30 C
Mumbai
April 24, 2026
Mumbai News Kannada
ಪ್ರಕಟಣೆ

ಫೆ. 10ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ





ಬೆಳ್ಮಣ್: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರ ಶನಿವಾರದಂದು ಸಾಯಂಕಾಲ ಗಂಟೆ 4.00ರಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರಗಲಿದೆ.
ರಾತ್ರಿ ಗಂಟೆ 7.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 7.30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ರಾತ್ರಿ ಗಂಟೆ 8.00ರಿಂದ “ಸಂತ ಸಮಾಗಮ” ಧಾರ್ಮಿಕ ಸಭೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಒಡಿಯೂರು ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಭಾರತಭೂಷಣ ಚಾರುಕೀರ್ತಿ ಭಟ್ಟಾರಕ ಪಂಡಿತಾಚರ್ಯವರ್ಯ ಮಹಾ ಸ್ವಾಮೀಜಿ, ಶ್ರೀಧಾಮ ಮಾಣಿಲ ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ, ಗುರುಪುರ ಕ್ಷೇತ್ರ ವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಶ್ರೀ ಕ್ಷೇತ್ರ ಬಲ್ಯೊಟ್ಟು ಮಠದ ಪರಮಪೂಜ್ಯ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ, ಗುರುಪುರ ಜಂಗಮ ಮಠದ ಪರಮಪೂಜ್ಯ ಶ್ರೀ ಶ್ರೀ ಮ.ನಿ.ಪ್ರ. ರುದ್ರಮುನಿ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಕರಿಂಜೆ ಓಂ ಶ್ರೀ ಗುರುಮಠದ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಪರಮಪೂಜ್ಯ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿಶ್ವ ಹಿಂದು ಪರಿಷತ್‌ನ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಧಾರ್ಮಿಕ ಭಾಷಣ ಮಾಡಲಿದ್ದು, ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ.
ರಾತ್ರಿ ಗಂಟೆ 10.00ರಿಂದ ಅಮ್ಮ ಕಲಾವಿದೆರ್ ಕುಡ್ಲ ಇವರಿಂದ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಮತ್ತು ರಂಗ್‌ದ ರಾಜೆ ಸುಂದರ್ ರೈ ಅಭಿನಯದ ‘ಅಮ್ಮೆರ್’ ತುಳು ಹಾಸ್ಯಮಯ ನಾಟಕ ಜರುಗಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಹರೀಶ್ ಸಚ್ಚೇರಿಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಕರ್ನಿರೆ ಶ್ರೀ ದೈವರಾಜ ಕೋರ್ದಬ್ಬು ದೇವಸ್ಥಾನ: ಮಾರ್ಚ್ 25 ರಿಂದ 29 ರವರೆಗೆ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಫೆಬ್ರವರಿ 14 ರಂದು 19ನೇ ವರ್ಷದ ಶ್ರೀ ಶನೀಶ್ವರ ಮಹಾಪೂಜೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಮಾಲಾಡ್ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗ, ಪೆ 18ರಂದು   ಅರಶಿನ ಕುಂಕುಮ

Mumbai News Desk

ಆ. 3 ರಿಂದ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇಲ್ಲಿ ನವರಾತ್ರಿ ಉತ್ಸವ.

Mumbai News Desk

ಡಿ. 03. ಥಾಣೆಯಲ್ಲಿ ಪ್ರಸಾದ್ ಪೂಜಾರಿ ಕಲ್ಯಾ ಇವರ ಸೇವೆಯಲ್ಲಿ ಮಂತ್ರ ದೇವತೆಯ 6ನೇ ವಾರ್ಷಿಕ ಪೂಜೆ ಹಾಗೂ ನೇಮೋತ್ಸವ

Mumbai News Desk