32 C
Mumbai
March 7, 2026
Mumbai News Kannada
ಪ್ರಕಟಣೆ

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.





ಮುಂಬೈ ಕನ್ನಡ ಲೇಖಕಿಯರ ಬಳಗ ಸೃಜನಾ ಮುಂಬಯಿ ಇದರ ವತಿಯಿಂದ ಸಾಹಿತ್ಯ ವಿಮರ್ಶೆ, ಕ್ರತಿ ಬಿಡುಗಡೆ ಹಾಗೂ ಜನಪದ ಹಾಡುಗಳ ಪ್ರಸ್ತುತಿ ಕಾರ್ಯಕ್ರಮವು ಫೆಬ್ರವರಿ 17ರಂದು ಶನಿವಾರ, ಸಂಜೆ 4 ರಿಂದ, ಮಾಟುಂಗಾ ಪೂರ್ವ ಮೈಸೂರು ಅಸೋಸಿಯೇಷನ್ನ ನ ಮೊದಲನೇ ಮಹಡಿಯ ಕಿರು ಸಭಾಗ್ರಹದಲ್ಲಿ ಜರಗಲಿದೆ.

ಅಂದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪತ್ರಕರ್ತ,ಸಾಂಸ್ಕೃತಿಕ ಸಂಘಟಕ ದಯಾಸಾಗರ ಚೌಟ, ಗೌರವ ಅತಿಥಿಯಾಗಿ ಸ್ಪರೋ ದ ನಿರ್ದೇಶಕಿ, ಡಾ. ಸಿ ಎಸ್ ಲಕ್ಷ್ಮಿ, ಆಗಮಿಸಲಿದ್ದು ಸೃಜನಾ ದ ಸಂಚಾಲಕಿ ಪದ್ಮಜಾ ಮಣ್ಣೂರ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಅಂದು ಮುಂಬೈ ಖ್ಯಾತ ಲೇಖಕಿ,ಅನುವಾದಕಿ,ಸೃಜನಾದ ಮಾಜಿ ಸಂಚಾಲಕಿ ಶಾಮಲಾ ಮಾಧವ್ ಅವರ ಎರಡು ಕೃತಿಗಳು ಲೋಕಾರ್ಪಣೆಗೊಳ್ಳಲಿದೆ.
ಸಾಹಿತಿ,ಅಕ್ಷಯ ಮಾಸಿಕದ ಮುಖ್ಯ ಸಂಪಾದಕ ಡಾ. ಈಶ್ವರ ಅಲೆಯೂರು ವಿಮರ್ಶೆಯ ಕುರಿತು ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭ ಸೃಜನಾದ ಸದಸ್ಯರಿಂದ ಜನಪದ ಹಾಡುಗಳ ಪ್ರಸ್ತುತಿ ನಡೆಯಲಿದೆ.
ಸಾಹಿತ್ಯ ಪ್ರೇಮಿಗಳು,ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೃಜನಾ ಮುಂಬೈ ಕನ್ನಡ ಲೇಖಕಿಯರ ಬಳಗದವರು ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ನ 26 : ಕರ್ನಾಟಕ ಸಂಘ ಪನ್ವೆಲ್. ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಅ. 5 ರಂದು ಸಾಂತಾಕ್ರೂಸ್ ಪೇಜಾವರ ಮಠದಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಜೂನ್ 15: ಶ್ರೀ ಭುವನೇಶ್ವರಿ ಸೇವಾ ಸಮಿತಿ ಕೋಟೆ, ಮುಂಬಯಿ – 42ನೇ ವಾರ್ಷಿಕ ಮಹಾಪೂಜೆ

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ, ಫೆ.10ರಂದು ಬೆಳ್ಳಿಹಬ್ಬದ ಅಂಗವಾಗಿ ಶ್ರೀ ಶನಿ ಮಹಾಪೂ ಜೆ.

Mumbai News Desk

ಬೊಂಬೇ ಬಂಟ್ಸ್ ಅಸೋಷಿಯೇಶನ್ ಮಹಿಳಾ ವಿಭಾಗ, ಜೂ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk