32 C
Mumbai
April 24, 2026
Mumbai News Kannada
ಪ್ರಕಟಣೆ

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ





  ಮುಂಬಯಿ  ಪೆ 6.  ಮಹಾ ನಗರದಲ್ಲಿರುವ ಪ್ರತಿಷ್ಠಿತ ಜಾತೀಯ ಸಂಸ್ಥೆಯಲ್ಲೊಂದಾದ ಕುಮಾರ ಕ್ಷತ್ರಿಯ, ಮುಂಬಯಿಯು ಫೆಬ್ರವರಿ , ರವಿವಾರ ದಿನಾಂಕ 11 ರಂದು ಸಾಂತಕ್ರೂಜ್ ಪೂರ್ವದ ಪೇಜಾವರ ಮಠ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಎಂ.ಡಿ. ರಾವ್/ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಲು ಎಂ. ರಾವ್ ಅವರ ನೇತೃತ್ವದಲ್ಲಿ  ಬೆಳಿಗ್ಗೆ 10.00 ಗಂಟೆಗೆ  ಸರಿಯಾಗಿ ಶ್ರೀ ಸತ್ಯನಾರಾಯಣ ಮಹಾಪೂಜೆ  ನಂತರ  ಮಹಿಳೆಯರಿಂದ ಹಳದಿ ಕುಂಕುಮ ಕಾರ್ಯಕ್ರಮ  ನೆರವೇರಲಿದೆ. ಮಧ್ಯಾಹ್ನ 12.15 ಗಂಟೆಗೆ ಕುಮಾರ ಕ್ಷತ್ರಿಯ ಸಂಘ, ಮುಂಬಯಿಯ ಅಧ್ಯಕ್ಷ ಎಂ ಡಿ ರಾವ್  ಅಧ್ಯಕ್ಷತೆಯಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಶಾಲು ಎಂ. ರಾವ್ ಇವರ ಉಪಸ್ಥಿತಿಯಲ್ಲಿ ವಾರ್ಷಿಕ ಮಹಾಸಭೆಯು ನೆರವೇರಲಿದೆ.

   ಇದೇ ಸಂದರ್ಭದಲ್ಲಿ ಸಮಾಜ ಬಾಂಧವರ ಶಾಲಾ ಕಾಲೇಜಿನಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುವದು ಮತ್ತು ಸಂಘದ  ಪ್ರಗತಿಗೋಸ್ಕರ ಶ್ರಮಿಸಿದ ದಿವಂಗತ ಕಾರ್ಯಕರ್ತರ ಕುಟುಂಬದ ವರನ್ನು ಸನ್ಮಾನಿಸಲಾಗುವದು. ಸಂಘದ ಪ್ರಗತಿಕೋಸ್ಕರ ಶ್ರಮಿಸಿದ ಮಾಜಿ ಆಧ್ಯಕ್ಷರಾದ ಪ್ರಕಾಶ ನಾಥರವರನ್ನು “Life Time Achievement” ಪ್ರಶಸ್ತಿ ನೀಡಿ ಸನ್ಮಾನಿಸಲಾಗುವದು. ಹಾಗೂ ಕಾರ್ಯಕ್ರಮಕೊಸ್ಕರವೇ ಊರಿನಿಂದ ಬಂದ ಸಮಾಜ ಬಾಂಧವರನ್ನೂ  ಗೌರವಿಸಲಾಗುವದು.

ಮಧ್ಯಾಹ್ನ 2.45 ರಿಂದ  ಇದೇ ಸಭಾಗೃಹದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಾ. ರೇಣುಕಾ ಬಿ. ಅಮೀನ್ ಮತ್ತು ಅವರ ಬಳಗದವರಿಂದ ” ಸ್ವರಲೀಲೆ ಆರ್ಕೆಸ್ಟ್ರಾ” ಜರಗಲಿದ್ದು   ಸಮಾಜದ ಮಕ್ಕಳಿಗೂ ಇದರಲ್ಲಿ ಭಾಗವಹಿಸುವ ಅವಕಾಶ ಕೊಡಲಾಗುವದು. ಅಂದು ‘ಚೆಂಬೂರ್ ಕರ್ನಾಟಕ ಹೈಸ್ಕೂಲ್’ ಶಾಲೆಯ ವಿದ್ಯಾರ್ಥಿಗಳು  ಜಾನಪದ ನೃತ್ಯ ಪ್ರಸ್ತುತ ಪಡಿಸಲಿದ್ದಾರೆ. ಜೊತೆಗೆ ಡಾ. ರೇಣುಕಾ ಬಿ. ಅಮೀನ್ ಅವರು ‘ಆರೋಗ್ಯ’ ವಿಷಯದ ಬಗ್ಗೆ ಉಪಯುಕ್ತ ಮಾಹಿತಿಗಳನ್ನೂ ನೀಡಲಿದ್ದಾರೆ. 

ಈ ಸಂದರ್ಭದಲ್ಲಿ ಲಘು ಉಪಹಾರ ಹಾಗೂ ಮಧ್ಯಾಹ್ನ ಪ್ರೀತಿ ಭೊಜನದ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕುಮಾರ ಕ್ಷತ್ರಿಯ ಸಂಘ ಮುಂಬಯಿವತಿಯಿಂದ ಉಪಾಧ್ಯಕ್ಷ  ರವಿ ಜಿ. ಚಂದ್ರಗಿರಿ, ಗೌ. ಪ್ರ. ಕಾರ್ಯದರ್ಶಿ    ಉಮಾನಾಥ ವಿ. ರಾವ್, ಕೋಶಾಧಿಕಾರಿ ಶಾಂತಾರಾಮ್ ಜೆ. ಮಾಂಗಾಡ್, ಜೊತೆ ಕೋಶಾಧಿಕಾರಿ ಸುರೇಂದ್ರ ಎಚ್. ಎ. ಮತ್ತು ಜೊತೆ ಕಾರ್ಯದರ್ಶಿ ಸಾಗರ  ಪಿ. ರಾವ್ ಮತ್ತು  ಸಮಿತಿ ಸದಸ್ಯರಾದ ಕೆ. ಎಂ. ರಾವ್,  ರವಿ ಎಸ್. ಕಲ್ನಾಡ್, ವಿವೇಕ್ ಜಿ. ರಾವ್, ಅನಿಲ್ ಜಿ. ರಾವ್,  ಪ್ರಶಾಂತ್ ನಾಥ್, ಪ್ರಶಾಂತ ಆರ್. ರಾವ್, ಅನುಪ್ ಜೆ.ರಾವ್ ಮಹಿಳಾ ವಿಭಾಗದವತಿಯಿಂದ  ಕಾರ್ಯಾಧ್ಯಕ್ಷೆ ಶಾಲು ಎಂ.‌ ರಾವ್, ಉಪ ಕಾರ್ಯಾಧ್ಯಕ್ಷೆ  ಉಮಾ ಎಸ್. ರಾವ್,  ಗೌ. ಪ್ರ. ಕಾರ್ಯದರ್ಶಿ ಕವಿತಾ ರೋಹನ್, ಜೊತೆ ಕಾರ್ಯದರ್ಶಿ ಕಲ್ಪನಾ ಎಸ್. ರಾವ್, ಸಲಹೆಗಾರರಾದ ಪ್ರಭಾ ಎಂ. ರಾವ್  ಮತ್ತು ಕೋಶಾಧಿಕಾರಿ ಇಂದುಮತಿ ಎ. ರಾವ್ ಹಾಗೂ  ಮಹಿಳಾ ಸಮಿತಿ ಸದಸ್ಯರಾದ ವಿಶಾಲಾಕ್ಷಿ ಎ. ಚಂದ್ರಗಿರಿ, ಛಾಯಾ ಯತೀಶ್ ಕುಮಾರ್, ಬಿಂದು ಕುಂದರ್ ,‌ ರಮ್ಯಾ ಎಸ್. ಮಾಂಗಾಡ್ , ಶಯಾತ್ರಿ ವಿ. ರಾವ್ ಮತ್ತು ರೇಖಾ ಸಾವಂತ್ ಇವರೆಲ್ಲರೂ ಪತ್ರಿಕಾ ಪ್ರಕಟನೆಯ ಮೂಲಕ ವಿನಂತಿಸಿ ಕೊಂಡಿದ್ದಾರೆ.

————

 



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು – ಮಾ. 6ಕ್ಕೆ ಸ್ತನಪಾನ ಕೊಠಡಿ ಉದ್ಘಾಟನೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk

ಫೆಬ್ರವರಿ 1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ: ಸಾಮೂಹಿಕ ನೃತ್ಯ ಸ್ಪರ್ಧೆಗೆ ಆಹ್ವಾನ

Mumbai News Desk

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk

ಸಾಂತಕ್ರೂಸ್   ಶ್ರೀ ಮಂತ್ರ ದೇವಿ   ದೇವಸ್ಥಾನ ವಾರ್ಷಿಕ ಮಹಾಪೂಜೆ.

Mumbai News Desk