮಾದಕ ವ್ಯಸನ ವಿರೋಧಿ ಅಭಿಯಾನ – “ಜಾಗೃತಿ, ಸಂವಾದ ಮತ್ತು ಸಮಾಲೋಚನೆ”_

Mumbai News Desk

ಯಕ್ಷಗಾನ ರಂಗದ ಅಮರ ಗಂಧರ್ವ ಕಾಳಿಂಗ ನಾವಡರ ಪುಣ್ಯಸ್ಮರಣೆ: ಕರಾವಳಿಯ ಕೋಗಿಲೆಗೆ ನುಡಿನಮನ

Mumbai News Desk

ಮುಂಬೈ : ಗೇಟ್ ವೇ ಆಫ್ ಇಂಡಿಯಾ ಬಳಿ ದೋಣಿ ಮಗುಚಿ ಒಂದು ಸಾವು, 20 ಜನರ ರಕ್ಷಣೆ

Chandrahas

ಐ. ಸಿ. ಎಸ್. ಇ -10ನೇ ತರಗತಿಯ ಫಲಿತಾಂಶ -2024

Mumbai News Desk

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಪೊಲೀಸ್ ವಶಕ್ಕೆ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲು

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ – ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ, ಧಾರ್ಮಿಕ ಸಭೆ.

Mumbai News Desk