32 C
Mumbai
March 7, 2026
Mumbai News Kannada
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದಸಮಾಜದ ವಿದ್ಯಾರ್ಥಿಗಳಿಗಾಗಿ ಏರ್ಪಟ್ಟ ಚಿತ್ರಕಲಾ ಸ್ಪರ್ಧೆ :





ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿಯ ಮೊಗವೀರ ವಿದ್ಯಾರ್ಥಿಗಳಿಗಾಗಿ ಫೆ 4 ರಂದು ಚಿತ್ರಕಲಾ ಸ್ಪರ್ಧೆ ಏರ್ಪಟ್ಟಿತು.

ಬೆಳಿಗ್ಗೆ 9 ಗಂಟೆಗೆ ಕುಲಮಾತೆ ಶ್ರೀ ಮಹಿಷಾಸುರ ಮರ್ದಿನಿ ದೇವಿಗೆ ಪೂಜೆ ಸಲ್ಲಿಸಿ, ಸಂಘದ ಗೌರವ ಅಧ್ಯಕ್ಷರಾದ ಭಾಸ್ಕರ್ N ಕಾಂಚನ್ ಹಾಗೂ ಅಧ್ಯಕ್ಷರಾದ ರಾಜು A ಮೊಗವೀರ ತಗ್ಗರ್ಸೆ ರವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸುಮಾರು 60 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದರು.


ಚಿತ್ರಕಲಾ ಸ್ಪರ್ಧೆಯ ಮುಂದಾಳತ್ವವನ್ನು ಸಂಘದ ಮಹಿಳಾ ವಿಭಾಗದ ನಿಶಾ ಮೆಂಡನ್ ರವರು ವಹಿಸಿ ನಡೆಸಿಕೊಟ್ಟರು.
ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಿರು ಬಹುಮಾನ ಹಾಗೂ ಪ್ರಮಾಣ ಪತ್ರಿಕೆಯನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು. ಚಿತ್ರಕಲಾ ಸ್ಪರ್ಧೆಯ ಫಲಿತಾಂಶವನ್ನು ಪಾಲಕರಿಗೆ ಮುಂಗಡವಾಗಿ ತಿಳಿಸಲಾಗುವುದು ಮತ್ತು ಬಹುಮಾನವನ್ನು ಮಾರ್ಚ್ 3, 2024 ಆದಿತ್ಯವಾರ ನಡೆಯಲಿರುವ ಕುಂದರಂಜನಿ 2024 ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ಸಭೆಗೆ ತಿಳಿಸಲಾಯಿತು.
ವೇದಿಕೆಯಲ್ಲಿ ಗೌರವ ಅಧ್ಯಕ್ಷರಾದ ಭಾಸ್ಕರ್ N ಕಾಂಚನ್, ಅಧ್ಯಕ್ಷರಾದ ರಾಜು A ಮೊಗವೀರ ತಗ್ಗರ್ಸೆ, ಉಪಾಧ್ಯಕ್ಷರಾದ ಬಾಬು ಕೆ ಮೊಗವೀರ, ಕಾರ್ಯದರ್ಶಿ ಸಂತೋಷ B ಪುತ್ರನ್ ಹಾಗೂ ಪ್ರೋಗ್ರಾಮ್ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಶ್ರೀಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ
ಮೊಗವೀರ ಮಹಾಜನ ಸೇವಾ ಸಂಘದ ಮುಖ್ಯ ಕಚೇರಿಯ ಸೇವಾ ದಳದ ಶೇಖರ್ ಮೊಗವೀರರನ್ನು ಪುಷ್ಪಗುಚ್ಚವನ್ನು ನೀಡಿ ಗೌರವಿಸಲಾಯಿತು.
ಹಾಗೇನೇ ಕಾರ್ಯಕ್ರಮದ ನಿರೂಪಣೆಯನ್ನು ಡೊಂಬಿವಲಿ ಪರಿಸರದ ಉತ್ತಮ ಸಂಘಟಕ ವಸಂತ್ ಸುವರ್ಣ ರವರು ಬಹಳ ಅಚ್ಚು ಕಟ್ಟಾಗಿ ಮಾಡಿದರು.
ದಿನೇಶ ಮೊಗವೀರ ಅವರು ವಿದ್ಯಾರ್ಥಿಗಳಿಗೆ ಹಾಗೂ ಅವರ ಪಾಲಕರಿಗೆ ಲಘು ಉಪಹಾರ ವ್ಯವಸ್ಥೆ ಮಾಡಿದರು. ಕೊನೆಗೆ ಕಾರ್ಯದರ್ಶಿ ಸಂತೋಷ ಪುತ್ರನ್ ರವರ ಧನ್ಯವಾದಗಳೊಂದಿಗೆ ಸಭೆಯು ಮುಕ್ತಾಯಗೊಂಡಿತು



Related posts

ಬಂಟರ ಸಂಘ, ಮುಂಬಯಿ, ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿ ಮಹಿಳಾ‌ ವಿಭಾಗ- ಆಟಿದ ಪೊರ್ಲ್ ತಿರ್ಲ್ ಕಾರ್ಯಕ್ರಮ

Mumbai News Desk

ತ್ರಿಶಾ ಉದಯ ಶೆಟ್ಟಿ ಶೇಗೆ   80.00 %

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರೀತಮ್ ಮೋಹನ್ ಬಂಗೇರ ಗೆ ಶೇ 88 ಅಂಕ.

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಕೋಪರಖೈರನೆ ಶಾಖೆಯಲ್ಲಿ ವಿಜೃಂಭಣೆಯಿಂದ ಜರಗಿದ 46ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 34ನೇ ವಾರ್ಷಿಕ ಮಹಾಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ – 35ನೇ ವಾರ್ಷಿಕ ಮಹಾಪೂಜೆ ಸಂಪನ್ನ, ಹಿರಿಯ ಸೇವಾ ಕರ್ತರಿಗೆ ಗೌರವ

Mumbai News Desk