September 6, 2026
Mumbai News Kannada
ಮುಂಬಯಿ

ಭಾಂಡುಪ್ ಪಿಂಪಾಲೇಶ್ವರ ಮಹಾದೇವ ಮಂದಿರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ.





ಚಿತ್ರ, ವರದಿ : ಧನಂಜಯ ಪೂಜಾರಿ

ಮುಂಬಯಿ ಉಪನಗರ ಭಾಂಡುಪ್ ಪಶ್ಚಿಮದ ಬ್ಯಾಂಕ್ ಆಫ್ ಬರೋಡ ಸ್ಟಾಪ್ ಕ್ವಾರ್ಟರ್ಸ್ ನ ಹತ್ತಿರದ ಶ್ರೀ ಶನೀಶ್ವರ ಭಕ್ತ ವೃಂದ ಮಿತ್ರ ಮಂಡಳಿಯ ಪಿಂಪಾಲೇಶ್ವರ ಮಹಾದೇವ ಮಂದಿರದ ಜೀರ್ಣೋದ್ಧಾರದ ಭವ್ಯ ಉದ್ಘಾಟನ ಸಮಾರಂಭ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಫೆಬ್ರವರಿ 19 ನೇ ಸೋಮವಾರ ದಿಂದ ಫೆಬ್ರವರಿ 24 ರ ಶನಿವಾರದ ವರಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆಯುತ್ತಿದ್ದು ಮೊದಲನೆ ದಿನ ಫೆಬ್ರವರಿ 19 ರ ಸೋಮವಾರ ಸಂಜೆ ಪುರೋಹಿತೆರಾದ ರಮಣಿ ಶರ್ಮಾ ಹಾಗೂ ಶ್ರೀರಾಮ್ ಶರ್ಮಾ ಇವರ ನೇತೃತ್ವದಲ್ಲಿ ಗಣಪತಿ ಪೂಜೆ, ವಾಸ್ತು ಪೂಜೆ, ತೋರಣ ಪ್ರತಿಷ್ಠೆ, ಉಗ್ರಾಣ ಪೂಜೆ, ಹೋಮ, ನಡೆಯಿತು. ಅನೇಕ ಭಕ್ತರು ಈ ಪೂಜೆಯಲ್ಲಿ ಪಾಲ್ಗೊಂಡು ತೀರ್ಥ ಪ್ರಸಾದ ಸ್ವೀಕರಿಸಿದರು.

.

ರಾತ್ರಿ ಶ್ರೀ ಕೃಷ್ಣ ಪ್ರಸಾದಿತ ಭಜನಾ ಮಂಡಳಿ, ಶ್ರೀ ನಿತ್ಯಾನಂದ ಮಂದಿರ, ಭಾಂಡುಪ್ ಇವರಿಂದ ಭಜನೆ ನಡೆಯಿತು.

ಗೌರವ ಅಧ್ಯಕ್ಷರಾದ ಶ್ಯಾಮ್ ಪ್ಯಾರೆ ಯಾದವ್, ಅಧ್ಯಕ್ಷರಾದ ಕಿಶೋರ್ ಅರ್ ಸಾಲ್ಯಾನ್, ಉಪಾಧ್ಯಕ್ಷರಾದ ನಿತಿನ್ ಸಾವಂತ್, ಪ್ರಧಾನ ಕಾರ್ಯದರ್ಶಿ ಜಯಕುಮಾರ್ ಕೆ ಸಾಲ್ಯಾನ್, ಕೋಶಾಧಿಕಾರಿ ಕಿಶೋರ್ ಎನ್ ಬಂಗೇರ, ಸ್ಥಾಪಕ ಸದಸ್ಯರಾದ ಸದಾನಂದ ಬಂಗೇರ, ನಾರಾಯಣ ಸುವರ್ಣ, ಸಿ ಲಕ್ಷ್ಮಣ್, ಹಾಗೂ ಎಲ್ಲಾ ಸದಸ್ಯರು ಪೂಜೆಯಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.



Related posts

ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಧಾರ್ಮಿಕ ಸಭೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ. ರಿಷಿತಾ ಹರಿಶ್ಚಂದ್ರ ಕುಲಾಲ್ ಶೇಕಡಾ: 90% ಅಂಕ.

Mumbai News Desk

ಶ್ರೀ ರಜಕ ಸಂಘ ಡೊಂಬಿವಲಿ ವಲಯದ ವತಿಯಿಂದ ಸಂಭ್ರಮದ ‘ಆಟಿಡ್ ಒಂಜಿ ದಿನ’ ಕಾರ್ಯಕ್ರಮ

Mumbai News Desk

*ದಿ. ಜ್ಯೋತಿ ಸುವರ್ಣರಿಗೆ  ಶ್ರದ್ಧಾಂಜಲಿ ಸಭೆ.

Mumbai News Desk

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ, 

Mumbai News Desk

ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಪ್ರವೇಶ ದ್ವಾರದಲ್ಲಿ ವಾಲ್ ಅಫ್ ಹೇಪಿನೆಸ್ ಉದ್ಘಾಟನೆ.

Mumbai News Desk