32 C
Mumbai
March 7, 2026
Mumbai News Kannada
ಸುದ್ದಿ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.





ಚಿತ್ರ ಹಾಗೂ ವರದಿ : ಪಿ.ಆರ್.ರವಿಶಂಕರ್

    ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಶೃದ್ದಾಕೇಂದ್ರವೆನಿಸಿದ ಬೊಯಿಸರ್ ನ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿನ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನದ ಸಂಪನ್ನ ಪೂಜೆಯು ಇದೇ   ಸೋಮವಾರ ತಾ.05 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

    ಪಕ್ಕದ  ಶ್ರೀ ರಾಮ ಮಂದಿರದಲ್ಲಿ ದೀಪಪ್ರಜ್ವಲನೆಯ  ಮೂಲಕ ಕಾರ್ಯಕ್ರಮ ಆರಂಭಗೊಂಡು ನಿತ್ಯಾನಂದ ಮಂದಿರದ ಆವರಣದಲ್ಲಿ ಜರಗಿದ ಕಲಶ ಪೂಜೆ ,   ದೀಪಾರಾಧನೆ , ಷೋಡಶ ಪೂಜೆ  ಹಾಗೂ ದುರ್ಗಾ ಅಷ್ಟೋತ್ತರ ನಾಮಾರ್ಚನೆ ಹಾಗೂ ಸಂಪನ್ನ ಜಪವನ್ನು   ಜಾತಿಭಾಷಾ ಭೇದವಿಲ್ಲದೆಯೇ ಭಾಗವಹಿಸಿದ ಭಕ್ತಾಭಿಮಾನಿಗಳು   ನೆರವೇರಿಸಿದರು.

ಶ್ರೀ ಬಾಬಾ ನಿತ್ಯಾನಂದರ ಆರತಿಯ ಬಳಿಕ ಪ್ರಸಾದರೂಪದಲ್ಲಿ ಅನ್ನ ಸಂತರ್ಪಣೆ ಜರಗಿತು.

     ಪಕ್ಕದ  ಮಹಾದೇವ ಮಂದಿರದಲ್ಲಿ  ಜರಗಿದ ಸೀಯಾಳ ಹಾಗೂ ಪಂಚಾಮೃತದ   ರುದ್ರಾಭಿಷೇಕದ ಬಳಿಕ   ಕಳಶ ವಿಸರ್ಜನೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.  ಕಾರ್ಯಕ್ರಮದಲ್ಲಿ ಸ್ಥಳೀಯ ಮರಾ ಠಿ ಭಾಷಿಕರೂ ಸೇರಿದಂತೆ ತುಳು ಕನ್ನಡಿಗ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಚಿತ್ರ ಹಾಗೂ ವರದಿ : ಪಿ.ಆರ್.ರವಿಶಂಕರ್

    Mob : 8483980035



Related posts

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ

Mumbai News Desk

ವಸಯಿ ತಾಲೂಕ ಹೋಟೆಲ್ ಎಸೋಸಿಯೇಶನಿಂದ  ಪ್ರತಿಭಟನೆ

Mumbai News Desk

ದಿಶಾ ಸಾಲ್ಯಾನ್ ಅವರ ತಂದೆಯ ಅರ್ಜಿಯನ್ನು ಸೂಕ್ತ ಪೀಠದ ಮುಂದೆ ಇಡಲು ಬಾಂಬೆ ಹೈಕೋರ್ಟ್ ನಿರ್ದೇಶನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸಡಗರದ ದೀಪಾವಳಿ ಹಬ್ಬದ ಆಚರಣೆ

Mumbai News Desk

ನಟ ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು, ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Mumbai News Desk

ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಿದ ಮಂಗಳೂರಿನ ಸಹೋದರ, ಸಹೋದರಿಯರು.

Mumbai News Desk