July 23, 2026
Mumbai News Kannada
ಸುದ್ದಿ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.







ಚಿತ್ರ ಹಾಗೂ ವರದಿ : ಪಿ.ಆರ್.ರವಿಶಂಕರ್

    ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಶೃದ್ದಾಕೇಂದ್ರವೆನಿಸಿದ ಬೊಯಿಸರ್ ನ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿನ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನದ ಸಂಪನ್ನ ಪೂಜೆಯು ಇದೇ   ಸೋಮವಾರ ತಾ.05 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

    ಪಕ್ಕದ  ಶ್ರೀ ರಾಮ ಮಂದಿರದಲ್ಲಿ ದೀಪಪ್ರಜ್ವಲನೆಯ  ಮೂಲಕ ಕಾರ್ಯಕ್ರಮ ಆರಂಭಗೊಂಡು ನಿತ್ಯಾನಂದ ಮಂದಿರದ ಆವರಣದಲ್ಲಿ ಜರಗಿದ ಕಲಶ ಪೂಜೆ ,   ದೀಪಾರಾಧನೆ , ಷೋಡಶ ಪೂಜೆ  ಹಾಗೂ ದುರ್ಗಾ ಅಷ್ಟೋತ್ತರ ನಾಮಾರ್ಚನೆ ಹಾಗೂ ಸಂಪನ್ನ ಜಪವನ್ನು   ಜಾತಿಭಾಷಾ ಭೇದವಿಲ್ಲದೆಯೇ ಭಾಗವಹಿಸಿದ ಭಕ್ತಾಭಿಮಾನಿಗಳು   ನೆರವೇರಿಸಿದರು.

ಶ್ರೀ ಬಾಬಾ ನಿತ್ಯಾನಂದರ ಆರತಿಯ ಬಳಿಕ ಪ್ರಸಾದರೂಪದಲ್ಲಿ ಅನ್ನ ಸಂತರ್ಪಣೆ ಜರಗಿತು.

     ಪಕ್ಕದ  ಮಹಾದೇವ ಮಂದಿರದಲ್ಲಿ  ಜರಗಿದ ಸೀಯಾಳ ಹಾಗೂ ಪಂಚಾಮೃತದ   ರುದ್ರಾಭಿಷೇಕದ ಬಳಿಕ   ಕಳಶ ವಿಸರ್ಜನೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.  ಕಾರ್ಯಕ್ರಮದಲ್ಲಿ ಸ್ಥಳೀಯ ಮರಾ ಠಿ ಭಾಷಿಕರೂ ಸೇರಿದಂತೆ ತುಳು ಕನ್ನಡಿಗ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಚಿತ್ರ ಹಾಗೂ ವರದಿ : ಪಿ.ಆರ್.ರವಿಶಂಕರ್

    Mob : 8483980035



Related posts

ಶೆರೋನ್ ಶೆಟ್ಟಿ ಐಕಳರವರ ಮಹಾಕುಂಭಾಶ್ವಮೇಧ ಕೃತಿ ಬಿಡುಗಡೆ ಸಮಾರಂಭ

Mumbai News Desk

ಮಲಾಡ್ ಪೂರ್ವ:ವಿನುತಾ ರಾವ್ (ರೇಖಾ) ನಿಧನ.

Mumbai News Desk

ಬಿಹಾರ ಚುನಾವಣಾ ಫಲಿತಾಂಶ 2025 : ಭರ್ಜರಿ ಗೆಲುವಿನತ್ತ ಎನ್ ಡಿ ಎ, ಇಂಡಿಯಾ ಬಣ, ಪ್ರಶಾಂತ್ ಕಿಶೋರ್ ಗೆ ಮುಖಭಂಗ

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರದ ಗೌ ಅಧ್ಯಕ್ಷ, , ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಸುರೇಶ್ ಎಸ್.ಪೂಜಾರಿ ಪಡುಕೋಣೆ ವಿಧಿವಶ.

Mumbai News Desk

ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ “ಲೀಡಿಂಗ್ ಬ್ಯಾಂಕ್ ಅವಾರ್ಡ್ “

Mumbai News Desk