July 27, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ ಸಯನ್ – ಫೆ.10ರಂದು ಹಳದಿ ಕುಂಕುಮ ಕಾರ್ಯಕ್ರಮ








ಸಯನ್ ಪರಿಸರದ ತುಳು-ಕನ್ನಡಿಗರ ಸಂಘಟನೆ ಕರ್ನಾಟಕ ಸಂಘ ಸಯನ್ ಇದರ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮವು ಫೆಬ್ರವರಿ 10 ರಂದು, ಶನಿವಾರ ಸಂಜೆ 4 ಗಂಟೆಗೆ ಸಯನ್ ಪೂರ್ವದ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ನಡೆಯಲಿದೆ.
ಅಂದು ಸಂಜೆ 4 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ, 5 ಗಂಟೆಗೆ ಭಜನೆ, ನಂತರ ಹಳದಿ ಕುಂಕುಮ, ಕಿರು ಸಭಾ ಕಾರ್ಯಕ್ರಮ ಜರಗಲಿದೆ.
ಮುಖ್ಯ ಅತಿಥಿಗಳಾಗಿ ಖ್ಯಾತ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರ ಧರ್ಮಪತ್ನಿ ಗೀತಾ ಎಸ್ ಶೆಟ್ಟಿ, ಸಮಾಜ ಸೇವಕಿ, ಮುಂಬಯಿ ಕನ್ನಡ ಸಂಘದ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ರಜನಿ ಪೈ, ಡಾ. ಶ್ರುತಿ ದಿನೇಶ್ ಶೆಟ್ಟಿ (O. B. G. Y, IVF(SS) ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.
ಸಂಘದ ಗೌರವ ಅಧ್ಯಕ್ಷ ಜಯರಾಮ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ,ಡಾ. ಪ್ರವೀಣ್ ಭಟ್ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.
ಸಂಘದ ಪದಾಧಿಕಾರಿಗಳು, ಸದಸ್ಯರು, ಪರಿಸರದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ, ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು ವಿನಂತಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಡಾ. ಜಿ. ಪಿ. ಕುಸುಮ(ಗೌರವ ಕಾರ್ಯದರ್ಶಿ )ಅವರನ್ನು 8779660901 ಶ್ರೀಮತಿ ತೇಜಾಕ್ಷಿ (ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ )ಅವರನ್ನು 9930285766 ಮೂಲಕ ಸಂಪರ್ಕಿಸಬಹುದು.



Related posts

ಜ.20 ಕ್ಕೆ ಉಡುಪಿಯಲ್ಲಿ ಡೈಕಿನ್ ಸೊಲ್ಯೂಷನ್ ಪ್ಲಾಜ ಷೋರೂಮ್ ಶುಭಾರಂಭ

Mumbai News Desk

ಜ.13ಕ್ಕೆ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 63ನೇ ವಾರ್ಷಿಕ ದಿನಾಚರಣೆ

Mumbai News Desk

ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಜುಪಾಡ, ಕುರ್ಲಾ (ಪ ) : ಅ.25ರಂದು ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Mumbai News Desk

ಶಹಾಡ್: ಇಂದು (ಜುಲೈ 17)’ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ

Mumbai News Desk

  ನಾಳೆ  (ಡಿ. 25) ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk